Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರದಲ್ಲಿ ಮಕ್ಕಳ ಅಶ್ಲೀಲ ಚಿತ್ರಗಳ ದಂಧೆ ಜಾಲ ಸಕ್ರಿಯ, ಇವುಗಳನ್ನ ನೋಡಿದ್ರೆ ಮನೆಗೆ ಹುಡುಕಿಕೊಂಡು ಬರ್ತಾರೆ ಪೊಲೀಸ್ರು!

ವಯಸ್ಕರ ಪಾರ್ನ್‌ವೆಬ್‌ ಸೈಟ್‌ಗಳು ಮಾತ್ರವಲ್ಲ ಮಕ್ಕಳ ಅಶ್ಲೀಲ ಚಿತ್ರಗಳು ವೆಬ್‌ಸೈಟ್‌ಗಳು ಇಂಟರ್​ನೆಟ್​ನಲ್ಲಿ ದಂಡಿಯಾಗಿವೆ. ಮಕ್ಕಳ ಅಶ್ಲೀಲ ಚಿತ್ರಗಳ ದಂಧೆ ಸಮಾಜಕ್ಕೆ ಮಾರಕವಾಗಿ ಪರಿಣಮಿಸಿದೆ. ಕರ್ನಾಟಕದಲ್ಲೂ ಇದರ ಹಾವಳಿ ಮಿತಿ ಮೀರಿದ್ದು, ವಿಜಯಪುರ ಜಿಲ್ಲೆಯಲ್ಲಿ ಇದರ ಜಾಲ ಸಕ್ರಿಯವಾಗಿದೆ. ಹೀಗಾಗಿ ವಿಡಿಯೋಗಳನ್ನು ಡೌನ್‌ಲೋಡ್ ಮಾಡಿದ ಮತ್ತು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ ಆರೋಪದಲ್ಲಿ ವಿಜಯಪುರದಲ್ಲಿ 13 ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ವಿಜಯಪುರದಲ್ಲಿ ಮಕ್ಕಳ ಅಶ್ಲೀಲ ಚಿತ್ರಗಳ ದಂಧೆ ಜಾಲ ಸಕ್ರಿಯ, ಇವುಗಳನ್ನ ನೋಡಿದ್ರೆ ಮನೆಗೆ ಹುಡುಕಿಕೊಂಡು ಬರ್ತಾರೆ ಪೊಲೀಸ್ರು!
ಸಾಂದರ್ಭಿಕ ಚಿತ್ರ
Follow us
ಅಶೋಕ ಯಡಳ್ಳಿ, ವಿಜಯಪುರ
| Updated By: ರಮೇಶ್ ಬಿ. ಜವಳಗೇರಾ

Updated on: Aug 18, 2023 | 8:50 AM

ವಿಜಯಪುರ, (ಆಗಸ್ಟ್ 18): ಇದು ಸೋಷಿಯಲ್ ಮೀಡಿಯಾ (Social Media) ಯುಗ. ಮೊಬೈಲ್,(Mobile Phone) ಇಂಟರ್​ನೆಟ್​ (Internet)ಬಂದಾಗಿನಿಂದ ಇಡೀ ಜಗತ್ತೇ ಅಂಗೈಯಲ್ಲಿದೆ. ಬೇಕಿದ್ದು. ಬೇಡದ್ದು ಎಲ್ಲವೂ ಇಂಟರ್​ನೆಟ್​ನಲ್ಲಿ ಸಿಗುತ್ತೆ. ಅದರಲ್ಲೂ ಅಶ್ಲೀಲ ಚಿತ್ರಗಳ ವೆಬ್‌ಸೈಟ್‌ಗಳ ಹಾವಳಿ ಮಿತಿ ಮೀರಿದೆ. ವಯಸ್ಕರ ಪಾರ್ನ್‌ವೆಬ್‌ ಸೈಟ್‌ಗಳು ಮಾತ್ರವಲ್ಲ ಮಕ್ಕಳ ಅಶ್ಲೀಲ ಚಿತ್ರಗಳು ವೆಬ್‌ಸೈಟ್‌ಗಳು ಇಂಟರ್​ನೆಟ್​ನಲ್ಲಿ ದಂಡಿಯಾಗಿವೆ. ಮಕ್ಕಳ ಅಶ್ಲೀಲ ಚಿತ್ರಗಳ ದಂಧೆ ಸಮಾಜಕ್ಕೆ ಮಾರಕವಾಗಿ ಪರಿಣಮಿಸಿದೆ. ಕರ್ನಾಟಕದಲ್ಲೂ (Karnataka) ಇದರ ಹಾವಳಿ ಮಿತಿ ಮೀರಿದ್ದು, ವಿಜಯಪುರ ಜಿಲ್ಲೆಯಲ್ಲಿ ಇದರ ಜಾಲ ಸಕ್ರಿಯವಾಗಿದೆ.

ವಿಜಯಪುರದಲ್ಲಿ ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್‌ಲೋಡ್‌ ಮಾಡಿ ಹರಿಬಿಡಲಾಗುತ್ತಿದೆ. ಅಪ್ರಾಪ್ತ ಮಕ್ಕಳು ತಮಗಿಂತ ಹಿರಿಯರಾದ ಪುರುಷ ಇಲ್ಲವೇ ಮಹಿಳೆಯೊಂದಿಗೆ ನಡೆಸಿದ ಲೈಂಗಿಕ ಕ್ರಿಯೆಯ ವಿಡಿಯೋವನ್ನು ಯೂಟ್ಯೂಬ್, ವಿವಿಧ ಪೋರ್ನ್‌ ಸೈಟ್‌ಗಳು, ಇನ್ಸ್ಟಾಗ್ರಾಮ್, ಫೇಸ್‌ಬುಕ್, ಟ್ವಿಟರ್ ಸೇರಿ ಇತರೆ ಸಾಮಾಜಿಕ ಜಾಲ ತಾಣಗಳಲ್ಲಿ ಅಪ್ ಲೋಡ್ ಮಾಡುತ್ತಾರೆ. ಇದು ಅಪರಾಧ ಕೃತ್ಯವಾಗಿದೆ. ಇಂಥ ವಿಡಿಯೋಗಳನ್ನು ಸಾಮಾಜಿಕ ಜಾಲ ತಾಣಗಳಿಂದ ಡೌನ್ ಲೋಡ್ ಮಾಡಿಕೊಳ್ಳುವುದು ಹಾಗೂ ನಂತರ ಅವುಗಳನ್ನು ಸಾಮಾಜಿಕ ಜಾಲ ತಾಣಗಳಲ್ಲಿ ಅಪ್ ಲೋಡ್ ಮಾಡುವುದು ಶಿಕ್ಷಾರ್ಹ ಅಪರಾಧ. ವಿಜಯಪುರ ಜಿಲ್ಲೆಯಲ್ಲಿ ಇದರ ಜಾಲ ಸಕ್ರಿಯವಾಗಿದೆ.

ಇದನ್ನೂ ಓದಿ: ಅಂತಾರಾಷ್ಟ್ರೀಯ ಅಮೆಜಾನ್ ಕಂಪನಿಗೆ ಹ್ಯಾಕರ್​ಗಳ ಕಂಟಕ: ಯಶವಂತಪುರ ಪೊಲೀಸರ ತನಿಖೆ ವೇಳೆ ಕಳ್ಳಾಟ ಬಯಲು

ಇನ್ನು ಚೈಲ್ಡ್‌ ಪೋರ್ನೋಗ್ರಫಿ ವಿಡಿಯೋಗಳನ್ನು ಡೌನ್‌ಲೋಡ್ ಮಾಡಿದ ಮತ್ತು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ ಆರೋಪದಲ್ಲಿ ವಿಜಯಪುರದಲ್ಲಿ 13 ಆರೋಪಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ನ್ಯಾಷನಲ್ ಸೆಂಟರ್ ಆಫ್ ಮಿಸ್ಸಿಂಗ್ ಆ್ಯಂಡ್ ಎಕ್ಸಪ್ಲೋಟೆಡ್ ಚಿಲ್ಡರ್ನ್ ತಂಡ ಸೈಬರ್ ಟ್ರಿಪ್ ಲೈನ್ ರಿಪೋರ್ಟ್‌ಅನ್ನು ಆಯಾ ರಾಜ್ಯದ ಸಿಐಡಿ ಘಟಕಕ್ಕೆ ಹಸ್ತಾಂತರಿಸುತ್ತಾರೆ.

ಸಿಐಡಿ ತಂಡ ಆಯಾ ಜಿಲ್ಲೆಗಳ ಸಿಇಎನ್ ಪೊಲೀಸರಿಗೆ ಮಾಹಿತಿ ನೀಡುತ್ತಾರೆ.ಯಾರ್ಯಾರು ಚೈಲ್ಡ್ ಪೋರ್ನೋಗ್ರಾಫಿ ಡೌನ್ ಲೋಡ್ ಹಾಗೂ ಅಪ್ ಲೋಡ್ ಮಾಡುತ್ತಾರೆ ಅವರ ಐಪಿ ಅಡ್ರೆಸ್ ಪೋನ್ ನಂಬರ್, ಸಾಮಾಜಿಕ ಜಾಲ ತಾಣಗಳ ಐಡಿಗಳನ್ನು ಸರ್ಚ್ ಮಾಡಿ ಅವರನ್ನು ಪತ್ತೆ ಮಾಡುತ್ತಾರೆ. ಅದೇ ರೀತಿ ವಿಜಯಪುರದಲ್ಲಿ 13ಮಂದಿ ವಿರುದ್ಧ ಕೇಸ್ ದಾಖಲಿಸಲಾಗಿದೆ. ಇಂತಹ ಪ್ರಕರಣದಲ್ಲಿ ಬಂಧಿತರಾದವರಿಗೆ ಸುಲಭವಾಗಿ ಜಾಮಿನು ಪಡೆಯುವ ಅವಕಾಶವಿದೆ. ಇದು ಸಹ ಸಮಸ್ಯೆ ಬೆಳೆಯಲು ಕಾರಣವಾಗುತ್ತದೆ. ಆದ್ದರಿಂದ ಫೋಕ್ಸೋದಂತಹ ಕಾನೂನು ಇದಕ್ಕೆ ಅನ್ವಯ ಮಾಡಬೇಕೆಂದು ಜನರು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಜಯಪುರ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು