ಸಚಿವ ಎಂಬಿ ಪಾಟೀಲ್ ಪರ ರಂಭಾಪುರಿ ಶ್ರೀ ಬ್ಯಾಟಿಂಗ್: ಸಿದ್ದರಾಮಯ್ಯ ವಿರುದ್ಧ ಅಸಮಾಧಾನ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಳವಾಟ ಗ್ರಾಮದಲ್ಲಿ ಮಾತನಾಡಿದ ರಂಭಾಪುರಿ ಪೀಠದ ವೀರಸೋಮೇಶ್ವರ ಸ್ವಾಮೀಜಿ, ಸಚಿವ ಎಂಬಿ ಪಾಟೀಲ್​ ಅವರನ್ನು ಹಾಡಿಹೊಗಳಿದ್ದಾರೆ. ಜಲಸಂಪನ್ಮೂಲ ಖಾತೆ ನೀಡದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಚಿವ ಎಂಬಿ ಪಾಟೀಲ್ ಪರ ರಂಭಾಪುರಿ ಶ್ರೀ ಬ್ಯಾಟಿಂಗ್: ಸಿದ್ದರಾಮಯ್ಯ ವಿರುದ್ಧ ಅಸಮಾಧಾನ
ರಂಭಾಪುರಿ ಶ್ರೀ
Edited By:

Updated on: Dec 10, 2023 | 4:32 PM

ವಿಜಯಪುರ, ಡಿಸೆಂಬರ್​​ 10: ಈ ಬಾರಿ ಸರ್ಕಾರದಲ್ಲಿ ಎಂಬಿ ಪಾಟೀಲ್ (MB Patil)​ ಅವರಿಗೆ ಜಲಸಂಪನ್ಮೂಲ ಖಾತೆ ಸಿಗುತ್ತೆ ಅಂತ ಬಹಳ ಆಸೆ ಇಟ್ಟುಕೊಂಡಿದ್ದೇವು. ಆದರೆ ಅದು ಬೇರೆಯವರ ಪಾಲಾಯಿತು. ಸಿಎಂ ಸಿದ್ದರಾಮಯ್ಯ ಅವರು ಅವಕಾಶ ಕೊಡಲಿಲ್ಲ ಎಂದು ರಂಭಾಪುರಿ ಪೀಠದ ವೀರಸೋಮೇಶ್ವರ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಳವಾಟ ಗ್ರಾಮದಲ್ಲಿ ಮಾತನಾಡಿದ ಅವರು, ಕರ್ನಾಟಕ ಸರ್ಕಾರದಲ್ಲಿ ಬೃಹತ್ ಕೈಗಾರಿಕಾ ಸಚಿವರಾಗಿ ಎರಡನೇ ಸ್ಥಾನದಲ್ಲಿ ಎಂಬಿ ಪಾಟೀಲ್ ಮುನ್ನಡೆಯುತ್ತಿದ್ದಾರೆ ಎಂದು ಹೊಗಳಿದ್ದಾರೆ.

ಕೈಗಾರಿಕೆಯಿಂದ ರಾಜ್ಯ, ಜಿಲ್ಲೆಯಲ್ಲಿ ಏನೇನು ಮಾಡಬೇಕು ಅದನ್ನು ಮಾಡಲು ಭದ್ರವಾದ ಬುನಾದಿ ಹಾಕುತ್ತಿದ್ದಾರೆ. ವಿದೇಶದಿಂದ ಹೆಚ್ಚಿನ ನೆರವು ತರುತ್ತಿದ್ದಾರೆ. ಹಿಂದೆ ಜಲಸಂಪನ್ಮೂಲ ಸಚಿವರಿದ್ದಾಗ ಬಹಳ ದೊಡ್ಡ ಕೆಲಸ ಮಾಡಿದ್ದಾರೆ. ಜಿಲ್ಲೆಯ ಎಲ್ಲಾ ಭಾಗದಲ್ಲಿ ಕೆರೆ ತುಂಬುವ ಕೆಲಸ ಮಾಡಿದ್ದು ದೊಡ್ಡ ಕೆಲಸ. ಇವತ್ತು ಬಹಳ ಮಳೆ ಆಗದೇ ಇದ್ದರೂ ಇಲ್ಲಿ ಹಸಿರು ನೋಡಿದರೆ, ಎಲ್ಲಾ ಕೆರೆ ತುಂಬಿದ ಪರಿಣಾಮದಿಂದಲೇ ಅಂತರ್ಜಲ ಹೆಚ್ಚಾಗಿ ಬೋರ್ವೆಲ್​ನಲ್ಲಿ ನೀರಿದೆ. ಫಸಲು ಬೆಳೆಯಲು ಸಾಧ್ಯವಾಗಿದೆ ಎಂದಿದ್ದಾರೆ.

ಅನುದಾನ ಕೊಡದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ರಂಭಾಪುರಿ ಶ್ರೀ

ರೇಣುಕಾಚಾರ್ಯ ಶಿಲಾ ಮಂಟಪಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಕೊಡದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ರಂಭಾಪುರಿ ಶ್ರೀ, ಬಾಳೆ ಹೊನ್ನೂರು ಧರ್ಮ ಪೀಠದಲ್ಲಿ 51 ಅಡಿ ಎತ್ತರದ ಜಗದ್ಗುರು ರೇಣುಕಾಚಾರ್ಯರ ಶಿಲಾ ಮಂಟಪ ನಿರ್ಮಾಣ ಮಾಡಲಾಗುತ್ತಿದೆ. ಈಗಾಗಲೇ ಮೂರು ಬೃಹತ್ ಶಿಲೆಗಳು ಬಂದಿವೆ. ಶಿಲ್ಪಿಗಳು ಕೆಲಸ ಮಾಡುತ್ತಿದ್ದಾರೆ. 36 ಅಡಿ ಎತ್ತರ 22 ಅಗಲದ ಕಲ್ಲು ಆಂಧ್ರದಿಂದ ವರ್ಷದ ಕೊನೆ ಹಂತದಲ್ಲಿ ಬರಲಿದೆ. 12 ಕೋಟಿ ರೂ. ಯೋಜನೆ ಅದು. ಬಿಎಸ್​ ಯಡಿಯೂರಪ್ಪ ಸಿಎಂ ಆಗಿದ್ದಾಗ ಐದು ಕೋಟಿ ರೂ. ಬಿಡುಗಡೆ ಮಾಡಿದ್ದರು.

ಇದನ್ನೂ ಓದಿ: ಜನತಾ ದಳದಲ್ಲಿದ್ದಾಗ ಮುಸಲ್ಮಾನರನ್ನು ಓಲೈಸುತ್ತಿದ್ದ ಬಸನಗೌಡ ಯತ್ನಾಳ್ ಬಿಜೆಪಿಗೆ ಪುನರ್ ಪ್ರವೇಶ ಪಡೆದು ದ್ವೇಷಿಸುತ್ತಿದ್ದಾರೆ: ಎಂಬಿ ಪಾಟೀಲ್

ಆಮೇಲೆ ಬಂದಂತಹ ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಆಗಲಿ, ಸದ್ಯ ಕಾಂಗ್ರೆಸ್ ಸರ್ಕಾರದ ಮುಖ್ಯಸ್ಥರಾಗಲಿ‌‌, ಯಾವುದೇ ರೀತಿ ಸ್ಪಂದಿಸದೇ ತಟಸ್ಥವಾಗಿ ಮುಂದುವರಿದ್ದಾರೆ‌. ಇಂತಹ ಸಂದರ್ಭದಲ್ಲಿ ನಿಗದಿಪಡಿಸಿದ ಕಾರ್ಯ ಮುಗಿಸಬೇಕು ಎನ್ನುವ ಸಂಕಲ್ಪ. ಭಕ್ತರ ಸಹಾಯ ಪಡೆದುಕೊಂಡು, ಪೀಠವೂ ಸ್ವಲ್ಪ ಹೊರೆ ಹೊತ್ತು, ಆ ಕಾರ್ಯ ಪೂರ್ಣಗೊಳಿಸಲು ಇಚ್ಛೆಪಟ್ಟಿದ್ದೇವೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:31 pm, Sun, 10 December 23

Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us