Siddeshwara Swamiji Death: ಜೀವನದ ಉಪಯುಕ್ತವಾದ ಅನುಭವಗಳನ್ನು ಆಸಕ್ತರೊಂದಿಗೆ ಹಂಚಿಕೊಳ್ಳುವುದೆ ‘ಧರ್ಮ’ ಎಂದ ಸಿದ್ದೇಶ್ವರ ಶ್ರೀಗಳ ಅಂತಿಮ ಅಭಿವಂದನ ಪತ್ರ ಇಲ್ಲಿದೆ

Siddeshwara Swamiji: ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರೀಗಳ ಅಂತಿಮ ಅಭಿವಂದನ ಪತ್ರ

Siddeshwara Swamiji Death: ಜೀವನದ ಉಪಯುಕ್ತವಾದ ಅನುಭವಗಳನ್ನು ಆಸಕ್ತರೊಂದಿಗೆ ಹಂಚಿಕೊಳ್ಳುವುದೆ ‘ಧರ್ಮ’ ಎಂದ ಸಿದ್ದೇಶ್ವರ ಶ್ರೀಗಳ ಅಂತಿಮ ಅಭಿವಂದನ ಪತ್ರ ಇಲ್ಲಿದೆ
ಅಂತಿಮ ಅಭಿವಂದನ ಪತ್ರ
Follow us
| Updated By: ವಿವೇಕ ಬಿರಾದಾರ

Updated on:Jan 03, 2023 | 12:16 AM

ಜ್ಞಾನ ಯೋಗಾಶ್ರಮದ ಜ್ಞಾನ ಜ್ಯೋತಿಯು ಶಾಂತವಾಯಿತು. ಸಿದ್ದಪುರಷ ಸಿದ್ದೇಶ್ವರ ಶ್ರೀಗಳು ಶಿವಾದೀನರಾಗಿದ್ದಾರೆ. ನಾಡು, ದೇಶ, ಅಂತರಾಷ್ಟ್ರ ಮಟ್ಟದಲ್ಲಿ ಪ್ರವಚನಗಳನ್ನು ಮಾಡಿ ಭಕ್ತರಿಗೆ ಆಶಿರ್ವದಿಸುತ್ತಿದ್ದರು. ನಡೆದಾಡುವ ದೇವರೆಂದೇ ಖ್ಯಾತರಾಗಿದ್ದರು. ಇವರು ಇಂದು (ಜ.3) ಲಿಂಗೈಕ್ಯರಾಗಿದ್ದಾರೆ. ಶ್ರೀಗಳು ದೇಹ ನಶ್ವರ ಆತ್ಮ ಒಂದೇ ಶಾಶ್ವತ, ಸರಳತೆಯಲ್ಲೇ ಜೀವನದ ಸತ್ಯವನ್ನು ಕಂಡುಕೊಂಡವರು. ಜ್ಞಾನದ ಮೂಲಕ ಜೀವ ಸಂಕಲಕ್ಕೆ ಬೆಳಕಾದವರು. ಶ್ರೀಗಳು ದೇಹ ತ್ಯಾಗಕ್ಕೂ ಮುನ್ನ ಬೆರೆದ “ಅಂತಿಮ ಅಭಿವಂದನ ಪತ್ರ” ಇಲ್ಲಿದೆ.

ಅಂತಿಮ ಅಭಿವಂದನ ಪತ್ರ

ಬದುಕು ಅನುಭವಗಳ ಪ್ರವಾಹ. ಅದರ ಸಿರಿವಂತಿಕೆಯು ವಿಶ್ವ ಚಿಂತನೆ ಹಾಗೂ ಸತ್ಯ ಶೋಧನೆಗಳಿಂದ ಅದರ ಸೌಂದರ್ಯವು ರಾಗ-ದ್ವೇಷ ರಹಿತವಾದ ಹಾಗೂ ಅಸೀಮಿತವಾದ ಸದ್ಭಾವದಿಂದ ಅದನ್ನು ಸಮೃದ್ಧಗೊಳಿಸುವುದೇ ಸಾಧನೆ. ಅಂತಹ ಜೀವನದ ಉಪಯುಕ್ತವಾದ ಅನುಭವಗಳನ್ನು ಆಸಕ್ತರೊಂದಿಗೆ ಹಂಚಿಕೊಳ್ಳುವುದೆ ‘ಧರ್ಮ’. ಅದು ಸ್ವ-ಪರ ನೆಮ್ಮದಿಗೆ ಕಾರಣ.

ನನ್ನದು ಆವೇಗವಿಲ್ಲದ, ಸಾವಧಾನದ ಸಾಮಾನ್ಯ ಬದುಕು. ಅದನ್ನು ರೂಪಿಸಿದವರು ‘ಗುರುದೇವರು’ ಅದನ್ನು ಹದುಳಿಸಿದವರು ನಾಡಿನ ಪೂಜ್ಯರು, ಹಿತೈಷಿಗಳು, ಸಹೃದಯರು, ಸಾಧಕರು ಹಾಗೂ ಶ್ರೀಸಾಮಾನ್ಯರು. ನಿಸರ್ಗವು ಮೈಮನಸ್ಸುಗಳಿಗೆ ತಂಪನಿತ್ತಿದೆ. ತಾತ್ವಿಕ ಚಿಂತನೆಗಳು ತಿಳಿಬೆಳಗ ಹರಡಿವೆ. ಜಾಗತಿಕ ತತ್ತ್ವಜ್ಞಾನಿಗಳ ಮತ್ತು ವಿಜ್ಞಾನಿಗಳ ಶೋಧನೆಗಳು ದೃಷ್ಟಿಯ ಪರಿಸೀಮೆಯನ್ನು ದೂರ ದೂರ ಸರಿಸಿವೆ. ಆದ್ದರಿಂದಲೇ ನಾನು ಎಲ್ಲರಿಗೂ, ಎಲ್ಲದಕ್ಕೂ ಉಪಕೃತ.

ಬದುಕು ಮುಗಿಯುತ್ತಿದೆ. ದೀಪ ಆರಿದಂತೆ, ತೆರೆ ಅಡಗಿದಂತೆ, ಮೇಘ ಕರಗಿದಂತೆ. ಉಳಿಯುವುದು ಬರೀ ಬಯಲು. ಮಹಾ ಮೌನ.. ಶೂನ್ಯ ಸತ್ಯ. ಹಲವು ದಶಕಗಳ ಕಾಲ ಅದ್ಭುತ ಜಗತ್ತಿನಲ್ಲಿ ಬಾಳಿದ್ದೇನೆ. ನೋಡಿ ತಿಳಿದು ಅನುಭವಿಸಿದ್ದೇನೆ. ನನ್ನ ಬದುಕು ಕೊನೆಗೊಳ್ಳುವ ಮುಂಚೆ ಅದನ್ನ ಕೃತಜ್ಞತೆಯಿಂದ ಸ್ಮರಿಸಬೇಕು. ಅದಕ್ಕಾಗಿ ಈ ಅಂತಿಮ ಅಭಿವಂದನ ಪತ್ರ.

ದೇಹದ ವಿಷಯದಲ್ಲಿ ಒಂದೆರೆಡು ಆಶಯಗಳು

1) ದೇಹವನ್ನು ಭೂಮಿಯಲ್ಲಿಡುವ ಬದಲು ಅಗ್ನಿಯಿಂದ ಸ್ಪರ್ಶ ಮಾಡುವುದು 2) ಶ್ರಾದ್ಧಿಕ ವಿಧಿ-ವಿಧಾನಕರ್ಮಗಳು ಅನಗತ್ಯ 3) ಚಿತಾಭಸ್ಮವನ್ನು ನದಿ ಅಥವಾ ಸಾಗರದಲ್ಲಿ ವಿಸರ್ಜಿಸುವುದು 4) ಯಾವುದೇ ಬಗೆಯ ಸ್ಮಾರಕ ನಿರ್ಮಿಸಬಾರದು

ಅಂತಿಮ ನೆನಪು

ಸತ್ಯವೂ ಇಲ್ಲ.. ಅಸತ್ಯವೂ ಇಲ್ಲ ಸಹಜವೂ ಇಲ್ಲ.. ಅಸಹಜವೂ ಇಲ್ಲ ನಾನೂ ಇಲ್ಲ.. ನೀನೂ ಇಲ್ಲ ಇಲ್ಲ.. ಇಲ್ಲ.. ಎಂಬುದು ತಾನಿಲ್ಲ.. ಗುಹೇಶ್ವರನೆಂಬುದು ಬರಿ ಬಯಲು ಅಂತ್ಯ ಪ್ರಣಾಮಾಂಜಲಿ

                                                                                                                         ಸ್ವಾಮಿ ಸಿದ್ದೇಶ್ವರ

Published On - 12:11 am, Tue, 3 January 23

‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?