AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಕ್ಫ್​ ವಿರುದ್ಧ ವಿಜಯಪುರದಲ್ಲಿ ಯತ್ನಾಳ್ ​ಅಹೋರಾತ್ರಿ ಧರಣಿ

Vijayapura Waqf Row: ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಸೋಮವಾರದಿಂದ ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಎದುರು ಅಹೋರಾತ್ರಿ ಧರಣಿ ನಡೆಸಲಿದ್ದಾರೆ. ರೈತರ, ಮಠಗಳ ಮತ್ತು ಸರ್ಕಾರಿ ಜಮೀನುಗಳ ಪಹಣಿಯಲ್ಲಿ ವಕ್ಫ್​​ ಆಸ್ತಿ ಅಂತ ನಮೂದಾಗಿದ್ದನ್ನು ತೆಗೆಯುವಂತೆ ಆಗ್ರಹಿಸಲಿದ್ದಾರೆ.

ವಕ್ಫ್​ ವಿರುದ್ಧ ವಿಜಯಪುರದಲ್ಲಿ ಯತ್ನಾಳ್ ​ಅಹೋರಾತ್ರಿ ಧರಣಿ
ವಕ್ಫ್​ ವಿರುದ್ಧ ವಿಜಯಪುರದಲ್ಲಿ ಯತ್ನಾಳ್ ​ಅಹೋರಾತ್ರಿ ಧರಣಿ
ಅಶೋಕ ಯಡಳ್ಳಿ, ವಿಜಯಪುರ
| Updated By: ವಿವೇಕ ಬಿರಾದಾರ|

Updated on: Nov 03, 2024 | 1:37 PM

Share

ವಿಜಯಪುರ, ನವೆಂಬರ್​ 03: ರೈತರು, ಸಂಘ-ಸಂಸ್ಥೆಗಳ, ಮಠಗಳ ಮತ್ತು ಸರ್ಕಾರಿ ಜಮೀನುಗಳ ಪಹಣಿಯಲ್ಲಿ ವಕ್ಪ್ ಆಸ್ತಿ (Waqf) ಎಂದು ನಮೂದು ಮಾಡಿರುವುದನ್ನು ತೆಗೆಯುವಂತೆ ಒತ್ತಾಯಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ (Basangouda Patil Yatnal)​ ಸೋಮವಾರ (ನ.04) ರಿಂದ ವಿಜಯಪುರ (Vijayapura) ಜಿಲ್ಲಾಧಿಕಾರಿ ಕಚೇರಿ ಎದುರು ಅಹೋರಾತ್ರಿ ಧರಣಿ ನಡೆಸಲಿದ್ದಾರೆ.

ಬೆಳಗ್ಗೆ 11 ಗಂಟೆಗೆ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗು ಶಾಸಕ ಬಸನಗೌಡ ಪಾಟೀಲ​ ಯತ್ನಾಳ್​ ಹಾಗೂ ಬೆಂಬಲಿಗರು ಪ್ರತಿಭಟನಾ ಮೆರವಣಿಗೆ ನಡೆಸಲಿದ್ದಾರೆ. ಬಳಿಕ ಜಿಲ್ಲಾಧಿಕಾರಿ ಕಚೇರಿ ಹೊರ ಭಾಗದಲ್ಲಿ ಅಹೋರಾತ್ರಿ ಅನಿರ್ಧಿಷ್ಟಾವಧಿ ಹೋರಾಟ ಧರಣಿ ನಡೆಸಲಿದ್ದಾರೆ.

ಪಹಣಿಯ ಯಾವುದೇ ಕಾಲಂ‌ ದಲ್ಲಿಯೂ ವಕ್ಫ್​ ಆಸ್ತಿ ಎಂದು ಇರಬಾರದು. ಪಹಣಿಯಲ್ಲಿ ರೈತರ ಹೆಸರು ಮಾತ್ರ ಇರಬೇಕು. ರೈತರ ಆಸ್ತಿಗಳಿಗೆ ಸಂಬಂಧಿಸಿದ ತಕರಾರು ಸಾಮಾನ್ಯ ಕೋರ್ಟ್​​ಗಳಲ್ಲೇ ಇತ್ಯರ್ಥ ಆಗಬೇಕು. ವಕ್ಫ್​ ನ್ಯಾಯಾಲಯಕ್ಕೆ ಅವಕಾಶ ಕಲ್ಪಿಸಬಾರದು. ವಕ್ಫ್​ ಅದಾಲತ್ ಮಾಡುವುದರಿಂದ ಸರ್ಕಾರಿ ನ್ಯಾಯಾಲಯಕ್ಕೆ ಮಹತ್ವ ಕಡಿಮೆ ಆಗಲಿದೆ. ಎಲ್ಲಿಯೂ ವಕ್ಫ್​ ಅದಾಲತ್ ನಡೆಸಬಾರದು ಎಂದು ಆಗ್ರಹಿಸಲಿದ್ದಾರೆ.

ಇದನ್ನೂ ಓದಿ: ಸಿಡಿದೆದ್ದ ಯತ್ನಾಳ್​: ಪ್ರಧಾನಿ ಮೋದಿ ಅಂಗಳ ತಲುಪಿದ ವಕ್ಫ್ ಆಸ್ತಿ ಸಮರ!

ಈಗಾಗಲೇ ವಕ್ಫ್​ ಆಸ್ತಿ ಅಂತ ನಮೂದು ಆಗಿದ್ದನ್ನು ತೆಗೆದು ಹಾಕಬೇಕು. ಮುಂದಿನ ದಿನಗಳಲ್ಲಿ ನೋಟಿಸ್​ ನೀಡದಂತೆ ಜಿಲ್ಲಾಧಿಕಾರಿ ಲಿಖಿತವಾಗಿ ಆದೇಶ ಹೊರಡಿಸಬೇಕು. ವಕ್ಫ್​ ಕಾಯ್ದೆಯನ್ನು ರದ್ದುಪಡಿಸಬೇಕು. ಇಡೀ ದೇಶದ ಎಲ್ಲ ರಾಜ್ಯಗಳಲ್ಲಿಯ ವಕ್ಫ್ ಆಸ್ತಿಗಳನ್ನು ರಾಷ್ಟ್ರೀಕರಣಗೊಳಿಸಬೇಕು ವಕ್ಪ್ ಆಸ್ತಿ ದೇಶದ ಆಸ್ತಿಯೆಂದು ಸರ್ಕಾರದ ಸುಪರ್ದಿಗೆ ಪಡೆಯಬೇಕು. 1974 ರ ಮತ್ತು ತದ ನಂತರದ ವಕ್ಫ್ ಗೆಜೆಟ್ ನೋಟಿಫಿಕೇಶನ್​ಗಳನ್ನು ಹಿಂಪಡೆಯಬೇಕು. ಇಲ್ಲಿಯವರೆಗಿನ ವಕ್ಫ್ ಬೋರ್ಡ್​ ಗಳಿಸಿದ ಆದಾಯವನ್ನು ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಒತ್ತಾಯಿಸಲಿದ್ದಾರೆ.

ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ಕಾನೂನು ಕ್ರಮ ಜರುಗಿಸಬೇಕು. ಈ‌ ಎಲ್ಲ ಬೇಡಿಕೆ ಇಡೇರುವವರೆಗು ಹೋರಾಟ ಮಾಡಲಿದ್ದೇವೆ ಎಂದು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಪ್ರತಿಭಟನೆಯಲ್ಲಿ ಬಿಜೆಪಿ ಕಾರ್ಯಕರ್ತರು, ಬೆಂಬಲಿಗರು ಮತ್ತು ಅಭಿಮಾನಿಗಳು ಭಾಗಿಯಾಗಲಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ