AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ: ಬೀದಿನಾಯಿಗಳ ಹಾವಳಿ ಬೆನ್ನಲ್ಲೇ ದುಷ್ಕರ್ಮಿಗಳಿಂದ ವಿಷಪ್ರಾಶನ; 6 ಶ್ವಾನಗಳು ಸಾವು

ವಿಜಯಪುರದಲ್ಲಿ ಬೀದಿನಾಯಿ ಹಾವಳಿ ಮಧ್ಯೆ ವಿಷಾಹಾರ ನೀಡಿರುವುದು ಆತಂಕಕ್ಕೆ ಕಾರಣವಾಗಿದೆ. ಶಾಂತಿ ನಗರದಲ್ಲಿ ವಿಷಾಹಾರ ಸೇವಿಸಿ 6 ನಾಯಿಗಳು ಸಾವನ್ನಪ್ಪಿದ್ದು, 2 ಗಂಭೀರವಾಗಿವೆ. ಸದ್ಯ ಈ ಕೃತ್ಯ ಪ್ರಾಣಿ ಪ್ರಿಯರ ಆಕ್ರೋಶಕ್ಕೆ ಕಾರಣವಾಗಿದ್ದು, ಪಾಲಿಕೆ ವಿರುದ್ಧ ಅಸಮಾಧಾನ ವ್ಯಕ್ತವಾಗಿದೆ. ಬೀದಿನಾಯಿಗಳಿಗೆ ವಿಷ ಹಾಕಿದವರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಲಾಗಿದೆ.

ವಿಜಯಪುರ: ಬೀದಿನಾಯಿಗಳ ಹಾವಳಿ ಬೆನ್ನಲ್ಲೇ ದುಷ್ಕರ್ಮಿಗಳಿಂದ ವಿಷಪ್ರಾಶನ; 6 ಶ್ವಾನಗಳು ಸಾವು
ಬೀದಿನಾಯಿImage Credit source: tv9 kannada
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: May 12, 2026 | 3:12 PM

Share

ವಿಜಯಪುರ, ಮೇ 12: ನಗರದಲ್ಲಿ ಬೀದಿನಾಯಿಗಳ (street dogs) ಹಾವಳಿ ಮುಂದುವರಿದಿರುವ ಬೆನ್ನಲ್ಲೇ ದುಷ್ಕರ್ಮಿಗಳು ಬೀದಿನಾಯಿಗಳಿಗೆ ವಿಷಾಹಾರ ನೀಡಿದ್ದು, ಆರು ಬೀದಿನಾಯಿಗಳು ನರಳಿ ನರಳಿ ಪ್ರಾಣಬಿಟ್ಟಿರುವ (death) ಆತಂಕಕಾರಿ ಘಟನೆ ಶಾಂತಿ ನಗರದಲ್ಲಿ ನಡೆದಿದೆ. ಎರಡು ನಾಯಿಗಳ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಶಾಂತಿ ನಗರದಲ್ಲಿ ಈವರೆಗೆ ನಾಯಿಗಳ ದಾಳಿ ಪ್ರಕರಣ ವರದಿಯಾಗದಿದ್ದರೂ ವಿಷಾಹಾರ ನೀಡಿರುವುದು ಮಾತ್ರ ಪ್ರಾಣಿ ಪ್ರಿಯರ ಆಕ್ರೋಶಕ್ಕೆ ಕಾರಣವಾಗಿದೆ. ಸದ್ಯ ವಿಷ ಹಾಕಿದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಲಾಗಿದೆ.

ಮುಖ್ಯಾಂಶಗಳು

  • ವಿಜಯಪುರದಲ್ಲಿ ಬೀದಿನಾಯಿಗಳಿಗೆ ವಿಷಾಹಾರ
  • ಅಪರಿಚಿತರ ಅಮಾನವೀಯ ಕೃತ್ಯಕ್ಕೆ ಪ್ರಾಣಿಪ್ರಿಯರು ಆಕ್ರೋಶ
  • ಶ್ವಾನಪಾಲನಾ ಕೇಂದ್ರ ನಿರ್ಮಾಣಕ್ಕೆ ಆಗ್ರಹ

ಮೂರು ವರ್ಷದ ಬಾಲಕನ ಮೇಲೆ ಬೀದಿನಾಯಿ ದಾಳಿ

ಮೇ 6ರಂದು ರಾಜಕುಮಾರ ಲೇಔಟ್​​ನಲ್ಲಿ ಮೂರು ವರ್ಷದ ಬಾಲಕನ ಮೇಲೆ ಬೀದಿನಾಯಿ ದಾಳಿ ಮಾಡಿತ್ತು. ಕಚ್ಚಿಕೊಂಡು ಎಳೆದುಕೊಂಡು ಹೋಗಿದ್ದ ಶ್ವಾನದಿಂದ ಸ್ಥಳೀಯರು ಬಾಲಕನನ್ನು ರಕ್ಷಣೆ ಮಾಡಿದ್ದರು. ಸದ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸಾವು ಬದುಕಿನ ಮಧ್ಯೆ ಬಾಲಕ ಹೋರಾಡುತ್ತಿದ್ದಾನೆ.

ಇದನ್ನೂ ಓದಿ: ವಿಜಯಪುರದಲ್ಲಿ 3 ವರ್ಷದ ಮಗುವಿನ ಮೇಲೆ ಬೀದಿನಾಯಿ ದಾಳಿ: ಕುಟುಂಬಸ್ಥರಿಗೆ ಆಘಾತ ತಂದ ಘಟನೆ

ಈ ನಡುವೆ ಇಂದು ಶಾಂತಿ ನಗರದಲ್ಲಿ ಬೀದಿನಾಯಿಗಳಿಗೆ ವಿಷಪ್ರಾಶನ ಮಾಡಲಾಗಿದೆ. ಅಪರಿಚಿತರಿಂದ ಬೀದಿ ನಾಯಿಗಳಿಗೆ ವಿಷಾಹಾರ ನೀಡಲಾಗಿದ್ದು, 6 ಬೀದಿನಾಯಿಗಳು ಪ್ರಾಣ ಬಿಟ್ಟಿವೆ. ಈ ಶಾಂತಿ ನಗರದಲ್ಲಿ ಸಾರ್ವಜನಿಕರಿಗೆ, ಮಕ್ಕಳಿಗೆ ಯಾವುದೇ ಬೀದಿನಾಯಿಗಳು ಕಚ್ಚಿಲ್ಲ, ದಾಳಿ ಮಾಡಿಲ್ಲ, ಆದರೂ ವಿಷ ಹಾಕಿರುವುದಕ್ಕೆ ಪ್ರಾಣಿ ಪ್ರಿಯರು ತೀವ್ರ ಅಸಮಾಧಾನ ಹೊರ ಹಾಕಿದ್ಧಾರೆ.

ಅಸ್ವಸ್ಥ ನಾಯಿಗಳನ್ನ ಕಸದ ವಾಹನದಲ್ಲಿ ಹಾಕಿದ ಆರೋಪ

ಇನ್ನು ಕಳೆದ ಕೆಲ ದಿನಗಳ ಹಿಂದೆ ಯಾರೋ ಅಪರಚಿತರು ಬೀದಿನಾಯಿಗಳಿಗೆ ವಿಷ ಹಾಕಿ ಹೋಗಿದ್ದರಂತೆ. ಆಗ 2 ಬೀದಿನಾಯಿಗಳು ಅಸುನೀಗಿದ್ದವು. ನಿನ್ನೆ ರಾತ್ರಿ ಮತ್ತೆ ಬೀದಿನಾಯಿಗಳಿಗೆ ವಿಷಾಹಾರ ನೀಡಲಾಗಿದೆ. ಆ ಮೂಲಕ 6 ಬೀದಿನಾಯಿಗಳನ್ನು ವಿಷಾಹಾರ ಹಾಕಿ ಕೊಲ್ಲಲಾಗಿದೆ. ವಿಷಹಾರ ತಿಂದ ಕೆಲ ಬೀದಿನಾಯಿಗಳು ತೀವ್ರ ಅಸ್ವಸ್ಥವಾಗಿದ್ದವು. ಆದರೆ ಅಸ್ವಸ್ಥಗೊಂಡ ಬೀದಿನಾಯಿಗಳನ್ನು ಪಾಲಿಕೆಯವರು, ಪಶುಸಂಗೋಪನೆ ಇಲಾಖೆ ಸಿಬ್ಬಂದಿ, ಪಶು ಆಸ್ಪತ್ರೆಗೆ ತೆಗೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸುವ ಬದಲು ಪ್ಲಾಸ್ಟಿಕ್ ಚೀಲದಲ್ಲಿ ಹಾಕಿ ಕಸದ ವಾಹನದಲ್ಲಿ ಎಸೆದಿದ್ದಾರೆ. ಇದು ಪ್ರಾಣಿ ಪ್ರಿಯರ ಆಕ್ರೋಶಕ್ಕೆ ಕಾರಣವಾಗಿದೆ. ಜೀವಂತವಿರುವ ಬೀದಿನಾಯಿಯನ್ನು ನಿರ್ದಯವಾಗಿ ಕಸದ ವಾಹನದಲ್ಲಿ ಹಾಕಿದ್ದು ಏಕೆ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಅಪಾರ್ಟ್​ಮೆಂಟ್ ನಿವಾಸಿಗಳಿಗೆ ಬೀದಿ ನಾಯಿಗಳ ಕಾಟ: ಮಕ್ಕಳು, ವೃದ್ಧರ ಮೇಲೆ ಮನಸೋ ಇಚ್ಛೆ ದಾಳಿ

ಬೀದಿನಾಯಿಗಳ ನಿಯಂತ್ರಣ, ಸಾಗಾಟ, ಪಾಲನೆಗೆ ಸುಪ್ರೀಂ ಕೋರ್ಟ್ ನಿಯಮಗಳ ಪ್ರಕಾರ ಮಾಡಬೇಕಿದೆ. ಆದರೆ ಪಾಲಿಕೆ ಸಿಬ್ಬಂದಿ ಹಾಗೂ ಸಂಬಂಧಿಸಿದ ಇಲಾಖೆ ಸಿಬ್ಬಂದಿ ಸುಪ್ರೀಂ ಕೋರ್ಟ್ ಸೂಚನೆಗಳನ್ನು ಪಾಲಿಸುತ್ತಿಲ್ಲ. ಬೀದಿನಾಯಿಗಳಿಗೆ ವಿಷ ಹಾಕಿದವರ ಮೇಲೆ ಕಾನೂನು ಕ್ರಮತೆಗೆದುಕೊಳ್ಳಬೇಕೆಂದು ಒತ್ತಾಯಿಸಲಾಗಿದೆ.

ಶ್ವಾನಪಾಲನಾ ಕೇಂದ್ರಕ್ಕೆ 2ಕೋಟಿ ರೂ ಅನುದಾನ 

ಒಂದೆಡೆ ಬೀದಿನಾಯಿಗಳು ದಾಳಿ ಮಾಡುತ್ತಿದ್ದರೆ, ಮತ್ತೊಂದೆಡೆ ಮಾನವೀಯತೆ ಮರೆತು ಬೀದಿನಾಯಿಗಳಿಗೆ ವಿಷಾಹಾರ ಹಾಕಿ ಕೊಲ್ಲಲಾಗುತ್ತಿದೆ. ಹೀಗಾಗಿ ಜಿಲ್ಲಾಡಳಿತ, ಮಹಾನಗರ ಪಾಲಿಕೆ ಶ್ವಾನ ಪಾಲನಾ ಕೇಂದ್ರ ನಿರ್ಮಾಣ ಮಾಡಬೇಕಿದೆ. ರಾಜ್ಯಸಭಾ ಸದಸ್ಯೆ ಸುಧಾಮೂರ್ತಿ ಶ್ವಾನಪಾಲನಾ ಕೇಂದ್ರಕ್ಕೆ 2ಕೋಟಿ ರೂ ಅನುದಾನ ಮಂಜೂರು ಮಾಡಿದ್ದಾರೆ. ನಿರ್ಮಾಣ ಕಾಮಗಾರಿ ಆದಷ್ಟು ಬೇಗ ಮುಗಿಸಿ ಬೀದಿನಾಯಿಗಳಿಗೆ ಆಶ್ರಯ ನೀಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು