AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಸನ್ಮಾನ ನನಗಲ್ಲ.. ಗ್ರಾಮಸ್ಥರು ನೀಡಿದ ಚಿನ್ನದ ಕಿರೀಟ ಸರ್ಕಾರಕ್ಕೆ ನೀಡಿದ DCM ಗೋವಿಂದ ಕಾರಜೋಳ

ನನ್ನ ಹುಟ್ಟೂರು ಕಾರಜೋಳ ಗ್ರಾಮದ ಇಡೀ ಗ್ರಾಮಸ್ಥರು ಅತ್ಯಂತ ಪ್ರೀತಿ ಅಭಿಮಾನದಿಂದ 140 ಗ್ರಾಂ ಬಂಗಾರದ ಕಿರೀಟವನ್ನು ಅರ್ಪಿಸಿದ್ದರು. ಆದರೆ, ಈ ಗೌರವ ಸರ್ಕಾರಕ್ಕೆ ಸಮರ್ಪಣೆ ಆಗಬೇಕು ಎಂದು ಗೋವಿಂದ ಕಾರಜೋಳ ತಿಳಿಸಿದರು.

ಈ ಸನ್ಮಾನ ನನಗಲ್ಲ.. ಗ್ರಾಮಸ್ಥರು ನೀಡಿದ ಚಿನ್ನದ ಕಿರೀಟ ಸರ್ಕಾರಕ್ಕೆ ನೀಡಿದ DCM ಗೋವಿಂದ ಕಾರಜೋಳ
ಗೋವಿಂದ ಕಾರಜೋಳ
ರಾಜೇಶ್ ದುಗ್ಗುಮನೆ
|

Updated on: Dec 10, 2020 | 7:05 PM

Share

ಬೆಂಗಳೂರು : ವಿಜಯಪುರ ಜಿಲ್ಲೆಯ ಬಬಲೇಶ್ವರದ ಕಾರಜೋಳ ಗ್ರಾಮಸ್ಥರು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅವರಿಗೆ ಕಳೆದ ತಿಂಗಳು ಬಂಗಾರದ ಕಿರೀಟವನ್ನು ಹಾಕಿ ಗೌರವಿಸಿದ್ದರು. ಗೋವಿಂದ ಕಾರಜೋಳ ಅವರು ಇಂದು ಈ ಕಿರೀಟವನ್ನು ವಿಧಾನಸೌಧದಲ್ಲಿ ಮುಖ್ಯ ಕಾರ್ಯದರ್ಶಿ ಮೂಲಕ ಸರ್ಕಾರಕ್ಕೆ ಒಪ್ಪಿಸಿದರು.

ಈ ವೇಳೆ ಮಾತನಾಡಿದ ಗೋವಿಂದ ಕಾರಜೋಳ, ನನ್ನ ಹುಟ್ಟೂರು ಕಾರಜೋಳ ಗ್ರಾಮದ ಇಡೀ ಗ್ರಾಮಸ್ಥರು ಅತ್ಯಂತ ಪ್ರೀತಿ ಅಭಿಮಾನದಿಂದ 140 ಗ್ರಾಂ ತೂಕದ ಬಂಗಾರದ ಕಿರೀಟವನ್ನು ಅರ್ಪಿಸಿದ್ದರು. ಈ ಗ್ರಾಮದ ಅಭಿವೃದ್ಧಿಗಾಗಿ ನಾನು ಸಲ್ಲಿಸಿದ ಗಣನೀಯ ಸೇವೆ ಪರಿಗಣಿಸಿ ಹಾಗೂ ತಮ್ಮ ಊರಿನ ವ್ಯಕ್ತಿ ಉಪ ಮುಖ್ಯಮಂತ್ರಿಯಾಗಿದ್ದಕ್ಕಾಗಿ ಈ ಬಂಗಾರದ ಕಿರೀಟವನ್ನು ನನಗೆ ನೀಡಿದ್ದರು ಎಂದು ಊರಿನವರು ತಮ್ಮ ಮೇಲಿಟ್ಟ ಪ್ರೀತಿ-ವಿಶ್ವಾಸದ ಬಗ್ಗೆ ಹೇಳಿದರು.

ಈ ಸನ್ಮಾನ ಸರ್ಕಾರಕ್ಕೆ ಸಲ್ಲಬೇಕು: ಕಳೆದ 6 ವರ್ಷಗಳಿಂದ ನನಗೆ ಸನ್ಮಾನ ಮಾಡಬೇಕೆಂಬುದು ಊರಿನವರ ಉದ್ದೇಶ ಆಗಿತ್ತು. ಆದರೆ, ಸಮಯ ಕೂಡಿ ಬಂದಿರಲಿಲ್ಲ. ನವೆಂಬರ್ 23 ರಂದು ನಡೆದ  ಕಾರ್ಯಕ್ರಮದಲ್ಲಿ ನನಗೆ ಈ ಚಿನ್ನದ ಕಿರೀಟವನ್ನು ಸಮರ್ಪಿಸಲಾಗಿದೆ. ಈ ಸನ್ಮಾನ ನನಗಲ್ಲ ಸರ್ಕಾರಕ್ಕೆ ಸಲ್ಲುತ್ತದೆ. ಈ ಹಿನ್ನೆಲೆಯಲ್ಲಿ ಈ ಬಂಗಾರದ ಕಿರೀಟವನ್ನು ಮುಖ್ಯಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರ ಮೂಲಕ ಸರ್ಕಾರಕ್ಕೆ ಒಪ್ಪಿಸಿರುವುದಾಗಿ ತಿಳಿಸಿದರು. ಜೊತೆಗೆ ಸನ್ಮಾನಿಸಿದ ಗ್ರಾಮಸ್ಥರಿಗೆ ಗೋವಿಂದ ಕಾರಜೋಳ ಕೃತಜ್ಞತೆ ಸಲ್ಲಿಸಿದರು.

ಸಮಸ್ಯೆ ಆಲಿಸದ ಡಿಸಿಎಂ ಕಾರಜೋಳ ವಿರುದ್ಧ ವಿದ್ಯಾರ್ಥಿನಿಯರ ಕಿಡಿ

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್