ಈ ಸನ್ಮಾನ ನನಗಲ್ಲ.. ಗ್ರಾಮಸ್ಥರು ನೀಡಿದ ಚಿನ್ನದ ಕಿರೀಟ ಸರ್ಕಾರಕ್ಕೆ ನೀಡಿದ DCM ಗೋವಿಂದ ಕಾರಜೋಳ

ನನ್ನ ಹುಟ್ಟೂರು ಕಾರಜೋಳ ಗ್ರಾಮದ ಇಡೀ ಗ್ರಾಮಸ್ಥರು ಅತ್ಯಂತ ಪ್ರೀತಿ ಅಭಿಮಾನದಿಂದ 140 ಗ್ರಾಂ ಬಂಗಾರದ ಕಿರೀಟವನ್ನು ಅರ್ಪಿಸಿದ್ದರು. ಆದರೆ, ಈ ಗೌರವ ಸರ್ಕಾರಕ್ಕೆ ಸಮರ್ಪಣೆ ಆಗಬೇಕು ಎಂದು ಗೋವಿಂದ ಕಾರಜೋಳ ತಿಳಿಸಿದರು.

ಈ ಸನ್ಮಾನ ನನಗಲ್ಲ.. ಗ್ರಾಮಸ್ಥರು ನೀಡಿದ ಚಿನ್ನದ ಕಿರೀಟ ಸರ್ಕಾರಕ್ಕೆ ನೀಡಿದ DCM ಗೋವಿಂದ ಕಾರಜೋಳ
ಗೋವಿಂದ ಕಾರಜೋಳ

Updated on: Dec 10, 2020 | 7:05 PM

ಬೆಂಗಳೂರು : ವಿಜಯಪುರ ಜಿಲ್ಲೆಯ ಬಬಲೇಶ್ವರದ ಕಾರಜೋಳ ಗ್ರಾಮಸ್ಥರು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅವರಿಗೆ ಕಳೆದ ತಿಂಗಳು ಬಂಗಾರದ ಕಿರೀಟವನ್ನು ಹಾಕಿ ಗೌರವಿಸಿದ್ದರು. ಗೋವಿಂದ ಕಾರಜೋಳ ಅವರು ಇಂದು ಈ ಕಿರೀಟವನ್ನು ವಿಧಾನಸೌಧದಲ್ಲಿ ಮುಖ್ಯ ಕಾರ್ಯದರ್ಶಿ ಮೂಲಕ ಸರ್ಕಾರಕ್ಕೆ ಒಪ್ಪಿಸಿದರು.

ಈ ವೇಳೆ ಮಾತನಾಡಿದ ಗೋವಿಂದ ಕಾರಜೋಳ, ನನ್ನ ಹುಟ್ಟೂರು ಕಾರಜೋಳ ಗ್ರಾಮದ ಇಡೀ ಗ್ರಾಮಸ್ಥರು ಅತ್ಯಂತ ಪ್ರೀತಿ ಅಭಿಮಾನದಿಂದ 140 ಗ್ರಾಂ ತೂಕದ ಬಂಗಾರದ ಕಿರೀಟವನ್ನು ಅರ್ಪಿಸಿದ್ದರು. ಈ ಗ್ರಾಮದ ಅಭಿವೃದ್ಧಿಗಾಗಿ ನಾನು ಸಲ್ಲಿಸಿದ ಗಣನೀಯ ಸೇವೆ ಪರಿಗಣಿಸಿ ಹಾಗೂ ತಮ್ಮ ಊರಿನ ವ್ಯಕ್ತಿ ಉಪ ಮುಖ್ಯಮಂತ್ರಿಯಾಗಿದ್ದಕ್ಕಾಗಿ ಈ ಬಂಗಾರದ ಕಿರೀಟವನ್ನು ನನಗೆ ನೀಡಿದ್ದರು ಎಂದು ಊರಿನವರು ತಮ್ಮ ಮೇಲಿಟ್ಟ ಪ್ರೀತಿ-ವಿಶ್ವಾಸದ ಬಗ್ಗೆ ಹೇಳಿದರು.

ಈ ಸನ್ಮಾನ ಸರ್ಕಾರಕ್ಕೆ ಸಲ್ಲಬೇಕು:
ಕಳೆದ 6 ವರ್ಷಗಳಿಂದ ನನಗೆ ಸನ್ಮಾನ ಮಾಡಬೇಕೆಂಬುದು ಊರಿನವರ ಉದ್ದೇಶ ಆಗಿತ್ತು. ಆದರೆ, ಸಮಯ ಕೂಡಿ ಬಂದಿರಲಿಲ್ಲ. ನವೆಂಬರ್ 23 ರಂದು ನಡೆದ  ಕಾರ್ಯಕ್ರಮದಲ್ಲಿ ನನಗೆ ಈ ಚಿನ್ನದ ಕಿರೀಟವನ್ನು ಸಮರ್ಪಿಸಲಾಗಿದೆ. ಈ ಸನ್ಮಾನ ನನಗಲ್ಲ ಸರ್ಕಾರಕ್ಕೆ ಸಲ್ಲುತ್ತದೆ. ಈ ಹಿನ್ನೆಲೆಯಲ್ಲಿ ಈ ಬಂಗಾರದ ಕಿರೀಟವನ್ನು ಮುಖ್ಯಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರ ಮೂಲಕ ಸರ್ಕಾರಕ್ಕೆ ಒಪ್ಪಿಸಿರುವುದಾಗಿ ತಿಳಿಸಿದರು. ಜೊತೆಗೆ ಸನ್ಮಾನಿಸಿದ ಗ್ರಾಮಸ್ಥರಿಗೆ ಗೋವಿಂದ ಕಾರಜೋಳ ಕೃತಜ್ಞತೆ ಸಲ್ಲಿಸಿದರು.

ಸಮಸ್ಯೆ ಆಲಿಸದ ಡಿಸಿಎಂ ಕಾರಜೋಳ ವಿರುದ್ಧ ವಿದ್ಯಾರ್ಥಿನಿಯರ ಕಿಡಿ

Loading...
Unable to load recommendations.
Follow Us