AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಮ ಲೆಕ್ಕಾಧಿಕಾರಿ ಭ್ರಷ್ಟಾಚಾರ;10 ಸಾವಿರ ರೂಪಾಯಿ ಲಂಚ ಸ್ವೀಕರಿಸುವಾಗ ಸಿಸಿಬಿ ಬಲೆಗೆ

ಜಮೀನಿನ ಬಗ್ಗೆ ದೃಢೀಕರಣ ಪತ್ರ ನೀಡಲು ಲಂಚ ಸ್ವೀಕಾರ ಮಾಡಿದ್ದು, 30000 ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಆದರೆ ಇಂದು 10,000 ರೂಪಾಯಿಯನ್ನು ಲಂಚ ಸ್ವೀಕರಿಸುತ್ತಿದ್ದಾಗ ಎಸಿಬಿ ಬಲೆಗೆ ಮಂಜುನಾಥ್ ಸಿಕ್ಕಿಹಾಕಿಕೊಂಡಿದ್ದಾರೆ.

ಗ್ರಾಮ ಲೆಕ್ಕಾಧಿಕಾರಿ ಭ್ರಷ್ಟಾಚಾರ;10 ಸಾವಿರ ರೂಪಾಯಿ ಲಂಚ ಸ್ವೀಕರಿಸುವಾಗ ಸಿಸಿಬಿ ಬಲೆಗೆ
ಪ್ರಾತಿನಿಧಿಕ ಚಿತ್ರ
preethi shettigar
| Edited By: |

Updated on: Mar 24, 2021 | 5:57 PM

Share

ರಾಮನಗರ: ಲಂಚ ಸ್ವೀಕರಿಸುವಾಗ ಗ್ರಾಮ ಲೆಕ್ಕಾಧಿಕಾರಿ ಎಸಿಬಿ ಬಲೆಗೆ ಬಿದ್ದಿರುವ ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಹೊರಳಗಲ್ಲುನಲ್ಲಿ ನಡೆದಿದೆ. ಹೊರಳಗಲ್ಲು ಗ್ರಾಮದ ಲೆಕ್ಕಾಧಿಕಾರಿ ಮಂಜುನಾಥ್ 10,000 ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾರೆ. ಜಮೀನಿನ ಬಗ್ಗೆ ದೃಢೀಕರಣ ಪತ್ರ ನೀಡಲು ಲಂಚ ಸ್ವೀಕಾರ ಮಾಡಿದ್ದು, 30000 ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಆದರೆ ಇಂದು 10,000 ರೂಪಾಯಿಯನ್ನು ಲಂಚ ಸ್ವೀಕರಿಸುತ್ತಿದ್ದಾಗ ಎಸಿಬಿ ಬಲೆಗೆ ಮಂಜುನಾಥ್ ಸಿಕ್ಕಿಹಾಕಿಕೊಂಡಿದ್ದಾರೆ.

ನಗರಸಭೆ ಮೇಲೆ ಎಸಿಬಿ‌ ಅಧಿಕಾರಿಗಳ ದಾಳಿ: ಕೋಲಾರದ ಕೆಜಿಎಫ್​ನಲ್ಲಿ ಎಸಿಬಿ ಅಧಿಕಾರಿಗಳು ನಗರಸಭೆ ಮೇಲೆ ಮಾಸ್ ರೇಡ್ ಮಾಡಿದ್ದು, ನಗರಸಭೆ ಸಿಬ್ಬಂದಿಗಳ ಲಂಚ ಹಾಗೂ ಸಾರ್ವಜನಿಕರಿಗೆ ಅನವಶ್ಯಕ ಕಿರುಕುಳದ ದೂರು ಹಿನ್ನೆಲೆ ದಾಳಿ ನಡೆಸಿದ್ದಾರೆ. ನಗರಸಭೆಯ ಎಲ್ಲಾ ಸಿಬ್ಬಂದಿಗಳನ್ನು ವಿಚಾರಣೆ ನಡೆಸಿದ್ದು, ಕಡತ ಪರಿಶೀಲನೆಯಲ್ಲಿ ಎಸಿಬಿ ಅಧಿಕಾರಿಗಳು ತೊಡಗಿಕೊಂಡಿದ್ದಾರೆ. ಈ ಮಧ್ಯೆ ಅನುದಾನಗಳಲ್ಲಿ ಗೋಲ್‌ಮಾಲ್ ನಡೆದಿರುವ ಶಂಕೆ ಉಂಟಾಗಿದೆ. ನಗರಸಭೆ ಮೇಲೆ ಕೊಲಾರ ಎಸಿಬಿ ಡಿವೈಎಸ್​ಪಿ ಪುರುಷೋತ್ತಮ್ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ.

acb raid

ಎಸಿಬಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿರುವ ದೃಶ್ಯ

ಚಿತ್ರದುರ್ಗದಲ್ಲಿ ರೇಷ್ಮೆ ಇಲಾಖೆ ಅಧಿಕಾರಿ ಲಂಚ ಸ್ವೀಕರಿಸಿವಾಗ ಅರೆಸ್ಟ್: ರೇಷ್ಮೆ ಇಲಾಖೆ ಅಧಿಕಾರಿ ಲಂಚ ಸ್ವೀಕರಿಸುವ ವೇಳೆ ಎಸಿಬಿ ಬಲೆಗೆ ಬಿದ್ದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಗ್ರಾಮ ಪಂಚಾಯತಿ ಸದಸ್ಯ ಜಯಣ್ಣ ಬಳಿ ಸಹಾಯಧನ ನೀಡಲು 10,000 ರೂಪಾಯಿ ಲಂಚ ಸ್ವೀಕಾರ ಮಾಡುವಾಗ ರೇಷ್ಮೆ ನಿರೀಕ್ಷಕ ಶಿವಕುಮಾರ್ ಸಿಕ್ಕಿ ಹಾಕಿಕೊಂಡಿದ್ದಾರೆ. ಎಸಿಬಿ ಡಿವೈಎಸ್​ಪಿ ಬಸವರಾಜ ಮತ್ತು ಪಿಐ ಪ್ರವೀಣ್ ನೇತೃತ್ವದ ದಾಳಿಯಲ್ಲಿ ಈ ಕೃತ್ಯ ಬೆಳಕಿಗೆ ಬಂದಿದೆ.

ಸರ್ಕಾರಿ ಉದ್ಯೋಗದಲ್ಲಿರುವ ಅಧಿಕಾರಿಗಳು ತಮ್ಮ ಕೆಲಸವನ್ನು ಮಾಡಿಕೊಡಿ ಎಂದು ಬರುವ ಸಾರ್ವಜನಿಕರಿಂದ ಲಂಚ ಸ್ವೀಕರಿಸಿರುವ ಅನೇಕ ಉದಾಹರಣೆಗಳಿವೆ. ನೇರವಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಕೆಲ ಅಧಿಕಾರಿಗಳು ಎಸಿಬಿ ಬಲೆಗೆ ಬಿದ್ದಿದ್ದಾರೆ. ಆದರೂ ಕೂಡ ಈ ರೀತಿ ಭ್ರಷ್ಟಾಚಾರ ಇನ್ನೂ ಕಡಿಮೆಯಾಗಿಲ್ಲ.

ಚಾಮರಾಜನಗರದಲ್ಲಿ ಲೇಬರ್‌ ಇನ್​ಸ್ಪೆಕ್ಟರ್​ ಹಾಗೂ ಕಂಪ್ಯೂಟರ್ ಆಪರೇಟರ್‌ ಎಸಿಬಿ ಬಲೆಗೆ: ಚಾಮರಾಜನಗರದಲ್ಲಿ ಮದುವೆ ಸಹಾಯಧನ ಬಿಡುಗಡೆಗೆ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೇಬರ್‌ ಇನ್​ಸ್ಪೆಕ್ಟರ್​ ಹಾಗೂ ಕಂಪ್ಯೂಟರ್ ಆಪರೇಟರ್‌ ಎಸಿಬಿ ಅಧಿಕಾರಿಗಳ ಕೈಗೆ ರೆಡ್​ ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾರೆ. ಸುಮಾರು 3 ಸಾವಿರ ರೂಪಾಯಿ ಲಂಚ ಸ್ವೀಕರಿಸ್ತಿದ್ದ ಲೇಬರ್‌ ಇನ್​ಸ್ಪೆಕ್ಟರ್ ಗೀತಾ ಹಾಗೂ ಕಂಪ್ಯೂಟರ್ ಆಪರೇಟರ್ ಮಾಲತಿ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಹೊರಗುತ್ತಿಗೆ ನೌಕರರಾಗಿ ಕಾರ್ಯನಿರ್ವಹಿಸುತ್ತಿರುವ ಮಾಲತಿ ಅವರು ಚೇತನ್ ಎಂಬುವವರ ಬಳಿ 3 ಸಾವಿರ ಲಂಚ ಸ್ವೀಕರಿಸುತ್ತಿದ್ದರು. ಈ ವೇಳೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು.

ಇದನ್ನೂ ಓದಿ: ರೇಷ್ಮೆ ಇಲಾಖೆ ಅಧಿಕಾರಿಯಿಂದ ಲಂಚ ಸ್ವೀಕಾರ: ಎಸಿಬಿ ದಾಳಿ ವೇಳೆ ಸತ್ಯ ಬಯಲು

ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್