AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ: ಜ.12 ರಿಂದ ಸಿದ್ದೇಶ್ವರ ಜಾತ್ರೆ ಮಹೋತ್ಸವ; ಯಾವ ದಿನ ಏನೇನು ನಡೆಯಲಿದೆ? ಮಾಹಿತಿ ಇಲ್ಲಿದೆ

ವಿಜಯಪುರ ನಗರದ ಸಿದ್ದೇಶ್ವರ ಜಾತ್ರಾ‌ ಮಹೋತ್ಸವ ಜನವರಿ 12 ರಿಂದ ಆರಂಭವಾಗಲಿದ್ದು, 18ರ ವರೆಗೆ ನಡೆಯಲಿದೆ. ಜಾತ್ರಾ ಮಹೋತ್ಸವದ ಅಂಗವಾಗಿ ಆ ದಿನಗಳಂದು ವಿವಿಧ ಕಾರ್ಯಕ್ರಮಗಳನ್ನು ಪೂಜಾ ವಿಧಿವಿಧಾನಗಳು ನಡೆಯಲಿವೆ. ಕೊರೊನಾ ಹಾಗೂ ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯರಾದ ಕಾರಣ ಕಳೆದ ಮೂರು ವರ್ಷಗಳಿಂದ ಜಾತ್ರೆ ನಡೆಸಿರಲಿಲ್ಲ.

ವಿಜಯಪುರ: ಜ.12 ರಿಂದ ಸಿದ್ದೇಶ್ವರ ಜಾತ್ರೆ ಮಹೋತ್ಸವ; ಯಾವ ದಿನ ಏನೇನು ನಡೆಯಲಿದೆ? ಮಾಹಿತಿ ಇಲ್ಲಿದೆ
ಜನವರಿ 12 ರಿಂದ ಸಿದ್ದೇಶ್ವರ ಜಾತ್ರೆ ಮಹೋತ್ಸವ
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Jan 08, 2024 | 2:46 PM

Share

ವಿಜಯಪುರ, ಜ.8: ಕೊರೊನಾ ಹಾಗೂ ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯರಾದ ಕಾರಣ ಕಳೆದ ಮೂರು ವರ್ಷಗಳಿಂದ ನಗರದ ಸಿದ್ದೇಶ್ವರ ಜಾತ್ರಾ‌ ಮಹೋತ್ಸವ (Siddheshwar Fair) ನಡೆಸಿರಲಿಲ್ಲ. ಇದೀಗ ಜನವರಿ 12 ರಿಂದ ಜಾತ್ರೆ ಆರಂಭವಾಗಲಿದ್ದು, 18ರ ವರೆಗೆ ನಡೆಯಲಿದೆ. ಜಾತ್ರಾ ಮಹೋತ್ಸವದ ಅಂಗವಾಗಿ ಆ ದಿನಗಳಂದು ವಿವಿಧ ಕಾರ್ಯಕ್ರಮಗಳನ್ನು ಪೂಜಾ ವಿಧಿವಿಧಾನಗಳು ನಡೆಯಲಿವೆ.

ಜಾತ್ರಾ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದ ಜಾತ್ರಾ‌ ಉತ್ಸವ ಸಮೀತಿ ಅಧ್ಯಕ್ಷ ಗುರು ಗಚ್ಚಿನಮಠ, ಜನೇವರಿ 12 ರಂದು ಗೋಮಾತೆ ಪೂಜೆ ಹಾಗೂ ನಂದಿಧ್ವಜಗಳ ಮೆರವಣಿಗೆ ನಡೆಯಲಿದೆ. ಜನೇವರಿ 13 ರಂದು ಲಿಂಗದಗುಡಿಯಲ್ಲಿನ 770 ಲಿಂಗಗಳಿಗೆ ಎಣ್ಣೆ ಮಜ್ಜನ, ಜನೇವರಿ 14 ರಂದು ಅಕ್ಷತಾರ್ಪಣೆ ಹಾಗೂ ಭೋಗಿ ಕಾರ್ಯಕ್ರಮ ನಡೆಯಲಿದೆ ಎಂದರು.

ಇದನ್ನೂ ಓದಿ: ವಿಜಯಪುರದಲ್ಲಿ ಧರ್ಮ ದಂಗಲ್; ಸಿದ್ದೇಶ್ವರ ಜಾತ್ರೆಯಲ್ಲಿ ಮುಸ್ಲಿಮರಿಗೆ ವ್ಯಾಪಾರಕ್ಕೆ ಅವಕಾಶವಿಲ್ಲ ಎಂದು ಹಾಕಲಾಗಿದ್ದ ಬ್ಯಾನರ್ ತೆರವು

ಜನೇವರಿ 15 ರಂದು ಹೋಮ ಹವನ ಪಲ್ಲಕ್ಕಿ ಮೆರವಣಿಗೆ, ಜನೇವರಿ 16 ರಂದು ಮದ್ದು ಸುಡುವ ಕಾರ್ಯಕ್ರಮ, ಜನೇವರಿ 17 ರಂದು ಭಾರ ಎತ್ತುವ ಸ್ಪರ್ಧೆ, ಜನೇವರಿ 18 ರಂದು ಜಂಗೀ ನಿಕಾಲಿ ಕುಸ್ತಿ ಸ್ಪರ್ಧೆ ನಡೆಯಲಿದ್ದು, ರಾಜ್ಯ ರಾಷ್ಟ್ರ ಮಟ್ಟದ ಕುಸ್ತಿ ಪಟುಗಳು ಭಾಗಿಯಾಗಲಿದ್ದಾರೆ ಎಂದರು. ಈ ವೇಳೆ, ಸಿದ್ದೇಶ್ವರ ಸಂಸ್ಥೆಯ ಚೇರ್ಮನ್ ಬಸಯ್ಯ ಹಿರೇಮಠ, ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹಾಗೂ ಸಿದ್ದೇಶ್ವರ ಸಂಸ್ಥೆಯ ಪದಾಧಿಕಾರಿಗಳು ಇದ್ದರು.

ವ್ಯಾಪಾರ ಧರ್ಮ ದಂಗಲ್

ಧಾರ್ಮಿಕ ದತ್ತಿ ಕಾನೂನಿನ ಪ್ರಕಾರವೇ ಅನ್ಯ ಧರ್ಮೀಯರಿಗೆ ವ್ಯಾಪಾರದ ಅವಕಾಶ ಇಲ್ಲ ಅಂತ ವಾದಿಸಿ ಹಿಂದೂ ಸಂಘಟನೆಗಳು ಜಾತ್ರಾ ಮಹೋತ್ಸವಗಳಂದು ಅನ್ಯಕೋಮಿನವರಿಗೆ ವ್ಯಾಪಾರ ನಿಷೇಧಿಸಿ ಬ್ಯಾನರ್​ಗಳನ್ನು ಹಾಕುತ್ತಿವೆ. ಕರಾವಳಿಯಲ್ಲಿ ಆರಂಭವಾದ ಈ ವಿವಾದ ರಾಜ್ಯಾದ್ಯಂತ ಹಬ್ಬಿದ್ದು, ವಿಜಯಪುರ ಜಾತ್ರೆಯಲ್ಲೂ ಈ ರೀತಿಯ ಬ್ಯಾನರ್ ಕಾಣಿಸಿದೆ. ಬಳಿಕ ಪೊಲೀಸರ ನೆರವಿನಿಂದ ಸಿದ್ದೇಶ್ವರ ಸಂಸ್ಥೆಯ ಸಿಬ್ಬಂದಿ ಬ್ಯಾನರ್ ತೆರವುಗೊಳಿಸಿದ್ದಾರೆ. ಬ್ಯಾನರ್ ಮತ್ತೇ ಅದೇ ಸ್ಥಳದಲ್ಲಿ ಹಾಕಬೇಕೆಂದು ಶ್ರೀರಾಮ ಸೇನಾ ಸಂಘಟನೆ ಮುಖಂಡ ನೀಲಕಂಠ ಕಂದಗಲ್ ಒತ್ತಾಯಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಮೆರಿಕದ ಜೆಡಿ ವ್ಯಾನ್ಸ್​ಗೆ ಪಾಕಿಸ್ತಾನದ ಯುದ್ಧವಿಮಾನಗಳ ಬೆಂಗಾವಲು
ಅಮೆರಿಕದ ಜೆಡಿ ವ್ಯಾನ್ಸ್​ಗೆ ಪಾಕಿಸ್ತಾನದ ಯುದ್ಧವಿಮಾನಗಳ ಬೆಂಗಾವಲು
ಏಕಾಏಕಿ ಮಾಲಕಿಯ ಮೇಲೆ ಸಾಕು ಬೆಕ್ಕು ದಾಳಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಏಕಾಏಕಿ ಮಾಲಕಿಯ ಮೇಲೆ ಸಾಕು ಬೆಕ್ಕು ದಾಳಿ;ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
6,6,6,6,6,6.. ಅಭಿ ‘ಸಿಕ್ಸರ್‘ ಶರ್ಮಾ ದಾಖಲೆಯ ಇನ್ನಿಂಗ್ಸ್
6,6,6,6,6,6.. ಅಭಿ ‘ಸಿಕ್ಸರ್‘ ಶರ್ಮಾ ದಾಖಲೆಯ ಇನ್ನಿಂಗ್ಸ್
ದಾವಣಗೆರೆ ಬೈ-ಎಲೆಕ್ಷನ್: ಕಾಂಗ್ರೆಸ್​ನಲ್ಲಿ ಶುರುವಾಗಿದೆಯಾ ಕೋಲ್ಡ್ ವಾರ್?
ದಾವಣಗೆರೆ ಬೈ-ಎಲೆಕ್ಷನ್: ಕಾಂಗ್ರೆಸ್​ನಲ್ಲಿ ಶುರುವಾಗಿದೆಯಾ ಕೋಲ್ಡ್ ವಾರ್?
ಲವ್ ಜಿಹಾದ್ ಪ್ರಕರಣ ಕಾಂಗ್ರೆಸ್​​​ ಇರೋ ಕಡೆ ಮಾತ್ರ ಹೆಚ್ಚಾಗುತ್ತಿದೆ
ಲವ್ ಜಿಹಾದ್ ಪ್ರಕರಣ ಕಾಂಗ್ರೆಸ್​​​ ಇರೋ ಕಡೆ ಮಾತ್ರ ಹೆಚ್ಚಾಗುತ್ತಿದೆ
ರಾಹುಲ್ ಗಾಂಧಿ ಜೊತೆ ಪ್ರಧಾನಿ ಮೋದಿಯ ಅಪರೂಪದ ಕ್ಷಣ ಇಲ್ಲಿದೆ
ರಾಹುಲ್ ಗಾಂಧಿ ಜೊತೆ ಪ್ರಧಾನಿ ಮೋದಿಯ ಅಪರೂಪದ ಕ್ಷಣ ಇಲ್ಲಿದೆ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
20ಕ್ಕೂ ಹೆಚ್ಚು ‘ಕೈ’ ಶಾಸಕರ ದೆಹಲಿ ಟೂರ್ ಸೀಕ್ರೆಟ್ ಬಿಚ್ಚಿಟ್ಟ ಜಯಚಂದ್ರ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
'ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!': ಫೈರೋಜ್ ತಾಯಿ
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
PSL 2026: ಪಿಎಸ್​ಎಲ್​ನಲ್ಲಿ ಹಿಂದೆಂದೂ ಕಂಡರಿಯದ ಗೆಲುವು
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!
ಯೂತ್ ಕಾಂಗ್ರೆಸ್​ನ ಫೈರೋಜ್ ಪಠಾಣ್​ ಕೊಲೆ ಬಗ್ಗೆ ಸ್ಫೋಟಕ ಮಾಹಿತಿ ಬಯಲು!