ಗೃಹಲಕ್ಷ್ಮಿ ಯೋಜನೆ ಹಣದಿಂದ ದೇವಿಗೆ ಬೆಳ್ಳಿ ಕಿರೀಟ ಮಾಡಿಸಿದ ವಿಜಯಪುರದ ಮಹಿಳೆ..!

Edited By:

Updated on: Oct 11, 2024 | 6:02 PM

ಯಾರೇನೇ ಹೇಳಲಿ, ಸಿದ್ದರಾಮಯ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆ ಹಣವನ್ನು ಕೆಲ ಗೃಹಿಣಿಯರು ಸದುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಇಂದು (ಅ,11) ಆಯುಧ ಪೂಜೆ ದಿನದಂದು ಬೆಳಗಾವಿ ಜಿಲ್ಲೆಯ ಮಹಿಳೆಯೊಬ್ಬರು ಕೂಡಿಟ್ಟಿದ್ದ ಗೃಹಲಕ್ಷ್ಮಿ ಹಣದಿಂದಲೇ ತನ್ನ ಮಗನಿಗೆ ಬೈಕ್​ ಕೊಡಿಸಿದ್ದಾರೆ. ಈಗ ವಿಜಯಪುರದಲ್ಲಿ ಯಜಮಾನಿ ನಾಡದೇವಿಗೆ ಕಿರೀಟ ಮಾಡಿಸಿ ನೀಡಿದ್ದಾರೆ.

1 / 7
 ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಿಂದ ಬೆಳಗಾವಿ ಜಿಲ್ಲೆಯ ಅಜ್ಜಿಯೊಬ್ಬರು ಮುತ್ತೈದೆಯರಿಗೆ ಉಡಿ ತುಂಬಿ, ಹೋಳಿಗೆ ಊಟ ಹಾಕಿಸಿದರು. ಇಂದು ಅದೇ ಬೆಳಗಾವಿ ಜಿಲ್ಲೆಯ ಮತ್ತೋರ್ವ ಮಹಿಳೆ ಕೂಡಿಟ್ಟಿದ್ದ ಗೃಹಲಕ್ಷ್ಮಿ ಹಣದಿಂದ ಪುತ್ರನಿಗೆ ಹೊಸ ಬೈಕ್​ ಕೊಡಿಸಿದ್ದಾರೆ. ಈಗ ವಿಜಯಪುರ ಜಿಲ್ಲೆಯ ಯಜಮಾನಿಯೊಬ್ಬರು ಕೂಡಿಟ್ಟಿದ್ದ ಇದೇ ಗೃಹಲಕ್ಷ್ಮಿ ಹಣದಿಂದಲೇ ನಾಡದೇವಿಗೆ ಬೆಳ್ಳಿ ಕಿರೀಟ ಮಾಡಿಸಿದ್ದಾರೆ

ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಿಂದ ಬೆಳಗಾವಿ ಜಿಲ್ಲೆಯ ಅಜ್ಜಿಯೊಬ್ಬರು ಮುತ್ತೈದೆಯರಿಗೆ ಉಡಿ ತುಂಬಿ, ಹೋಳಿಗೆ ಊಟ ಹಾಕಿಸಿದರು. ಇಂದು ಅದೇ ಬೆಳಗಾವಿ ಜಿಲ್ಲೆಯ ಮತ್ತೋರ್ವ ಮಹಿಳೆ ಕೂಡಿಟ್ಟಿದ್ದ ಗೃಹಲಕ್ಷ್ಮಿ ಹಣದಿಂದ ಪುತ್ರನಿಗೆ ಹೊಸ ಬೈಕ್​ ಕೊಡಿಸಿದ್ದಾರೆ. ಈಗ ವಿಜಯಪುರ ಜಿಲ್ಲೆಯ ಯಜಮಾನಿಯೊಬ್ಬರು ಕೂಡಿಟ್ಟಿದ್ದ ಇದೇ ಗೃಹಲಕ್ಷ್ಮಿ ಹಣದಿಂದಲೇ ನಾಡದೇವಿಗೆ ಬೆಳ್ಳಿ ಕಿರೀಟ ಮಾಡಿಸಿದ್ದಾರೆ

2 / 7
ಕಳೆದ ಒಂದೂವರೆ ವರ್ಷದಿಂದ ಬಂದ ಭಾಗ್ಯಲಕ್ಷ್ಕೀ ಯೋಜನೆ ಹಣ ಕೂಡಿಟ್ಟಿದ್ದ ವಿಜಯಪುರ ಜಿಲ್ಲೆ ಆಲಮೇಲ ತಾಲೂಕಿನ ಹೂವಿನಹಳ್ಳಿಯ ಮಹಿಳೆ ಭಾಗಮ್ಮ, ದೇವಿಗೆ 250 ಗ್ರಾಂ ತೂಕದ ಬೆಳ್ಳಿ ಕಿರೀಟ ನೀಡಿದ್ದಾರೆ.

ಕಳೆದ ಒಂದೂವರೆ ವರ್ಷದಿಂದ ಬಂದ ಭಾಗ್ಯಲಕ್ಷ್ಕೀ ಯೋಜನೆ ಹಣ ಕೂಡಿಟ್ಟಿದ್ದ ವಿಜಯಪುರ ಜಿಲ್ಲೆ ಆಲಮೇಲ ತಾಲೂಕಿನ ಹೂವಿನಹಳ್ಳಿಯ ಮಹಿಳೆ ಭಾಗಮ್ಮ, ದೇವಿಗೆ 250 ಗ್ರಾಂ ತೂಕದ ಬೆಳ್ಳಿ ಕಿರೀಟ ನೀಡಿದ್ದಾರೆ.

3 / 7
ಕಳೆದ ಒಂದೂವರೆ ವರ್ಷದಿಂದ ಬಂದ ಗೃಹಲಕ್ಷ್ಮಿ ಯೋಜನೆ ಹಣ ಕೂಡಿಟ್ಟ 250 ಗ್ರಾಮ ತೂಕದ ಬೆಳ್ಳಿ ಕಿರೀಟ ಮಾಡಿಸಿದ್ದ ಭಾಗಮ್ಮ ಬಿರಾದಾರ, ಇಂದು(ಅಕ್ಟೋಬರ್ 11) ದಸರಾ ಆಯುಧ ಪೂಜೆ ದಿನದಂದು ನಾಡದೇವಿಗೆ ಬೆಳ್ಳಿ ಕಿರೀಟ ಅರ್ಪಣೆ ಮಾಡಿದರು

ಕಳೆದ ಒಂದೂವರೆ ವರ್ಷದಿಂದ ಬಂದ ಗೃಹಲಕ್ಷ್ಮಿ ಯೋಜನೆ ಹಣ ಕೂಡಿಟ್ಟ 250 ಗ್ರಾಮ ತೂಕದ ಬೆಳ್ಳಿ ಕಿರೀಟ ಮಾಡಿಸಿದ್ದ ಭಾಗಮ್ಮ ಬಿರಾದಾರ, ಇಂದು(ಅಕ್ಟೋಬರ್ 11) ದಸರಾ ಆಯುಧ ಪೂಜೆ ದಿನದಂದು ನಾಡದೇವಿಗೆ ಬೆಳ್ಳಿ ಕಿರೀಟ ಅರ್ಪಣೆ ಮಾಡಿದರು

4 / 7
ದೇವಿಗೆ ಬೆಳ್ಳಿ ಕಿರೀಟ ಅರ್ಪಣೆ ಮಾಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಭಾಗಮ್ಮ, ಸಿಎಂ ಸಿದ್ದರಾಮಯ್ಯ ನೇತೃತ್ಬದ ಕಾಂಗ್ರೆಸ್ ಸರ್ಕಾರದಿಂದ ಸಾಕಷ್ಟು ಅನುಕೂಲವಾಗಿದೆ ಎಂದಿದ್ದಾರೆ.

ದೇವಿಗೆ ಬೆಳ್ಳಿ ಕಿರೀಟ ಅರ್ಪಣೆ ಮಾಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಭಾಗಮ್ಮ, ಸಿಎಂ ಸಿದ್ದರಾಮಯ್ಯ ನೇತೃತ್ಬದ ಕಾಂಗ್ರೆಸ್ ಸರ್ಕಾರದಿಂದ ಸಾಕಷ್ಟು ಅನುಕೂಲವಾಗಿದೆ ಎಂದಿದ್ದಾರೆ.

5 / 7
250 ಗ್ರಾಮ ತೂಕದ ಬೆಳ್ಳಿ ಕಿರೀಟ ಮಾಡಿಸಿದ್ದ ಭಾಗಮ್ಮ ಬಿರಾದಾರ, ಇಂದು(ಅಕ್ಟೋಬರ್ 11) ದಸರಾ ಆಯುಧ ಪೂಜೆ ದಿನದಂದು ನಾಡದೇವಿಗೆ ಬೆಳ್ಳಿ ಕಿರೀಟ ಅರ್ಪಣೆ ಮಾಡಿ ಆಶೀರ್ವಾದ ಪಡೆದರು.

250 ಗ್ರಾಮ ತೂಕದ ಬೆಳ್ಳಿ ಕಿರೀಟ ಮಾಡಿಸಿದ್ದ ಭಾಗಮ್ಮ ಬಿರಾದಾರ, ಇಂದು(ಅಕ್ಟೋಬರ್ 11) ದಸರಾ ಆಯುಧ ಪೂಜೆ ದಿನದಂದು ನಾಡದೇವಿಗೆ ಬೆಳ್ಳಿ ಕಿರೀಟ ಅರ್ಪಣೆ ಮಾಡಿ ಆಶೀರ್ವಾದ ಪಡೆದರು.

6 / 7
ಇನ್ನು ಭಾಗಮ್ಮ ಬಿರಾದಾರ ಅವರು ಈ ಕಾರ್ಯಕ್ಕೆ ಸ್ಥಳೀಯ‌ ಮುಖಂಡರು ಮೆಚ್ಚುಗೆ ವ್ಯಕ್ತಡಿಸಿದ್ದಾರೆ. ಅಲ್ಲದೇ ಸಿಂದಗಿ ಕ್ಷೇತ್ರದ ಶಾಸಕ ಅಶೋಕ ಮನಗೂಳಿ ಅವರು ಭಾಗಮ್ಮ ಅವರನ್ನು ಸನ್ಮಾನಿಸಿ ಗೌರವಿಸಿದ್ದಾರೆ.

ಇನ್ನು ಭಾಗಮ್ಮ ಬಿರಾದಾರ ಅವರು ಈ ಕಾರ್ಯಕ್ಕೆ ಸ್ಥಳೀಯ‌ ಮುಖಂಡರು ಮೆಚ್ಚುಗೆ ವ್ಯಕ್ತಡಿಸಿದ್ದಾರೆ. ಅಲ್ಲದೇ ಸಿಂದಗಿ ಕ್ಷೇತ್ರದ ಶಾಸಕ ಅಶೋಕ ಮನಗೂಳಿ ಅವರು ಭಾಗಮ್ಮ ಅವರನ್ನು ಸನ್ಮಾನಿಸಿ ಗೌರವಿಸಿದ್ದಾರೆ.

7 / 7
 ಗೃಹ ಲಕ್ಷ್ಮೀ ಯೊಜನೆಯ ಹಣದಿಂದ ಅದೆಷ್ಟೋ ಕುಟುಂಬ ನಿರ್ವಹಣೆಗೆ ಸಹಾಯಕವಾಗಿದೆ. ಸಿಎಂ ಸಿದ್ದರಾಮಯ್ಯನವರಿಗೆ ನಾಡದೇವಿ ಆಶಿರ್ವಾದ ಇರಲಿ. ಸಿದ್ದರಾಮಯ್ಯ ಸರ್ಕಾರದ ಸೇವೆ ಹಿಗೇ ಮುಂದುವರೆಯಲಿ ಎಂದು ಅಭಿಲಾಷೆ ವ್ಯಕ್ತಪಡಿಸಿದರು.

ಗೃಹ ಲಕ್ಷ್ಮೀ ಯೊಜನೆಯ ಹಣದಿಂದ ಅದೆಷ್ಟೋ ಕುಟುಂಬ ನಿರ್ವಹಣೆಗೆ ಸಹಾಯಕವಾಗಿದೆ. ಸಿಎಂ ಸಿದ್ದರಾಮಯ್ಯನವರಿಗೆ ನಾಡದೇವಿ ಆಶಿರ್ವಾದ ಇರಲಿ. ಸಿದ್ದರಾಮಯ್ಯ ಸರ್ಕಾರದ ಸೇವೆ ಹಿಗೇ ಮುಂದುವರೆಯಲಿ ಎಂದು ಅಭಿಲಾಷೆ ವ್ಯಕ್ತಪಡಿಸಿದರು.

ಅಶೋಕ ಯಡಳ್ಳಿ, ವಿಜಯಪುರ

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us