AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕನ್ನಡ: ಮನೆಮನೆಗೆ ತೆರಳಿ ಕೊವಿಡ್ ಪರೀಕ್ಷೆ ಮಾಡಲಿದ್ದಾರೆ ಆರೋಗ್ಯ ಸಿಬ್ಬಂದಿ

ಜಿಲ್ಲೆಯಲ್ಲಿ ಕೊವಿಡ್​ನಿಂದ ಉಂಟಾಗುತ್ತಿರುವ ಸಾವಿನ ಸಂಖ್ಯೆಯನ್ನು ಶೂನ್ಯಕ್ಕೆ ಕೊಂಡೊಯ್ಯುವ ಗುರಿ ಹೊಂದಲಾಗಿದೆ. ಈ ಗುರಿ ಸಾಧಿಸಲು ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.

ಉತ್ತರ ಕನ್ನಡ: ಮನೆಮನೆಗೆ ತೆರಳಿ ಕೊವಿಡ್ ಪರೀಕ್ಷೆ ಮಾಡಲಿದ್ದಾರೆ ಆರೋಗ್ಯ ಸಿಬ್ಬಂದಿ
ಪ್ರಾತಿನಿಧಿಕ ಚಿತ್ರ
guruganesh bhat
|

Updated on: May 31, 2021 | 10:50 PM

Share

ಕಾರವಾರ: ಕೊರೊನಾ ಸೋಂಕು ಹರಡುವಿಕೆ ತಡೆಯಲು ಉತ್ತರ ಕನ್ನಡ ಜಿಲ್ಲೆಯಲ್ಲಿ ಮನೆಮನೆಗೆ ತೆರಳಿ ಜ್ವರದ ಸರ್ವೆ ನಡೆಸಲಾಗುವುದು ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಹಿಲನ್ ತಿಳಿಸಿದರು. ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಹಳ್ಳಿಗರ ಸರ್ವೆ ನಡೆಸಲಿದ್ದಾರೆ. ಕೆಮ್ಮು, ಜ್ವರ, ನೆಗಡಿ ಲಕ್ಷಣಗಳಿದ್ದರೆ ಸ್ಥಳದಲ್ಲೇ ಆ್ಯಂಟಿಜೆನ್​ ಟೆಸ್ಟ್ ನಡೆಸಲಾಗುವುದು. ಮುಂದೆ ಕೊರೊನಾ ಬರುವ ಲಕ್ಷಣಗಳಿದ್ದರೆ ಆರ್​ಟಿಪಿಸಿಆರ್ ಪರೀಕ್ಷೆ ನಡೆಸಲಾಗುವುದು ಎಂದು ಅವರು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಕೊರೊನಾ ಪೀಡಿತರು ದಾಖಲಾಗುವ ಸಂಖ್ಯೆ ಇಳಿಕೆಯಾಗಿದ್ದು, ಮರಣ ಪ್ರಮಾಣವೂ ಇಳಿಕೆಯಾಗಿದೆ. ಕೊರೊನಾ ಸೋಂಕಿನ ಲಕ್ಷಣಗಳಿದ್ದರೆ ಯಾರೂ ಸಹ ಮುಚ್ಚಿಟ್ಟುಕೊಳ್ಳಬೇಡಿ. ಸರ್ಕಾರದ ಮೂಲಕವೇ ಬೆಡ್ ವಿತರಣೆ​ ವ್ಯವಸ್ಥೆ ಮಾಡಲಾಗುವುದು. ಜಿಲ್ಲೆಯಲ್ಲಿ ಕೊವಿಡ್​ನಿಂದ ಉಂಟಾಗುತ್ತಿರುವ ಸಾವಿನ ಸಂಖ್ಯೆಯನ್ನು ಶೂನ್ಯಕ್ಕೆ ಕೊಂಡೊಯ್ಯುವ ಗುರಿ ಹೊಂದಲಾಗಿದೆ. ಈ ಗುರಿ ಸಾಧಿಸಲು ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.

ಉತ್ತರ ಕನ್ನಡದಲ್ಲಿ ಕಡಿಮೆಯಿಲ್ಲ ಸೋಂಕಿನ ಪ್ರಮಾಣ ಉತ್ತರ ಕನ್ನಡ ಕೊವಿಡ್ ಸೋಂಕಿನ ಪಾಸಿಟಿವಿಟಿ ದರದಲ್ಲಿ ದೇಶಮಟ್ಟದಲ್ಲಿ ಸ್ಥಾನ ಗಿಟ್ಟಿಸಿತ್ತು. ಹೀಗಾಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ, ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಉತ್ತರ ಕನ್ನಡಕ್ಕೆ ಸೋಂಕು ಹರಡದಂತೆ ತಡೆಯಲು ಸದ್ಯದ ಮಟ್ಟಿಗೆ ಅಗತ್ಯ ಇರುವ ಕ್ರಮಗಳನ್ನು ಬಿಗಿಯಾಗಿಯೇ ಕೈಗೊಂಡಿದ್ದಾರೆ. ಮೇ 16ರಿಂದ ಜಿಲ್ಲೆಯ ರಸ್ತೆಗಳಲ್ಲಿ ಯಾವುದೇ ಖಾಸಗಿ ವಾಹನ ಓಡಾಡಬಾರದು ಎಂದು ಆದೇಶಿಸಿದ್ದಾರೆ. ಅಲ್ಲದೇ ಅವರ ಸ್ವಂತ ವಿಧಾನಸಭಾ ಕ್ಷೇತ್ರ ಯಲ್ಲಾಪುರದ ಪ್ರತಿ ಜಿಲ್ಲಾ ಪಂಚಾಯತ್ ಕ್ಷೇತ್ರಗಳಲ್ಲೂ ಸ್ವಂತ ಖರ್ಚಿನಲ್ಲಿ ಹೆಬ್ಬಾರ್ ಕೊವಿಡ್ ಹೆಲ್ಪ್​ಲೈನ್ ಆರಂಭಿಸಿದ್ದಾರೆ. ಈ ಸೇವೆ ಕೊವಿಡ್ ಸೋಂಕಿತರ ಸಕಲ ಆಗುಹೋಗುಗಳನ್ನು ಉಚಿತವಾಗಿ ನೋಡಿಕೊಳ್ಳಲಿದೆ. ಜತೆಗೆ 40 ಕ್ಕಿಂತ ಹೆಚ್ಚು ಸಕ್ರಿಯ ಪ್ರಕರಣಗಳಿದ್ದರೆ ಕಂಟೇನ್ಮೆಂಟ್ ಝೋನ್ ಮಾಡುವುದು, ಮದುವೆಗಳಿಗೆ ನಿಯಂತ್ರಣ ಹೇರುವುದು ಸೇರಿದಂತೆ ಮುಂತಾದ ಆದೇಶಗಳನ್ನು ಸಚಿವ ಶಿವರಾಮ್ ಹೆಬ್ಬಾರ್ ಹೊರಡಿಸಿದ್ದಾರೆ.

ಇದನ್ನೂ ಓದಿ:  Karnataka Covid Update: ಕರ್ನಾಟಕದಲ್ಲಿ ಇಂದು ಒಂದೇ ದಿನ 16,604 ಜನರಿಗೆ ಕೊವಿಡ್ ಸೋಂಕು ದೃಢ, ಬೆಂಗಳೂರಿನಲ್ಲಿ 3,992 ಜನರಿಗೆ ಸೋಂಕು ಪತ್ತೆ

ಕೊವಿಡ್​ ಆಸ್ಪತ್ರೆಯಲ್ಲಿ ಡ್ಯಾನ್ಸ್​ ಮಾಡಿದ ನಟಿ ಹರ್ಷಿಕ ಪೂಣಚ್ಚ, ನಟ ಭುವನ್ ಪೊನ್ನಣ್ಣ; ರೋಗಿಗಳು ಫುಲ್​ ಖುಷ್

(Village Covid Survey will be Conducted in Uttara Kannada district to stop Corona spread)

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ