AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗದ ಲಖಮಾಪುರ ಗ್ರಾಮಸ್ಥರಿಗೆ ಮತ್ತೆ ಎದುರಾದ ಪ್ರವಾಹ ಭೀತಿ; ಸಚಿವ ಸಿ.ಸಿ.ಪಾಟೀಲ್ ವಿರುದ್ಧ ಕಿಡಿ

ಕ್ಷೇತ್ರದ ಶಾಸಕರೂ ಆದ ಸಚಿವ ಸಿ.ಸಿ.ಪಾಟೀಲ್ ಸೇತುವೆ ನಿರ್ಮಾಣ ಮಾಡುವಂತೆ ಗ್ರಾಮಸ್ಥರಿಗೆ ಭರವಸೆಯನ್ನು ನೀಡಿದ್ದರು. ಆದರೆ ಭೂಮಿ ಪೂಜೆ ಮಾಡಿ ಹೋದ ಸಚಿವರು ಈವರೆಗೂ ಈಚೆ ಸುಳಿಯಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು, ನಮ್ಮ ಬಗ್ಗೆ ಯಾಕೇ ಮಲತಾಯಿ ಧೋರಣೆ ಅಂತ ಕಿಡಿಕಾರಿದ್ದಾರೆ.

ಗದಗದ ಲಖಮಾಪುರ ಗ್ರಾಮಸ್ಥರಿಗೆ ಮತ್ತೆ ಎದುರಾದ ಪ್ರವಾಹ ಭೀತಿ; ಸಚಿವ ಸಿ.ಸಿ.ಪಾಟೀಲ್ ವಿರುದ್ಧ ಕಿಡಿ
ಗ್ರಾಮಸ್ಥರ ಆಕ್ರೋಶ
TV9 Web
| Edited By: |

Updated on: Jun 20, 2021 | 12:02 PM

Share

ಗದಗ: ರಾಜ್ಯದ ಹಲವು ಕಡೆ ಕಳೆದ ಒಂದು ವಾರದಿಂದ ಭಾರಿ ಮಳೆಯಾಗುತ್ತಿದ್ದು, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಗದಗದ ನರಗುಂದ ತಾಲೂಕಿನ ಲಖಮಾಪುರ ಗ್ರಾಮಸ್ಥರಿಗೆ ಮತ್ತೆ ಪ್ರವಾಹ ಭೀತಿ ಎದುರಾಗಿದೆ. ಸೇತುವೆ ನಿರ್ಮಾಣದ ಭರವಸೆಯನ್ನು ಈಡೇರಿಸದ ಹಿನ್ನೆಲೆ ಸಚಿವ ಸಿ.ಸಿ.ಪಾಟೀಲ್ ವಿರುದ್ಧ ಲಖಮಾಪುರ ಗ್ರಾಮಸ್ಥರು ಕಿಡಿಕಾರಿದ್ದಾರೆ. 2019, 2020ರಲ್ಲಿ ಲಖಮಾಪುರ ಗ್ರಾಮ ಭಾರಿ ಪ್ರವಾಹಕ್ಕೆ ಸಿಲುಕಿತ್ತು. ಕಳೆದ ವರ್ಷವಷ್ಟೇ ಸೇತುವೆ ನಿರ್ಮಾಣದ ಭರವಸೆ ನೀಡಿದ್ದರು. ಆದರೆ ಭರವಸೆ ಭರವಸೆಯಾಗೆ ಉಳಿದಿದೆ ಹೊರತು ಯಾವುದೇ ಪ್ರಯೋಜನವಾಗಿಲ್ಲ ಅಂತ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕ್ಷೇತ್ರದ ಶಾಸಕರೂ ಆದ ಸಚಿವ ಸಿ.ಸಿ.ಪಾಟೀಲ್ ಸೇತುವೆ ನಿರ್ಮಾಣ ಮಾಡುವಂತೆ ಗ್ರಾಮಸ್ಥರಿಗೆ ಭರವಸೆಯನ್ನು ನೀಡಿದ್ದರು. ಆದರೆ ಭೂಮಿ ಪೂಜೆ ಮಾಡಿ ಹೋದ ಸಚಿವರು ಈವರೆಗೂ ಈಚೆ ಸುಳಿಯಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು, ನಮ್ಮ ಬಗ್ಗೆ ಯಾಕೇ ಮಲತಾಯಿ ಧೋರಣೆ ಅಂತ ಕಿಡಿಕಾರಿದ್ದಾರೆ.

ಈ ಬಾರಿ ಪ್ರವಾಹ ಬಂದರೆ ಯಾವುದೇ ಕಾರಣಕ್ಕೂ ಕಾಳಜಿ ಕೇಂದ್ರಕ್ಕೆ ಹೋಗಲ್ಲ ಎಂದು ನಿರ್ಧರಿಸಿರುವ ಹಿರಿಯರು ಮತ್ತು ಯುವಕರು, ಜಿಲ್ಲಾಡಳಿತ ಹಾಗೂ ಸಚಿವರು ಜೀವದ ಜೊತೆ ಚೆಲ್ಲಾಟವಾಡುತ್ತಿದ್ದಾರೆ. ಲಖಮಾಪೂರ ಗ್ರಾಮದ ರಾಮದುರ್ಗ ಕ್ರಾಸ್‌ ಬಳಿ ಶೆಡ್ ನಿರ್ಮಾಣ ಮಾಡಬೇಕು. ಶೆಡ್ ನಿರ್ಮಾಣ‌ ಮಾಡದಿದ್ದರೆ ಪ್ರವಾಹದಲ್ಲೇ ನಮ್ಮ ಜೀವ ಹೋಗಲಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮಲೆನಾಡು ಭಾಗದಲ್ಲಿ ನಿರಂತರ ಮಳೆ ಹಿನ್ನೆಲೆ ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳವಾಗಿದೆ. ದಾವಣಗೆರೆ ಜಿಲ್ಲೆಯ ನ್ಯಾಮತಿ, ಹೊನ್ನಾಳಿ, ಹರಿಹರ ತಾಲೂಕಿನ ನದಿಪಾತ್ರದ ಜನರಿಗೆ ಆತಂಕ ಎದುರಾಗಿದೆ. ಅದರೆ ಜಿಲ್ಲಾಡಳಿತ ಯಾವುದೇ ಮುಂಜಾಗ್ರತಾ ಕ್ರಮ ಕೈಗೊಂಡಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ

ಬಳ್ಳಾರಿಯಲ್ಲಿ ಕಳಪೆ ಸೂರ್ಯಕಾಂತಿ ಬೀಜ ವಿತರಣೆ; ಕೃಷಿ ಅಧಿಕಾರಿಗಳ ವಿರುದ್ಧ ನೊಂದ ರೈತರ ಆಕ್ರೋಶ

ಕಾಶ್ಮೀರದ ರಾಜಕೀಯ ನಾಯಕರೊಂದಿಗೆ ಪ್ರಧಾನಿ ಮೋದಿ ಸಭೆ; ಸುದ್ದಿ ತಿಳಿಯುತ್ತಿದ್ದಂತೆ ಭಾರತಕ್ಕೆ ಎಚ್ಚರಿಕೆ ರವಾನಿಸಿದ ಪಾಕಿಸ್ತಾನ

(Villagers of Lakhampur in Gadag are facing flood threats and Villagersexpressed outrage against Minister CC Patil)

ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?