AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜುಗೌಡ ಪುತ್ರನಿಂದ ಟೋಲ್ ಸಿಬ್ಬಂದಿ ಮೇಲೆ ಹಲ್ಲೆ; ಮಗನ ತಪ್ಪಿಗೆ ಕ್ಷಮೆಯಾಚಿಸಿದ ತಂದೆ

ಬಿಜೆಪಿ ಮುಖಂಡ ವಿಜು ಗೌಡ ಪಾಟೀಲ್​ ಪುತ್ರ ಸಮರ್ಥ ಗೌಡ ಮತ್ತು ಗೆಳೆಯರಿಂದ ಟೋಲ್ ಸಿಬ್ಬಂದಿ ಮೇಲೆ ಹಲ್ಲೆ ನಡೆದಿತ್ತು. ಈ ಹಿನ್ನೆಲೆ ಥಳಿತಕ್ಕೊಳಗಾಗಿದ್ದ ಟೋಲ್ ಸಿಬ್ಬಂದಿ ಯಾವುದೇ ದೂರು ದಾಖಲಿಸದೇ ಇದ್ದರೂ, ತನ್ನ ಮಗನ ತಪ್ಪಿಗೆ ನಾನು ಕ್ಷಮೆ ಕೇಳುತ್ತೇನೆ ಎಂದು ವಿಜು ಗೌಡ ಪಾಟೀಲ್ ಹೇಳಿದ್ದಾರೆ.

ವಿಜುಗೌಡ ಪುತ್ರನಿಂದ ಟೋಲ್ ಸಿಬ್ಬಂದಿ ಮೇಲೆ ಹಲ್ಲೆ; ಮಗನ ತಪ್ಪಿಗೆ ಕ್ಷಮೆಯಾಚಿಸಿದ ತಂದೆ
ವಿಜುಗೌಡ ಪುತ್ರನಿಂದ ಟೋಲ್ ಸಿಬ್ಬಂದಿ ಮೇಲೆ ಹಲ್ಲೆ
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Oct 31, 2025 | 10:38 AM

Share

ವಿಜಯಪುರ, ಅಕ್ಟೋಬರ್ 31: ಕನ್ನೊಳ್ಳಿ ಗ್ರಾಮದ ಬಳಿಯ ಟೋಲ್‌ನಲ್ಲಿ ಬಿಜೆಪಿ ಮುಖಂಡ ವಿಜು ಗೌಡ ಪಾಟೀಲ್ ​ (Vijugouda Patil) ​ ಪುತ್ರ ಸಮರ್ಥ ಗೌಡ ಮತ್ತು ಗೆಳೆಯರಿಂದ ಟೋಲ್ ಸಿಬ್ಬಂದಿ ಮೇಲೆ ಹಲ್ಲೆ ನಡೆದಿತ್ತು. ಈ ಹಿನ್ನೆಲೆ ಯಾವುದೇ ದೂರು ದಾಖಲಾಗಿಲ್ಲ. ಹೀಗಿರುವಾಗ ತನ್ನ ಮಗನ ತಪ್ಪಿಗೆ ನಾನು ಕ್ಷಮೆ ಕೇಳುತ್ತೇನೆ ಎಂದು ವಿಜು ಗೌಡ ಪಾಟೀಲ್ ಹೇಳಿದ್ದಾರೆ.

ಮಗನ ತಪ್ಪಿಗೆ ಕ್ಷಮೆಯಾಜಿಸಿದ ವಿಜು ಗೌಡ

ಸಮರ್ಥ ಗೌಡ ಮತ್ತು ಆತನ ಸ್ನೇಹಿತರಿಂದ ಹಲ್ಲೆಗೊಳಗಾದ ಟೋಲ್ ಸಿಬ್ಬಂದಿ ಸಂಗಪ್ಪ , ಈ ಗಲಾಟೆಯಿಂದ ನನಗೆ ಯಾವುದೇ ಹಾನಿಯಾಗಿಲ್ಲ. ಹೀಗಾಗಿ ನಾನು ದೂರು ನೀಡಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ.  ಇದೇ ಕಾರಣಕ್ಕೆ ಈ ಘಟನೆ ಕುರಿತು ಯಾವುದೇ ದೂರು ದಾಖಲಾಗಿಲ್ಲ. ಹೀಗಿರುವಾಗ ಈ ಘಟನೆ ಕುರಿತು ಮಾತನಾಡಿರುವ ವಿಜು ಗೌಡ, ಟೋಲ್ ಸಿಬ್ಬಂದಿ ನನ್ನ ಮಗನ ಮುಂದೆ ಅವಾಚ್ಯ ಶಬ್ದಗಳಿಂದ ಬೈದಿದ್ದರು. ಮಗನ ಮುಂದೆ ತಂದೆಗೆ ಬೈದರೆ ಯಾರಿಗೆ ತಾನೇ ಕೋಪ ಬರುವುದಿಲ್ಲ, ಆಗ ನನ್ನ ಮಗ ಹಾಗೂ ಆತನ ಗೆಳೆಯರು ಸೇರಿ ಸಿಬ್ಬಂದಿಗೆ ಥಳಿಸಿದ್ದರು ಎಂದಿದ್ದಾರೆ.

ನನ್ನ ಮಗ ಮಾಡಿದ್ದು ತಪ್ಪು, ಸಿಬ್ಬಂದಿ ಕೂಡ ಆ ರೀತಿ ಮಾತನಾಡಿದ್ದು ತಪ್ಪು. ನನ್ನ ಮಗನಿಗೆ ಕ್ಷಮೆ ಕೇಳುವಂತೆ ನಾನು ಹೇಳಿದ್ದೇನೆ. ಅವನು ಕ್ಷಮೆ ಕೇಳದಿದ್ದರೂ ನಾನು ಅವನ ಪರವಾಗಿ ಕ್ಷಮೆ ಕೇಳುತ್ತೇನೆ ಎಂದಿರುವ ವಿಜು ಗೌಡ, ಈ ವಿಷಯದಲ್ಲೀಗ ರಾಜಕೀಯ ಮಧ್ಯಪ್ರವೇಶೆಸಿದ ಕಾರಣ ಈ ಮಟ್ಟಕ್ಕೆ ಬೆಳೆಯುತ್ತಿದೆ ಎಂದು ಆರೋಪಿಸಿದ್ದಾರೆ. ನನ್ನ ಮಗ ಮತ್ತು ಸಿಬ್ಬಂದಿ ಇಬ್ಬರೂ ಪರಸ್ಪರ ಕ್ಷಮೆ ಕೇಳಿ ಪ್ರಕರಣವನ್ನು ಸುಖಾಂತ್ಯಗೊಳಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ನಡೆದಿದ್ದೇನು?

ಬಿಜೆಪಿ ಮುಖಂಡ ವಿಜು ಗೌಡ ಪಾಟೀಲ್​ ಪುತ್ರ ಸಮರ್ಥ ಗೌಡ ಮತ್ತು ಗೆಳೆಯರಿಂದ ಟೋಲ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವಂತಹ ಘಟನೆ ಜಿಲ್ಲೆಯ ಕನ್ನೊಳ್ಳಿ ಗ್ರಾಮದ ಬಳಿಯ ಟೋಲ್‌ನಲ್ಲಿ ನಡೆದಿತ್ತು. ಸಮರ್ಥ ಗೌಡ ವಿಜಯಪುರದಿಂದ ಬ್ಲ್ಯಾಕ್‌ ಕಲರ್‌ ಥಾರ್‌ನಲ್ಲಿ ಸಿಂದಗಿ ಕಡೆ ಹೊರಟ್ಟಿದ್ದರು. ಈ ವೇಳೆ ಟೋಲ್ ಸಿಬ್ಬಂದಿ ಸಂಗಪ್ಪ ಹಣ ಕೇಳಿದ್ದಕ್ಕೆ ವಿಜು ಗೌಡ ಪುತ್ರ ಎಂದಿದ್ದಾರೆ. ಯಾವ ವಿಜುಗೌಡ ಎಂದು ಸಂಗಪ್ಪ ಕೇಳಿದ್ದಕ್ಕೆ ಥಳಿಸಿರುವ ಆರೋಪ ಮಾಡಲಾಗಿದೆ.  ಹಲ್ಲೆಗೊಳಗಾದ ಸಂಗಪ್ಪಗೆ ಸಿಂದಗಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಇದನ್ನೂ ಓದಿ ಹಣ ಕೇಳಿದ್ದಕ್ಕೆ ಟೋಲ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಬಿಜೆಪಿ ಮುಖಂಡ ವಿಜು ಗೌಡ ಪಾಟೀಲ್‌ ಪುತ್ರ

ಈ ಹಿಂದೆಯೂ ದಾಂಧಲೆ ಮಾಡಿಕೊಂಡಿದ್ದ ಸಮರ್ಥ ಗೌಡ

ಈ ಹಿಂದೆಯೂ ಸಮರ್ಥಗೌಡ ಪಾಟೀಲ್ ಗುಂಡು ಹಾರಿಸಿದ್ದ ವಿಡಿಯೋ ವೈರಲ್ ಆಗಿದ್ದವು. ವಿಜಯಪುರದ ತೋಟದ ಮನೆಯಲ್ಲಿ ಸ್ನೇಹಿತರ ಜೊತೆ ಸೇರಿ ಪಿಸ್ತೂಲ್ನಿಂದ ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಈ ಘಟನೆ 2023 ರ ವಿಧಾನಸಭಾ ಚುನಾವಣೆ ವೇಳೆಯಲ್ಲಿ‌ ಜಿಲ್ಲೆಯಲ್ಲಿ ವಿವಾದ ಸೃಷ್ಟಿಸಿತ್ತು. ಇದೀಗ ಟೋಲ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವ ಸಮರ್ಥ ಗೌಡ ವಿಡಿಯೋ ಮತ್ತೊಮ್ಮೆ ವೈರಲ್ ಆಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More