AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಾರೋಗ್ಯದ ನಡುವೆಯೂ ಪುಸ್ತಕ ಬಿಡುಗಡೆ ಮಾಡಿದ ವಿಜಯಪುರದ ಸಿದ್ದೇಶ್ವರ ಸ್ವಾಮೀಜಿ

ಅನಾರೋಗ್ಯದ ನಡುವೆಯೂ ಸಿದ್ದೇಶ್ವರ ಸ್ವಾಮೀಜಿಯವರು ತಾನೇ ಬರೆದ ಜ್ಞಾನಯೋಗ ಸಂಪುಟ ಪುಸ್ತಕ ಬಿಡುಗಡೆ ಮಾಡಿದರು.

ಅನಾರೋಗ್ಯದ ನಡುವೆಯೂ ಪುಸ್ತಕ ಬಿಡುಗಡೆ ಮಾಡಿದ ವಿಜಯಪುರದ ಸಿದ್ದೇಶ್ವರ ಸ್ವಾಮೀಜಿ
ಜ್ಞಾನಯೋಗ ಸಂಪುಟ ಪುಸ್ತಕ ಬಿಡುಗಡೆ ಮಾಡಿದ ವಿಜಯಪುರದ ಸಿದ್ದೇಶ್ವರ ಸ್ವಾಮೀಜಿ
TV9 Web
| Edited By: |

Updated on:Jan 01, 2023 | 7:00 PM

Share

ವಿಜಯಪುರ: ತಮ್ಮ ‘ಜ್ಞಾನಯೋಗ ಸಂಪುಟ’ ಪುಸ್ತಕವನ್ನು ಸಿದ್ದೇಶ್ವರ ಸ್ವಾಮೀಜಿ (Siddeshwara Swamiji)ಯವರು ವಿಜಯಪುರದ ಜ್ಞಾನಯೋಗಾಶ್ರಮ (Vijayapura Jnana Yogashrama)ದಲ್ಲಿ ಬಿಡುಗಡೆ ಮಾಡಿದರು. ತಮ್ಮ ಗುರುಗಳಾದ ಮಲ್ಲಿಕಾರ್ಜುನಶ್ರೀ ಕುರಿತಾಗಿ ಸಿದ್ದೇಶ್ವರ ಸ್ವಾಮೀಜಿ ಬರೆದಿರುವ ಪುಸ್ತಕ ಇದಾಗಿದ್ದು, ಹಾಸಿಗೆ ಮೇಲೆ ಮಲಗಿಕೊಂಡು ತಮ್ಮ ಪುಸ್ತಕವನ್ನು ಬಿಡುಗಡೆ ಮಾಡಿದರು. ಈ ವೇಳೆ ಸುತ್ತೂರು ಮಠದ ಶ್ರೀಗಳು, ಗದುಗಿನ ಶಿವಾನಂದ ಮಠದ ಸದಾಶಿವಾನಂದ ಸ್ವಾಮೀಜಿ‌ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಸಿದ್ದೇಶ್ವರ ಸ್ವಾಮೀಜಿಗಳ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಹೇಳಿದ್ದಾರೆ. ಆದರೂ ಸಹ ಕೆಲ ವದಂತಿಗಳು ಹರಿದಾಡುತ್ತಿವೆ. ಈ ಹಿನ್ನೆಲೆಯಲ್ಲಿ ಸಿದ್ದೇಶ್ವರ ನೋಡಿ ದರ್ಶನ ಪಡೆಯಲು ವಿಜಯಪುರದ ಜ್ಞಾನಯೋಗಾಶ್ರಮದತ್ತ ಭಕ್ತರ ದಂಡು ಧಾವಿಸಿ ಬರುತ್ತಿದೆ. ಉತ್ತರಕರ್ನಾಟಕದ ವಿವಿಧ ಜಿಲ್ಲೆಗಳಿಂದ ಬಂದಿರುವ ಭಕ್ತರು ಯೋಗಾಶ್ರಮದ ಗೇಟ್ ಮುಂದೆ ಜಮಾವಣೆಯಾಗಿದ್ದು, ಶ್ರೀಗಳ ದರ್ಶನಕ್ಕಾಗಿ ಕಾಯುತ್ತಿದ್ದಾರೆ. ಇದರಿಂದ ಸಿದ್ದೇಶ್ವರ ಸ್ವಾಮೀಜಿಗಳ ದರ್ಶನಕ್ಕಾಗಿ ಎಲ್ಇಡಿ ಪರದೆ ಅಳವಡಿಕೆ ಮಾಡಲಾಗಿದೆ.

ಇದನ್ನೂ ಓದಿ: Siddeshwar Swamiji Health : ಸಿದ್ದೇಶ್ವರ ಸ್ವಾಮೀಜಿ ಆರೋಗ್ಯ ಹೇಗಿದೆ? ಮಾಹಿತಿ ನೀಡಿದ ಡಿಸಿ, ಎಸ್ಪಿ, ವೈದ್ಯ, ಊಹಾಪೋಹಗಳಿಗೆ ತೆರೆ

ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಶ್ರಮಕ್ಕೆ ಜಿಲ್ಲಾಧಿಕಾರಿ ಡಾ. ಮಹಾಂತೇಶ ದಾನಮ್ಮನವರ, ಎಸ್ಪಿ ಹೆಚ್ ಡಿ ಆನಂದಕುಮಾರ, ವೈದ್ಯ ಡಾ. ಮಲ್ಲಣ್ಣ ಮೂಲಿಮನಿ ಮತ್ತು ಸುತ್ತೂರಿನ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಭೇಟಿ ನೀಡಿ ಆರೋಗ್ಯದ ಬಗ್ಗೆ ಮಾಹಿತಿ ಕಲೆಹಾಕಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:00 pm, Sun, 1 January 23

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ