AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಾರೋಗ್ಯದ ನಡುವೆಯೂ ಪುಸ್ತಕ ಬಿಡುಗಡೆ ಮಾಡಿದ ವಿಜಯಪುರದ ಸಿದ್ದೇಶ್ವರ ಸ್ವಾಮೀಜಿ

ಅನಾರೋಗ್ಯದ ನಡುವೆಯೂ ಸಿದ್ದೇಶ್ವರ ಸ್ವಾಮೀಜಿಯವರು ತಾನೇ ಬರೆದ ಜ್ಞಾನಯೋಗ ಸಂಪುಟ ಪುಸ್ತಕ ಬಿಡುಗಡೆ ಮಾಡಿದರು.

ಅನಾರೋಗ್ಯದ ನಡುವೆಯೂ ಪುಸ್ತಕ ಬಿಡುಗಡೆ ಮಾಡಿದ ವಿಜಯಪುರದ ಸಿದ್ದೇಶ್ವರ ಸ್ವಾಮೀಜಿ
ಜ್ಞಾನಯೋಗ ಸಂಪುಟ ಪುಸ್ತಕ ಬಿಡುಗಡೆ ಮಾಡಿದ ವಿಜಯಪುರದ ಸಿದ್ದೇಶ್ವರ ಸ್ವಾಮೀಜಿ
TV9 Web
| Edited By: |

Updated on:Jan 01, 2023 | 7:00 PM

Share

ವಿಜಯಪುರ: ತಮ್ಮ ‘ಜ್ಞಾನಯೋಗ ಸಂಪುಟ’ ಪುಸ್ತಕವನ್ನು ಸಿದ್ದೇಶ್ವರ ಸ್ವಾಮೀಜಿ (Siddeshwara Swamiji)ಯವರು ವಿಜಯಪುರದ ಜ್ಞಾನಯೋಗಾಶ್ರಮ (Vijayapura Jnana Yogashrama)ದಲ್ಲಿ ಬಿಡುಗಡೆ ಮಾಡಿದರು. ತಮ್ಮ ಗುರುಗಳಾದ ಮಲ್ಲಿಕಾರ್ಜುನಶ್ರೀ ಕುರಿತಾಗಿ ಸಿದ್ದೇಶ್ವರ ಸ್ವಾಮೀಜಿ ಬರೆದಿರುವ ಪುಸ್ತಕ ಇದಾಗಿದ್ದು, ಹಾಸಿಗೆ ಮೇಲೆ ಮಲಗಿಕೊಂಡು ತಮ್ಮ ಪುಸ್ತಕವನ್ನು ಬಿಡುಗಡೆ ಮಾಡಿದರು. ಈ ವೇಳೆ ಸುತ್ತೂರು ಮಠದ ಶ್ರೀಗಳು, ಗದುಗಿನ ಶಿವಾನಂದ ಮಠದ ಸದಾಶಿವಾನಂದ ಸ್ವಾಮೀಜಿ‌ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಸಿದ್ದೇಶ್ವರ ಸ್ವಾಮೀಜಿಗಳ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಹೇಳಿದ್ದಾರೆ. ಆದರೂ ಸಹ ಕೆಲ ವದಂತಿಗಳು ಹರಿದಾಡುತ್ತಿವೆ. ಈ ಹಿನ್ನೆಲೆಯಲ್ಲಿ ಸಿದ್ದೇಶ್ವರ ನೋಡಿ ದರ್ಶನ ಪಡೆಯಲು ವಿಜಯಪುರದ ಜ್ಞಾನಯೋಗಾಶ್ರಮದತ್ತ ಭಕ್ತರ ದಂಡು ಧಾವಿಸಿ ಬರುತ್ತಿದೆ. ಉತ್ತರಕರ್ನಾಟಕದ ವಿವಿಧ ಜಿಲ್ಲೆಗಳಿಂದ ಬಂದಿರುವ ಭಕ್ತರು ಯೋಗಾಶ್ರಮದ ಗೇಟ್ ಮುಂದೆ ಜಮಾವಣೆಯಾಗಿದ್ದು, ಶ್ರೀಗಳ ದರ್ಶನಕ್ಕಾಗಿ ಕಾಯುತ್ತಿದ್ದಾರೆ. ಇದರಿಂದ ಸಿದ್ದೇಶ್ವರ ಸ್ವಾಮೀಜಿಗಳ ದರ್ಶನಕ್ಕಾಗಿ ಎಲ್ಇಡಿ ಪರದೆ ಅಳವಡಿಕೆ ಮಾಡಲಾಗಿದೆ.

ಇದನ್ನೂ ಓದಿ: Siddeshwar Swamiji Health : ಸಿದ್ದೇಶ್ವರ ಸ್ವಾಮೀಜಿ ಆರೋಗ್ಯ ಹೇಗಿದೆ? ಮಾಹಿತಿ ನೀಡಿದ ಡಿಸಿ, ಎಸ್ಪಿ, ವೈದ್ಯ, ಊಹಾಪೋಹಗಳಿಗೆ ತೆರೆ

ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಶ್ರಮಕ್ಕೆ ಜಿಲ್ಲಾಧಿಕಾರಿ ಡಾ. ಮಹಾಂತೇಶ ದಾನಮ್ಮನವರ, ಎಸ್ಪಿ ಹೆಚ್ ಡಿ ಆನಂದಕುಮಾರ, ವೈದ್ಯ ಡಾ. ಮಲ್ಲಣ್ಣ ಮೂಲಿಮನಿ ಮತ್ತು ಸುತ್ತೂರಿನ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಭೇಟಿ ನೀಡಿ ಆರೋಗ್ಯದ ಬಗ್ಗೆ ಮಾಹಿತಿ ಕಲೆಹಾಕಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:00 pm, Sun, 1 January 23

Follow Us
Web contact
Web contact

TV9 Kannada

Read More
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ