AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾವರ್ಕರ್​ರನ್ನು ವಿರೋಧಿಸುವವರು ಅವರ ಚಪ್ಪಲಿ ಕಿಮ್ಮತ್ತು ಆಗಲ್ಲ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

ಸಾವರ್ಕರ್​ ಅವರನ್ನು ವಿರೋಧಿಸಿ ಮಾತಾಡುವವರು ಅವರ ಚಪ್ಪಲಿ ಕಿಮ್ಮತ್ತು ಆಗಲ್ಲ ಎಂದು ವಿಜಯಪುರದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಸಾವರ್ಕರ್​ರನ್ನು ವಿರೋಧಿಸುವವರು ಅವರ ಚಪ್ಪಲಿ ಕಿಮ್ಮತ್ತು ಆಗಲ್ಲ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ
TV9 Web
| Edited By: |

Updated on:Aug 21, 2022 | 10:42 PM

Share

ವಿಜಯಪುರ: ಸಾವರ್ಕರ್​ (Savarkar) ಅವರನ್ನು ವಿರೋಧಿಸಿ ಮಾತಾಡುವವರು ಅವರ ಚಪ್ಪಲಿ ಕಿಮ್ಮತ್ತು ಆಗಲ್ಲ ಎಂದು ವಿಜಯಪುರದಲ್ಲಿ (Vijayapura) ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal)  ಹೇಳಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ ನೇತೃತ್ವದಲ್ಲಿ ವೀರ ಸಾವರ್ಕರ ವೇದಿಕೆಯಲ್ಲಿ ಶ್ರೀ ಗಜಾನನ ಮಹಾಮಂಡಳ ಸಭೆ ನಡೆಯಿತು. ಸಭೆಯಲ್ಲಿ ವಿವಿಧ ಗಣೇಶೋತ್ಸವ ಮಂಡಳಿಗಳು ಹಾಗೂ ಆಧಿಕಾರಿಗಳು ಭಾಗಿಯಾಗಿದ್ದರು.

ಈ ವೇಳೆ ಮಾತನಾಡಿದ ಅವರು ಸಾವರ್ಕರ್​ ತಪಸ್ಸಿನ ಬಗ್ಗೆ ಮಾತಾಡುತ್ತೀರಾ ? ಎತ್ತಿನ ಬದಲಾಗಿ ಸಾವರ್ಕರ್ ಅವರನ್ನು ಕಟ್ಟಿ ಗಾಣ ತೆಗೆಯುತ್ತಿದ್ದರು. ಅಂಥ ಜಾಗದಲ್ಲಿ ಕುಳಿತು ಸಾವರ್ಕರ್ ನೂರಾರು ಪುಸ್ತಕ ಬರೆದರು. ಅಂತಹ ಮಹಾನ್ ವ್ಯಕ್ತಿ ಬಗ್ಗೆ ಮಾತನಾಡುತ್ತೀರಿ ಎಂದು ವಾಗ್ದಾಳಿ ಮಾಡಿದರು.

ದೇಶದಲ್ಲಿನ ಸಾವರ್ಕರ ವಿರೋಧವಾಗಿ ಮಾತನಾಡುವವರು ಅಂಡಮಾನ್ ನಿಕೋಬಾರ್ ದ್ವೀಪದಲ್ಲಿ ಸಾರ್ವಕರ್ ಇಟ್ಟಿದ್ದ ಜಾಗದಲ್ಲಿ ಒಂದು ವಾರ ಕಾಲಾಪಾನಿ ಶಿಕ್ಷೆಗೆ ಒಳಗಾಗಿ ಸಾವರ್ಕರ್ ಇದ್ದ ರೂಂನಲ್ಲಿರಬೇಕು. ಅಪ್ಪಗ ಹುಟ್ಟಿದ್ದರೆ ಒಂದು ವಾರ ಅಲ್ಲಿರಬೇಕೆಂದು ಸವಾಲು ಹಾಕಿದರು.

ಎತ್ತಿನ ಬದಲಾಗಿ ಸಾವರ್ಕರ ಅವರನ್ನು ಕಟ್ಟಿ ಗಾಣ ತೆಗೆಯುತ್ತಿದ್ದರು. ಹಿಂದೆ ಚಾಬೂಕ್ ನಿಂದ ಹೊಡೆಯುತ್ತಿದ್ದರು, ಇಂಥದ್ದನ್ನು ಯಾರು ತಾಳುತ್ತಾರೆ ? ಎಂದು ಪ್ರಶ್ನಿಸಿದ್ದಾರೆ. ಸಾರ್ವಜನಿಕ ಗಣೇಶ ಮೂರ್ತಿ ಬಳಿ ಸಾವರ್ಕರ್ ಫೋಟೋ ಇಡಿ. ನಾವು ಜಿಲ್ಲೆಯಾದ್ಯಂತ ಎಲ್ಲರಿಗೂ ಸಾವರ್ಕರ್‌ ಫೋಟೋ ನೀಡುತ್ತೇವೆ. ತಮ್ಮ ಇಡೀ ಜೀವನವನ್ನ ಭಾರತ ಮಾತೆಗೆ ಸಾವರ್ಕರ್‌ ಅರ್ಪಿಸಿದ್ದರು. ಹೀಗಾಗಿ ಸಾವರ್ಕರ್‌ರನ್ನು ನಾವು ನೆನಪಿಸಿಕೊಳ್ಳಬೇಕು ಎಂದು ತಿಳಿಸಿದರು.

ಗಣೇಶೋತ್ಸವದಲ್ಲಿ ಡಿಜೆ ಬಳಕೆಗೆ ಸುಪ್ರೀಂ ಕೋರ್ಟ್ ನಿಷೇಧ ಹೇರಿರುವ ಆದೇಶ ಹಿನ್ನಲೆಯ ವಿಚಾರವಾಗಿ ಮಾತನಾಡಿದ ಅವರು ಸುಪ್ರೀಂ ಕೋರ್ಟಿನ ಆದೇಶ ಮಸೀದಿ ಮೇಲಿನ ಮೈಕ್ ಗೂ ಇದೆ, ಗಣಪತಿಗೂ ಇದೆ. ಮಸೀದಿ ಮೇಲಿನ ಮೈಕ್ ಯಾವಾಗ ಬಂದ್ ಆಗುತ್ತದೆಯೋ ಅಂದು ಗಣಪತಿ ಮುಂದಿನ ಡಿಜೆ ಬಂದ್ ಆಗುತ್ತದೆ ಎಂದು ಹೇಳಿದ್ದಾರೆ.

Published On - 10:40 pm, Sun, 21 August 22

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು