AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಸನ್ಮಾನ ನನಗಲ್ಲ.. ಗ್ರಾಮಸ್ಥರು ನೀಡಿದ ಚಿನ್ನದ ಕಿರೀಟ ಸರ್ಕಾರಕ್ಕೆ ನೀಡಿದ DCM ಗೋವಿಂದ ಕಾರಜೋಳ

ನನ್ನ ಹುಟ್ಟೂರು ಕಾರಜೋಳ ಗ್ರಾಮದ ಇಡೀ ಗ್ರಾಮಸ್ಥರು ಅತ್ಯಂತ ಪ್ರೀತಿ ಅಭಿಮಾನದಿಂದ 140 ಗ್ರಾಂ ಬಂಗಾರದ ಕಿರೀಟವನ್ನು ಅರ್ಪಿಸಿದ್ದರು. ಆದರೆ, ಈ ಗೌರವ ಸರ್ಕಾರಕ್ಕೆ ಸಮರ್ಪಣೆ ಆಗಬೇಕು ಎಂದು ಗೋವಿಂದ ಕಾರಜೋಳ ತಿಳಿಸಿದರು.

ಈ ಸನ್ಮಾನ ನನಗಲ್ಲ.. ಗ್ರಾಮಸ್ಥರು ನೀಡಿದ ಚಿನ್ನದ ಕಿರೀಟ ಸರ್ಕಾರಕ್ಕೆ ನೀಡಿದ DCM ಗೋವಿಂದ ಕಾರಜೋಳ
ಗೋವಿಂದ ಕಾರಜೋಳ
ರಾಜೇಶ್ ದುಗ್ಗುಮನೆ
|

Updated on: Dec 10, 2020 | 7:05 PM

Share

ಬೆಂಗಳೂರು : ವಿಜಯಪುರ ಜಿಲ್ಲೆಯ ಬಬಲೇಶ್ವರದ ಕಾರಜೋಳ ಗ್ರಾಮಸ್ಥರು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅವರಿಗೆ ಕಳೆದ ತಿಂಗಳು ಬಂಗಾರದ ಕಿರೀಟವನ್ನು ಹಾಕಿ ಗೌರವಿಸಿದ್ದರು. ಗೋವಿಂದ ಕಾರಜೋಳ ಅವರು ಇಂದು ಈ ಕಿರೀಟವನ್ನು ವಿಧಾನಸೌಧದಲ್ಲಿ ಮುಖ್ಯ ಕಾರ್ಯದರ್ಶಿ ಮೂಲಕ ಸರ್ಕಾರಕ್ಕೆ ಒಪ್ಪಿಸಿದರು.

ಈ ವೇಳೆ ಮಾತನಾಡಿದ ಗೋವಿಂದ ಕಾರಜೋಳ, ನನ್ನ ಹುಟ್ಟೂರು ಕಾರಜೋಳ ಗ್ರಾಮದ ಇಡೀ ಗ್ರಾಮಸ್ಥರು ಅತ್ಯಂತ ಪ್ರೀತಿ ಅಭಿಮಾನದಿಂದ 140 ಗ್ರಾಂ ತೂಕದ ಬಂಗಾರದ ಕಿರೀಟವನ್ನು ಅರ್ಪಿಸಿದ್ದರು. ಈ ಗ್ರಾಮದ ಅಭಿವೃದ್ಧಿಗಾಗಿ ನಾನು ಸಲ್ಲಿಸಿದ ಗಣನೀಯ ಸೇವೆ ಪರಿಗಣಿಸಿ ಹಾಗೂ ತಮ್ಮ ಊರಿನ ವ್ಯಕ್ತಿ ಉಪ ಮುಖ್ಯಮಂತ್ರಿಯಾಗಿದ್ದಕ್ಕಾಗಿ ಈ ಬಂಗಾರದ ಕಿರೀಟವನ್ನು ನನಗೆ ನೀಡಿದ್ದರು ಎಂದು ಊರಿನವರು ತಮ್ಮ ಮೇಲಿಟ್ಟ ಪ್ರೀತಿ-ವಿಶ್ವಾಸದ ಬಗ್ಗೆ ಹೇಳಿದರು.

ಈ ಸನ್ಮಾನ ಸರ್ಕಾರಕ್ಕೆ ಸಲ್ಲಬೇಕು: ಕಳೆದ 6 ವರ್ಷಗಳಿಂದ ನನಗೆ ಸನ್ಮಾನ ಮಾಡಬೇಕೆಂಬುದು ಊರಿನವರ ಉದ್ದೇಶ ಆಗಿತ್ತು. ಆದರೆ, ಸಮಯ ಕೂಡಿ ಬಂದಿರಲಿಲ್ಲ. ನವೆಂಬರ್ 23 ರಂದು ನಡೆದ  ಕಾರ್ಯಕ್ರಮದಲ್ಲಿ ನನಗೆ ಈ ಚಿನ್ನದ ಕಿರೀಟವನ್ನು ಸಮರ್ಪಿಸಲಾಗಿದೆ. ಈ ಸನ್ಮಾನ ನನಗಲ್ಲ ಸರ್ಕಾರಕ್ಕೆ ಸಲ್ಲುತ್ತದೆ. ಈ ಹಿನ್ನೆಲೆಯಲ್ಲಿ ಈ ಬಂಗಾರದ ಕಿರೀಟವನ್ನು ಮುಖ್ಯಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರ ಮೂಲಕ ಸರ್ಕಾರಕ್ಕೆ ಒಪ್ಪಿಸಿರುವುದಾಗಿ ತಿಳಿಸಿದರು. ಜೊತೆಗೆ ಸನ್ಮಾನಿಸಿದ ಗ್ರಾಮಸ್ಥರಿಗೆ ಗೋವಿಂದ ಕಾರಜೋಳ ಕೃತಜ್ಞತೆ ಸಲ್ಲಿಸಿದರು.

ಸಮಸ್ಯೆ ಆಲಿಸದ ಡಿಸಿಎಂ ಕಾರಜೋಳ ವಿರುದ್ಧ ವಿದ್ಯಾರ್ಥಿನಿಯರ ಕಿಡಿ

Follow Us
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ