433 ರೈತರಿಗೆ ನೋಟಿಸ್: ವಕ್ಫ್ ಆಸ್ತಿ ವಿವಾದಕ್ಕೆ ತೆರೆ ಎಳೆದ ಸಚಿವ ಎಂಬಿ ಪಾಟೀಲ್​

| Updated By: ರಮೇಶ್ ಬಿ. ಜವಳಗೇರಾ

Updated on: Oct 27, 2024 | 3:16 PM

Vijayapura Waqf Raw: ವಿಜಯಪುರ ಜಿಲ್ಲೆಯಲ್ಲಿ ರೈತರ ಜಮೀನುಗಳನ್ನು ವಕ್ಫ್ ಬೋರ್ಡ್‌ಗೆ ಸೇರಿಸುವ ವಿಚಾರ ತೀವ್ರ ಚರ್ಚೆಗೆ ಕಾರಣವಾಗಿದೆ. ಜಿಲ್ಲೆಯಲ್ಲಿ ಸೃಷ್ಟಿಯಾಗಿರುವ ಗೊಂದಲಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ ಪಾಟೀಲ್ ಇಂದು (ಅ.24) ಸುದ್ದಿಗೋಷ್ಠಿ ನಡೆಸಿ​ ತೆರೆ ಎಳೆದಿದ್ದಾರೆ.

433 ರೈತರಿಗೆ ನೋಟಿಸ್: ವಕ್ಫ್ ಆಸ್ತಿ ವಿವಾದಕ್ಕೆ ತೆರೆ ಎಳೆದ ಸಚಿವ ಎಂಬಿ ಪಾಟೀಲ್​
ಎಂಬಿ ಪಾಟೀಲ್​
Follow us on

ವಿಜಯಪುರ, ಅಕ್ಟೋಬರ್​ 27: ವಿಜಯಪುರ (Vijayapura) ಜಿಲ್ಲೆಯಲ್ಲಿ ಒಟ್ಟು 14,201 ಎಕರೆ ಜಮೀನು ವಕ್ಫ್​​ ಮಂಡಳಿಗೆ ಸೇರಿದೆ. ಈ 14,201 ಎಕರೆಯಲ್ಲಿ ಶೇ70 ರಷ್ಟು ಆಸ್ತಿ ಮುಸ್ಲಿಮರಿಗೆ ಸೇರಿದೆ. ಉಳಿದ ಶೇ30ರಷ್ಟು ಜಾಗ ಹಿಂದೂಗಳಿಗೆ ಮಾರಾಟವಾಗಿದೆ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ್ (MB Patil)​ ತಿಳಿಸಿದರು. ವಿಜಯಪುರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಕ್ಫ್​​ ಆಸ್ತಿಗಳ ಬಗ್ಗೆ ಸಾಕಷ್ಟು ಗೊಂದಲ ಸೃಷ್ಟಿ ಮಾಡಲಾಗಿದೆ. ಈ ವಿಚಾರ ರಾಷ್ಟ್ರೀಯ ಮಾಧ್ಯಮಗಳು ಬರುತ್ತಿದೆ ಎಂದರು.

ಹೊನವಾಡ ಗ್ರಾಮದಲ್ಲಿ 1200 ಎಕರೆ ರೈತರ ಭೂಮಿ ವಕ್ಫ್​​​ಗೆ ಸೇರಿದೆ ​ಎಂದು ಸುದ್ದಿ ಹಬ್ಬಿಸಲಾಗಿದೆ. ಆದರೆ, ಇದು ಸುಳ್ಳು ಸುದ್ದಿ. ಹೊನವಾಡ ಗ್ರಾಮದ ಯಾವುದೇ ರೈತನಿಗೆ ನೋಟಿಸ್ ನೀಡಿಲ್ಲ. ಹೊನವಾಡ ಗ್ರಾಮದ ಜಮೀನಿನಗಳು 1974ರಲ್ಲಿ ವಕ್ಫ್​​​ ಗೆಜೆಟ್​​​ನಲ್ಲಿ ತಪ್ಪಾಗಿ ನಮೂದಿಸಲಾಗಿದೆ. 1977ರಲ್ಲಿ ಈ ತಪ್ಪನ್ನು ವಕ್ಫ್ ಮಂಡಳಿ ಸರಿಪಡಿಸಿದೆ. ಹೊನವಾಡ ಗ್ರಾಮದ 10 ರಿಂದ 11 ಎಕರೆ ಮಾತ್ರ ವಕ್ಫ್​ಗೆ ಸೇರಿದೆ. ಉಳಿದ ಜಮೀನು ಹೊನವಾಡ ಗ್ರಾಮದ ರೈತರಿಗೆ ಸೇರಿದೆ. ಗೆಜೆಟ್​​ ನೋಟಿಫಿಕೇಷನ್​​ನಿಂದ ಗೊಂದಲ ಸೃಷ್ಟಿಯಾಗಿದೆ. ರೈತರು ಆತಂಕಪಡುವ ಅವಶ್ಯಕತೆ ಇಲ್ಲ ಎಂದರು.

ಇದನ್ನೂ ಓದಿ: ವಕ್ಫ್​ ಮಂಡಳಿಯವರು ದೇವಸ್ಥಾನಕ್ಕೂ ನೋಟಿಸ್ ನೀಡುತ್ತಿದ್ದಾರೆ: ಯತ್ನಾಳ್​ ಆರೋಪ

ಜಿಲ್ಲೆಯಲ್ಲಿ 433 ರೈತರಿಗೆ ನೋಟಿಸ್ ನೀಡಲಾಗಿದೆ. ಇಂಡಿ ತಹಶಿಲ್ದಾರ್​ ನೋಟಿಸ್ ನೀಡದೆ ಸರ್ವೆ ನಂಬರ್​​ನಲ್ಲಿ 41ರಲ್ಲಿ ಇಂದೀಕರಣ ಮಾಡಿದ್ದಾರೆ‌. ಈ ಬಗ್ಗೆ ತನಿಖೆ ನಡೆಸಲಾಗುತ್ತದೆ. ಯರಗಲ್ ಗ್ರಾಮದಲ್ಲಿ ಸರ್ವೆ ನಂಬರ್ 138ನಲ್ಲಿ 13 ಎಕರೆ ಜಮೀನನ್ನು 1974ರಲ್ಲಿ ಗೆಜೆಟ್ ನೋಟಿಫಿಕೇಶನ್ ಮಾಡಲಾಗಿತ್ತು. ಆದರೆ, 1977ರಲ್ಲಿ ವಕ್ಫ್​ ಮಂಡಳಿಯವರು ಇದನ್ನು ಸರಿಪಡಿಸಿದ್ದಾರೆ ಎಂದು ತಿಳಿಸಿದರು.

ಅಧಿಕಾರಿಗಳ ಎಡವಟ್ಟಿನಿಂದ ಸಿಂದಗಿಯ ಗುರುಲಿಂಗ ವಿರಕ್ತಮಠಕ್ಕೆ ನೋಟಿಸ್​ ನೀಡಲಾಗಿತ್ತು. ಸರ್ವೆ ನಂಬರ್​​ 1020 ಬದಲಿಗೆ ಸರ್ವೆ ನಂಬರ್​ 1029 ಅಂತ ಗೆಜೆಟ್​ ನೋಟಿಫಿಕೇಶನ್ ಮಾಡಲಾಗಿತ್ತು. ಸರ್ವೆ ನಂಬರ್​ 1029 ವಕ್ಫ್​​ಗೆ ಸೇರಿದ್ದ ಆಸ್ತಿಯಾಗಿದೆ. ಹೀಗಾಗಿ ಮಠಕ್ಕೆ ನೋಟಿಸ್​ ನೀಡಲಾಗಿತ್ತು. ಆದರೆ, ಈಗ ತಹಶೀಲ್ದಾರ್​ ಸರಿ ಮಾಡಿದ್ದಾರೆ. ಸರ್ವೆ ನಂಬರ್​ 1020ರಲ್ಲಿರುವ 1 ಎಕರೆ 36 ಗುಂಟೆ ಜಮೀನು ಮಠಕ್ಕೆ ಸೇರಿದೆ. ಈ ಎಲ್ಲ ಗೊಂದಲಗಳನ್ನು ಬಗೆಹರಿಸಲು ಜಿಲ್ಲಾಧಿಕಾರಿ ನೇತೃತ್ವದಲ್ಲಿ ಟಾಸ್ಕ್ ಪೋರ್ಸ್ ಮಾಡಲಾಗಿದೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:58 pm, Sun, 27 October 24