AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನ್ಯಕೋಮಿನ ಯುವತಿಗೆ ಚಪ್ಪಲಿಯಿಂದ ಥಳಿಸಿದ ನಾಗಠಾಣಾ ಯುವಕ, ಪರಾರಿ

ಆರೋಪಿ ಶ್ರೀಶೈಲ ಅನ್ಯಕೋಮಿನ ಯುವತಿಗೆ ಕೆಲ ದಿನಗಳಿಂದ ಚುಡಾಯಿಸುತ್ತಿದ್ದ. ನಿನ್ನೆ ಯುವತಿ ಕಂಪ್ಯೂಟರ್ ತರಬೇತಿ ಕೇಂದ್ರಕ್ಕೆ ತೆರಳುವಾಗ ಮತ್ತೆ ಮತ್ತೆ ಚುಡಾಯಿಸಿದ್ದಾನೆ. ಆಗ ಅನ್ಯ ಕೋಮಿನ ಯುವತಿಯು ಯುವಕನಿಗೆ ಚಪ್ಪಲಿ ತೋರಿಸಿದ್ದಾರೆ.

ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Feb 13, 2024 | 10:30 AM

Share

ವಿಜಯಪುರ, ಫೆಬ್ರವರಿ 13: ಯುವಕನಮೊಬ್ಬ (youth) ರೋಷಾವೇಶದಿಂದ ಯುವತಿಗೆ ಚಪ್ಪಲಿಯಿಂದ (chappal) ಥಳಿಸುವ ದೃಶ್ಯಗಳು ಸಿಸಿ‌ ಕೆಮೆರಾ ವಿಡಿಯೋದಲ್ಲಿ ಸೆರೆಯಾಗಿದೆ. ವಿಜಯಪುರ ತಾಲೂಕಿನ ನಾಗಠಾಣಾ ಗ್ರಾಮದಲ್ಲಿ ನಿನ್ನೆ ಸೋಮವಾರ ಮಧ್ಯಾಹ್ನ ಘಟನೆ ನಡೆದಿದ್ದು, ಶ್ರೀಶೈಲ‌‌‌ ಮಸಳಿ ಎಂಬ ಯುವಕ ಈ ಕೃತ್ಯವೆಸಗಿದ್ದಾನೆ ಎನ್ನಲಾಗಿದೆ. ನಾಗಠಾಣಾ ಗ್ರಾಮದ (Nagathan, Vijayapura) ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ಅನ್ಯ ಕೋಮಿನ ಯುವತಿ ಥಳಿತಕ್ಕೊಳಗಾದ ಮಹಿಳೆ.

ಆರೋಪಿ ಶ್ರೀಶೈಲ ಅನ್ಯಕೋಮಿನ ಯುವತಿಗೆ ಕೆಲ ದಿನಗಳಿಂದ ಚುಡಾಯಿಸುತ್ತಿದ್ದ. ನಿನ್ನೆ ಯುವತಿ ಕಂಪ್ಯೂಟರ್ ತರಬೇತಿ ಕೇಂದ್ರಕ್ಕೆ ತೆರಳುವಾಗ ಮತ್ತೆ ಮತ್ತೆ ಚುಡಾಯಿಸಿದ್ದಾನೆ. ಆಗ ಅನ್ಯ ಕೋಮಿನ ಯುವತಿಯು ಯುವಕನಿಗೆ ಚಪ್ಪಲಿ ತೋರಿಸಿದ್ದಾರೆ.

Also Read: ಮುಂದುವರೆದ ಬೀಟಮ್ಮ ಗ್ಯಾಂಗ್ ಉಪಟಳ; ಛತ್ರಿಮರ ದೇಗುಲ ಬಳಿ ಬೀಡುಬಿಟ್ಟ 26 ಕಾಡಾನೆಗಳು

ಇದರಿಂದ ಆಕ್ರೋಶಗೊಂಡ ಶ್ರೀಶೈಲ ಕಂಪ್ಯೂಟರ್ ತರಬೇತಿ ಕೇಂದ್ರದ ಒಳ ಹೋಗಿ ಯುವತಿಯನ್ನು ಹೊರ ತಂದು ಚಪ್ಪಲಿಯಿಂದ ಥಳಿಸಿದ್ದಾನೆ. ಈ ಬಗ್ಗೆ ಯುವತಿ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ‌ನೀಡಿದ್ದಾರೆ. ದೂರು‌‌ ನೀಡುತ್ತಿದ್ದಂತೆ ಯುವಕ ಶ್ರೀಶೈಲ‌ ಪರಾರಿಯಾಗಿದ್ದಾನೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನ್ಯಾಯಕ್ಕಾಗಿ ಯುವತಿ ಹಾಗೂ ಪೋಷಕರು ಒತ್ತಾಯಿಸಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ