ಬಿಜೆಪಿಯ ಶಾಲು ಹೊದೆಸಿ ಸನ್ಮಾನಿಸುವಾಗ ಪರಸ್ಪರ ಜೋಕ್ ಕಟ್ ಮಾಡಿ ನಕ್ಕ ನಿಖಿಲ್-ವಿಜಯೇಂದ್ರ

Updated on: Oct 26, 2024 | 7:27 PM

ಬಿಜೆಪಿ ಕಾರ್ಯಕರ್ತರು ವೇದಿಕೆ ಮೇಲೆ ಆಸೀನರಾಗಿದ್ದ ಗಣ್ಯರಿಗೆ ಪಕ್ಷದ ಶಾಲುಗಳನ್ನು ಹೊದಿಸಿ ಸನ್ಮಾನಿಸುವಾಗ ವಿಜಯೇಂದ್ರ ಅವರು ನಿಖಿಲ್ ಹೆಗಲ ಮೇಲೆ ಬಿಜೆಪಿ ಶಾಲು ನೋಡಿ ಏನೋ ತಮಾಷೆ ಮಾಡುತ್ತಾರೆ. ಅವರು ಹೇಳಿದ್ದು ಕೇಳಿಸುವುದಿಲ್ಲ. ಪ್ರತಿಯಾಗಿ ನಿಖಿಲ್ ಕೂಡ ಏನನ್ನೋ ಹೇಳಿದಾಗ ಇಬ್ಬರೂ ನಗುತ್ತಾರೆ.

ಬೆಂಗಳೂರು: ಬಿಜೆಪಿ ಕೇಂದ್ರ ಕಚೇರಿಯಲ್ಲಿ ಇಂದು ನಡೆದ ಬಿಜೆಪಿ-ಜೆಡಿಎಸ್ ಆಂತರಿಕ ಸಮನ್ವಯ ಸಭೆಯಲ್ಲಿ ಚನ್ನಪಟ್ಟಣ ಕ್ಷೇತ್ರಕ್ಕೆ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿರುವ ನಿಖಿಲ್ ಕುಮಾರಸ್ವಾಮಿ ಭಾಗವಹಿಸಿದರು. ನಗರ ಮತ್ತು ಚನ್ನಪಟ್ಟಣದಿಂದ ಆಗಮಿಸಿದ ಎರಡೂ ಪಕ್ಷಗಳ ಕಾರ್ಯಕರ್ತರು ಸಭೆಯಲ್ಲಿ ಪಾಲ್ಗೊಂಡರು. ವೇದಿಕೆ ಮೇಲೆ ನಿಖಿಲ್ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಶಾಸಕ ಸಿಎನ್ ಅಶ್ವಥ್ ನಾರಾಯಣ ಹಾಗೂ ಬೇರೆ ಕೆಲ ನಾಯಕರು ಆಸೀನರಾಗಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಕಾಂಗ್ರೆಸ್ ಭ್ರಷ್ಟರೆಲ್ಲರೂ ಸತೀಶ್ ಸೈಲ್ ಹಾದಿ ಹಿಂಬಾಲಿಸಬೇಕಾದ ಸ್ಥಿತಿ ಎದುರಾಗಲಿದೆ: ವಿಜಯೇಂದ್ರ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More