AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

35 ವರ್ಷ ದೇಶ ಸೇವೆ ಸಲ್ಲಿಸಿ ಊರಿಗೆ ವಾಪಸ್ ಆದ ಯೋಧನಿಗೆ ಗ್ರಾಮಸ್ಥರಿಂದ ಅದ್ದೂರಿ ಸ್ವಾಗತ

ವಿಮಾನ ನಿಲ್ದಾಣದಿಂದ ರಾಷ್ಟ್ರೀಯ ಹೆದ್ದಾರಿ 7 ರ ಬುಳ್ಳಹಳ್ಳಿ ಗೇಟ್ದಗೆ ಯೋಧ ಬರುತ್ತಿದ್ದಂತೆ ಸ್ಥಳಕ್ಕೆ ಬಂದ ತಹಶೀಲ್ದಾರ್ ರಾಜ್ಗೋಪಾಲ್ ಅವರನ್ನು ಸನ್ಮಾನಿಸಿದರು. ನಂತರ ತೆರೆದ ಜೀಪ್​ನಲ್ಲಿ 6 ಕೀಮಿ ಹಾರೋಹಳ್ಳಿ ಗ್ರಾಮದವರೆಗೂ ಯೋಧ ರಾಜ್ಗೋಪಾಲ್ ಅವರನ್ನು ಮೆರವಣಿಗೆ ಮಾಡಲಾಯಿತು.

35 ವರ್ಷ ದೇಶ ಸೇವೆ ಸಲ್ಲಿಸಿ ಊರಿಗೆ ವಾಪಸ್ ಆದ ಯೋಧನಿಗೆ ಗ್ರಾಮಸ್ಥರಿಂದ ಅದ್ದೂರಿ ಸ್ವಾಗತ
ಯೋಧನಿಗೆ ಗ್ರಾಮಸ್ಥರು ಅದ್ದೂರಿಯಾಗಿ ಸ್ವಾಗತಿಸುತ್ತಿರುವ ದೃಶ್ಯ
Follow us
preethi shettigar
| Updated By: ganapathi bhat

Updated on: Apr 05, 2021 | 4:08 PM

ದೇವನಹಳ್ಳಿ: ದೇಶ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿಯಾಗಿ ವಾಪಸ್ ಆಗಿರುವ ಯೋಧನನ್ನು ಗ್ರಾಮಸ್ಥರು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಆಗಮಿಸಿರುವ ಯೋಧನಿಗೆ ಗ್ರಾಮಸ್ಥರು ಪುಷ್ಪಮಾಲೆ ಹಾಕಿ ಖುಷಿಪಟ್ಟಿದ್ದಾರೆ. ಬೆಂಗಳೂರು ಗ್ರಾಮಾಂತರ ದೇವನಹಳ್ಳಿ ತಾಲೂಕಿನ ಹಾರೋಹಳ್ಳಿ ಗ್ರಾಮದ ನಿವಾಸಿ ರಾಜ್​ಗೋಪಾಲ್ 35 ವರ್ಷ ಸೈನಿಕನಾಗಿ ಸೇವೆ ಸಲ್ಲಿಸಿ ಊರಿಗೆ ಮರಳಿ ಬಂದಿದ್ದಾರೆ.

ರಾಜ್​ಗೋಪಾಲ್, 1986 ರಲ್ಲಿ ದೇಶ ಸೇವೆಗೆ ಸೇರಿಕೊಂಡಿದ್ದರು. ಸತತ 35 ವರ್ಷಗಳಿಂದ ಜಮ್ಮು ಕಾಶ್ಮಿರ, ಪಂಜಾಬ್, ಪಶ್ಚಿಮ ಬಂಗಾಳ ಸೇರಿದಂತೆ ಹಲವು ರಾಜ್ಯಗಳಲ್ಲಿ ದೇಶವನ್ನು ಕಾದ ಯೋಧ ರಾಜ್​ಗೋಪಾಲ್ಇದೀಗ ಸ್ವಯಂ ನಿವೃತ್ತಿ ಪಡೆದುಕೊಂಡು ರಾಜ್ಯಕ್ಕೆ ಆಗಮಿಸಿದ್ದು, ಗ್ರಾಮಸ್ಥರು ಸೇರಿದಂತೆ ದೇವನಹಳ್ಳಿ ತಾಲೂಕು ಆಡಳಿತ ಮಂಡಳಿ ಯೋಧನನ್ನು ಅದ್ಧೂರಿಯಾಗಿ ಬರಮಾಡಿಕೊಂಡಿದ್ದಾರೆ.

ಸಾಮಾನ್ಯವಾಗಿ ದೇಶ ಸೇವೆಗೆ ಸೈನಿಕರಾಗಿ ಸೇರುವ ಕೆಲ ಮಂದಿ 20 ರಿಂದ 25 ವರ್ಷಗಳಿಗೆ ನಿವೃತ್ತಿಯಾಗಿ ಕುಟುಂಬವನ್ನ ಕೆಲಕಾಲ ನೋಡಿಕೊಳ್ಳಲೆಂದೆ ವಾಪಸ್ ಬರುತ್ತಾರೆ. ಆದರೆ ಹಾರೋಹಳ್ಳಿ ಯೋಧ ರಾಜ್​ಗೋಪಾಲ್ 35 ವರ್ಷಗಳ ಕಾಲ ದೇಶಕ್ಕಾಗಿ ತಮ್ಮ ನಿಸ್ವಾರ್ಥ ಸೇವೆಯನ್ನ ಸಲ್ಲಿಸಿ ವಾಪಸ್ ಆಗಿದ್ದು, ಟೀಮ್ ಯೋಧ ನಮನ ತಂಡ ಹಾಗೂ ಗ್ರಾಮಸ್ಥರು ಅದ್ದೂರಿಯಾಗಿಯೇ ಯೋಧನನ್ನ ಬರಮಾಡಿಕೊಂಡರು.

soldier

ಯೋಧ ರಾಜ್​ಗೋಪಾಲ್

ವಿಮಾನ ನಿಲ್ದಾಣದಿಂದ ರಾಷ್ಟ್ರೀಯ ಹೆದ್ದಾರಿ 7 ರ ಬುಳ್ಳಹಳ್ಳಿ ಗೇಟ್​ಗೆ ಯೋಧ ಬರುತ್ತಿದ್ದಂತೆ ಸ್ಥಳಕ್ಕೆ ಬಂದ ತಹಶೀಲ್ದಾರ್ ರಾಜ್​ಗೋಪಾಲ್ ಅವರನ್ನು ಸನ್ಮಾನಿಸಿದರು. ನಂತರ ತೆರೆದ ಜೀಪ್​ನಲ್ಲಿ 6 ಕೀಮಿ ಹಾರೋಹಳ್ಳಿ ಗ್ರಾಮದವರೆಗೂ ಯೋಧ ರಾಜ್​ಗೋಪಾಲ್ಅವರನ್ನು ಮೆರವಣಿಗೆ ಮಾಡಲಾಯಿತು. ಇನ್ನು ಗ್ರಾಮಕ್ಕೆ ಯೋಧ ಬರುತ್ತಿದ್ದಂತೆ ಗ್ರಾಮದ ಮಹಿಳೆಯರು ಯೋಧನಿಗೆ ಆರತಿ ಬೆಳಗಿ ಪುಷ್ಪಮಾಲೆಯನ್ನ ಹಾಕಿ ಸ್ವಾಗತಿಸಿದರು. ಈ ವೇಳೆ ಜನರು ಯೋಧರ ಮೇಲೆ ಇಟ್ಟಿರುವ ಗೌರವ ಕಂಡು ಬಾವುಕರಾದ ಯೋಧ ರಾಜ್ಗೋಪಾಲ್ ನಾಡಿನ ಮಣ್ಣಿಗೆ ಮುತ್ತಿಟ್ಟುಅಲಗೆ ಏಟಿಗೆ ಸ್ಟೆಪ್ ಹಾಕಿ ಖುಷಿಪಟ್ಟರು.

soldier

35 ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿದ ಯೋಧನಿಗೆ ಅದ್ದೂರಿ ಸ್ವಾಗತ

ಒಟ್ಟಾರೆ 35 ವರ್ಷಗಳ ಕಾಲ ದೇಶವನ್ನ ರಕ್ಷಣೆ ಮಾಡಿ ತಾಯ್ನಾಡಿಗೆ ವಾಪಸ್ ಆದ ಯೋಧನಿಗೆ ಗ್ರಾಮಸ್ಥರು ಸೇರಿದಂತೆ, ವಿವಿಧ ಸಂಘ- ಸಂಸ್ಥೆಗಳು ಅದ್ದೂರಿಯಾಗಿ ಬರಮಾಡಿಕೊಳ್ಳುವ ಮೂಲಕ ಯೋಧರಾಗಿ ದೇಶ ಸೇವೆಗೆ ಸೇರುವ ಯುವಕರಿಗೆ ಹುರಿದುಂಬಿಸುವ ಕೆಲಸ ಮಾಡಿದ್ದಾರೆ.

(ವರದಿ: ನವೀನ್ -9980914152)

ಇದನ್ನೂ ಓದಿ:

ಸೈನಿಕ ಶಾಲೆ ಪ್ರವೇಶ ಪರೀಕ್ಷೆ ವೇಳೆ ಅಧಿಕಾರಿಗಳ ಎಡವಟ್ಟು: ಅಭ್ಯರ್ಥಿಗಳಿಗೆ ನೀಡಿದ ಪ್ರಶ್ನೆಪತ್ರಿಕೆ, OMR ಶೀಟ್ ಅದಲು ಬದಲು

20 ವಿದೇಶಿ ತಳಿಯ ಶ್ವಾನಗಳ ಪಾಲನೆ: ಬೀದರ್ ರಾಜಕಾರಣಿಯ ಶ್ವಾನ ಪ್ರೀತಿ ಇತರರಿಗೆ ಮಾದರಿ

( Villagers threw a lavish welcome to the soldier who served for the country for 35 years in Devanahalli Bangaluru)

ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್