AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

433 ರೈತರಿಗೆ ನೋಟಿಸ್: ವಕ್ಫ್ ಆಸ್ತಿ ವಿವಾದಕ್ಕೆ ತೆರೆ ಎಳೆದ ಸಚಿವ ಎಂಬಿ ಪಾಟೀಲ್​

Vijayapura Waqf Raw: ವಿಜಯಪುರ ಜಿಲ್ಲೆಯಲ್ಲಿ ರೈತರ ಜಮೀನುಗಳನ್ನು ವಕ್ಫ್ ಬೋರ್ಡ್‌ಗೆ ಸೇರಿಸುವ ವಿಚಾರ ತೀವ್ರ ಚರ್ಚೆಗೆ ಕಾರಣವಾಗಿದೆ. ಜಿಲ್ಲೆಯಲ್ಲಿ ಸೃಷ್ಟಿಯಾಗಿರುವ ಗೊಂದಲಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ ಪಾಟೀಲ್ ಇಂದು (ಅ.24) ಸುದ್ದಿಗೋಷ್ಠಿ ನಡೆಸಿ​ ತೆರೆ ಎಳೆದಿದ್ದಾರೆ.

433 ರೈತರಿಗೆ ನೋಟಿಸ್: ವಕ್ಫ್ ಆಸ್ತಿ ವಿವಾದಕ್ಕೆ ತೆರೆ ಎಳೆದ ಸಚಿವ ಎಂಬಿ ಪಾಟೀಲ್​
ಎಂಬಿ ಪಾಟೀಲ್​
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on:Oct 27, 2024 | 3:16 PM

Share

ವಿಜಯಪುರ, ಅಕ್ಟೋಬರ್​ 27: ವಿಜಯಪುರ (Vijayapura) ಜಿಲ್ಲೆಯಲ್ಲಿ ಒಟ್ಟು 14,201 ಎಕರೆ ಜಮೀನು ವಕ್ಫ್​​ ಮಂಡಳಿಗೆ ಸೇರಿದೆ. ಈ 14,201 ಎಕರೆಯಲ್ಲಿ ಶೇ70 ರಷ್ಟು ಆಸ್ತಿ ಮುಸ್ಲಿಮರಿಗೆ ಸೇರಿದೆ. ಉಳಿದ ಶೇ30ರಷ್ಟು ಜಾಗ ಹಿಂದೂಗಳಿಗೆ ಮಾರಾಟವಾಗಿದೆ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ್ (MB Patil)​ ತಿಳಿಸಿದರು. ವಿಜಯಪುರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಕ್ಫ್​​ ಆಸ್ತಿಗಳ ಬಗ್ಗೆ ಸಾಕಷ್ಟು ಗೊಂದಲ ಸೃಷ್ಟಿ ಮಾಡಲಾಗಿದೆ. ಈ ವಿಚಾರ ರಾಷ್ಟ್ರೀಯ ಮಾಧ್ಯಮಗಳು ಬರುತ್ತಿದೆ ಎಂದರು.

ಹೊನವಾಡ ಗ್ರಾಮದಲ್ಲಿ 1200 ಎಕರೆ ರೈತರ ಭೂಮಿ ವಕ್ಫ್​​​ಗೆ ಸೇರಿದೆ ​ಎಂದು ಸುದ್ದಿ ಹಬ್ಬಿಸಲಾಗಿದೆ. ಆದರೆ, ಇದು ಸುಳ್ಳು ಸುದ್ದಿ. ಹೊನವಾಡ ಗ್ರಾಮದ ಯಾವುದೇ ರೈತನಿಗೆ ನೋಟಿಸ್ ನೀಡಿಲ್ಲ. ಹೊನವಾಡ ಗ್ರಾಮದ ಜಮೀನಿನಗಳು 1974ರಲ್ಲಿ ವಕ್ಫ್​​​ ಗೆಜೆಟ್​​​ನಲ್ಲಿ ತಪ್ಪಾಗಿ ನಮೂದಿಸಲಾಗಿದೆ. 1977ರಲ್ಲಿ ಈ ತಪ್ಪನ್ನು ವಕ್ಫ್ ಮಂಡಳಿ ಸರಿಪಡಿಸಿದೆ. ಹೊನವಾಡ ಗ್ರಾಮದ 10 ರಿಂದ 11 ಎಕರೆ ಮಾತ್ರ ವಕ್ಫ್​ಗೆ ಸೇರಿದೆ. ಉಳಿದ ಜಮೀನು ಹೊನವಾಡ ಗ್ರಾಮದ ರೈತರಿಗೆ ಸೇರಿದೆ. ಗೆಜೆಟ್​​ ನೋಟಿಫಿಕೇಷನ್​​ನಿಂದ ಗೊಂದಲ ಸೃಷ್ಟಿಯಾಗಿದೆ. ರೈತರು ಆತಂಕಪಡುವ ಅವಶ್ಯಕತೆ ಇಲ್ಲ ಎಂದರು.

ಇದನ್ನೂ ಓದಿ: ವಕ್ಫ್​ ಮಂಡಳಿಯವರು ದೇವಸ್ಥಾನಕ್ಕೂ ನೋಟಿಸ್ ನೀಡುತ್ತಿದ್ದಾರೆ: ಯತ್ನಾಳ್​ ಆರೋಪ

ಜಿಲ್ಲೆಯಲ್ಲಿ 433 ರೈತರಿಗೆ ನೋಟಿಸ್ ನೀಡಲಾಗಿದೆ. ಇಂಡಿ ತಹಶಿಲ್ದಾರ್​ ನೋಟಿಸ್ ನೀಡದೆ ಸರ್ವೆ ನಂಬರ್​​ನಲ್ಲಿ 41ರಲ್ಲಿ ಇಂದೀಕರಣ ಮಾಡಿದ್ದಾರೆ‌. ಈ ಬಗ್ಗೆ ತನಿಖೆ ನಡೆಸಲಾಗುತ್ತದೆ. ಯರಗಲ್ ಗ್ರಾಮದಲ್ಲಿ ಸರ್ವೆ ನಂಬರ್ 138ನಲ್ಲಿ 13 ಎಕರೆ ಜಮೀನನ್ನು 1974ರಲ್ಲಿ ಗೆಜೆಟ್ ನೋಟಿಫಿಕೇಶನ್ ಮಾಡಲಾಗಿತ್ತು. ಆದರೆ, 1977ರಲ್ಲಿ ವಕ್ಫ್​ ಮಂಡಳಿಯವರು ಇದನ್ನು ಸರಿಪಡಿಸಿದ್ದಾರೆ ಎಂದು ತಿಳಿಸಿದರು.

ಅಧಿಕಾರಿಗಳ ಎಡವಟ್ಟಿನಿಂದ ಸಿಂದಗಿಯ ಗುರುಲಿಂಗ ವಿರಕ್ತಮಠಕ್ಕೆ ನೋಟಿಸ್​ ನೀಡಲಾಗಿತ್ತು. ಸರ್ವೆ ನಂಬರ್​​ 1020 ಬದಲಿಗೆ ಸರ್ವೆ ನಂಬರ್​ 1029 ಅಂತ ಗೆಜೆಟ್​ ನೋಟಿಫಿಕೇಶನ್ ಮಾಡಲಾಗಿತ್ತು. ಸರ್ವೆ ನಂಬರ್​ 1029 ವಕ್ಫ್​​ಗೆ ಸೇರಿದ್ದ ಆಸ್ತಿಯಾಗಿದೆ. ಹೀಗಾಗಿ ಮಠಕ್ಕೆ ನೋಟಿಸ್​ ನೀಡಲಾಗಿತ್ತು. ಆದರೆ, ಈಗ ತಹಶೀಲ್ದಾರ್​ ಸರಿ ಮಾಡಿದ್ದಾರೆ. ಸರ್ವೆ ನಂಬರ್​ 1020ರಲ್ಲಿರುವ 1 ಎಕರೆ 36 ಗುಂಟೆ ಜಮೀನು ಮಠಕ್ಕೆ ಸೇರಿದೆ. ಈ ಎಲ್ಲ ಗೊಂದಲಗಳನ್ನು ಬಗೆಹರಿಸಲು ಜಿಲ್ಲಾಧಿಕಾರಿ ನೇತೃತ್ವದಲ್ಲಿ ಟಾಸ್ಕ್ ಪೋರ್ಸ್ ಮಾಡಲಾಗಿದೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:58 pm, Sun, 27 October 24

Follow Us
Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More