AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

35 ವರ್ಷ ದೇಶ ಸೇವೆ ಸಲ್ಲಿಸಿ ಊರಿಗೆ ವಾಪಸ್ ಆದ ಯೋಧನಿಗೆ ಗ್ರಾಮಸ್ಥರಿಂದ ಅದ್ದೂರಿ ಸ್ವಾಗತ

ವಿಮಾನ ನಿಲ್ದಾಣದಿಂದ ರಾಷ್ಟ್ರೀಯ ಹೆದ್ದಾರಿ 7 ರ ಬುಳ್ಳಹಳ್ಳಿ ಗೇಟ್ದಗೆ ಯೋಧ ಬರುತ್ತಿದ್ದಂತೆ ಸ್ಥಳಕ್ಕೆ ಬಂದ ತಹಶೀಲ್ದಾರ್ ರಾಜ್ಗೋಪಾಲ್ ಅವರನ್ನು ಸನ್ಮಾನಿಸಿದರು. ನಂತರ ತೆರೆದ ಜೀಪ್​ನಲ್ಲಿ 6 ಕೀಮಿ ಹಾರೋಹಳ್ಳಿ ಗ್ರಾಮದವರೆಗೂ ಯೋಧ ರಾಜ್ಗೋಪಾಲ್ ಅವರನ್ನು ಮೆರವಣಿಗೆ ಮಾಡಲಾಯಿತು.

35 ವರ್ಷ ದೇಶ ಸೇವೆ ಸಲ್ಲಿಸಿ ಊರಿಗೆ ವಾಪಸ್ ಆದ ಯೋಧನಿಗೆ ಗ್ರಾಮಸ್ಥರಿಂದ ಅದ್ದೂರಿ ಸ್ವಾಗತ
ಯೋಧನಿಗೆ ಗ್ರಾಮಸ್ಥರು ಅದ್ದೂರಿಯಾಗಿ ಸ್ವಾಗತಿಸುತ್ತಿರುವ ದೃಶ್ಯ
preethi shettigar
| Edited By: |

Updated on: Apr 05, 2021 | 4:08 PM

Share

ದೇವನಹಳ್ಳಿ: ದೇಶ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿಯಾಗಿ ವಾಪಸ್ ಆಗಿರುವ ಯೋಧನನ್ನು ಗ್ರಾಮಸ್ಥರು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಆಗಮಿಸಿರುವ ಯೋಧನಿಗೆ ಗ್ರಾಮಸ್ಥರು ಪುಷ್ಪಮಾಲೆ ಹಾಕಿ ಖುಷಿಪಟ್ಟಿದ್ದಾರೆ. ಬೆಂಗಳೂರು ಗ್ರಾಮಾಂತರ ದೇವನಹಳ್ಳಿ ತಾಲೂಕಿನ ಹಾರೋಹಳ್ಳಿ ಗ್ರಾಮದ ನಿವಾಸಿ ರಾಜ್​ಗೋಪಾಲ್ 35 ವರ್ಷ ಸೈನಿಕನಾಗಿ ಸೇವೆ ಸಲ್ಲಿಸಿ ಊರಿಗೆ ಮರಳಿ ಬಂದಿದ್ದಾರೆ.

ರಾಜ್​ಗೋಪಾಲ್, 1986 ರಲ್ಲಿ ದೇಶ ಸೇವೆಗೆ ಸೇರಿಕೊಂಡಿದ್ದರು. ಸತತ 35 ವರ್ಷಗಳಿಂದ ಜಮ್ಮು ಕಾಶ್ಮಿರ, ಪಂಜಾಬ್, ಪಶ್ಚಿಮ ಬಂಗಾಳ ಸೇರಿದಂತೆ ಹಲವು ರಾಜ್ಯಗಳಲ್ಲಿ ದೇಶವನ್ನು ಕಾದ ಯೋಧ ರಾಜ್​ಗೋಪಾಲ್ಇದೀಗ ಸ್ವಯಂ ನಿವೃತ್ತಿ ಪಡೆದುಕೊಂಡು ರಾಜ್ಯಕ್ಕೆ ಆಗಮಿಸಿದ್ದು, ಗ್ರಾಮಸ್ಥರು ಸೇರಿದಂತೆ ದೇವನಹಳ್ಳಿ ತಾಲೂಕು ಆಡಳಿತ ಮಂಡಳಿ ಯೋಧನನ್ನು ಅದ್ಧೂರಿಯಾಗಿ ಬರಮಾಡಿಕೊಂಡಿದ್ದಾರೆ.

ಸಾಮಾನ್ಯವಾಗಿ ದೇಶ ಸೇವೆಗೆ ಸೈನಿಕರಾಗಿ ಸೇರುವ ಕೆಲ ಮಂದಿ 20 ರಿಂದ 25 ವರ್ಷಗಳಿಗೆ ನಿವೃತ್ತಿಯಾಗಿ ಕುಟುಂಬವನ್ನ ಕೆಲಕಾಲ ನೋಡಿಕೊಳ್ಳಲೆಂದೆ ವಾಪಸ್ ಬರುತ್ತಾರೆ. ಆದರೆ ಹಾರೋಹಳ್ಳಿ ಯೋಧ ರಾಜ್​ಗೋಪಾಲ್ 35 ವರ್ಷಗಳ ಕಾಲ ದೇಶಕ್ಕಾಗಿ ತಮ್ಮ ನಿಸ್ವಾರ್ಥ ಸೇವೆಯನ್ನ ಸಲ್ಲಿಸಿ ವಾಪಸ್ ಆಗಿದ್ದು, ಟೀಮ್ ಯೋಧ ನಮನ ತಂಡ ಹಾಗೂ ಗ್ರಾಮಸ್ಥರು ಅದ್ದೂರಿಯಾಗಿಯೇ ಯೋಧನನ್ನ ಬರಮಾಡಿಕೊಂಡರು.

soldier

ಯೋಧ ರಾಜ್​ಗೋಪಾಲ್

ವಿಮಾನ ನಿಲ್ದಾಣದಿಂದ ರಾಷ್ಟ್ರೀಯ ಹೆದ್ದಾರಿ 7 ರ ಬುಳ್ಳಹಳ್ಳಿ ಗೇಟ್​ಗೆ ಯೋಧ ಬರುತ್ತಿದ್ದಂತೆ ಸ್ಥಳಕ್ಕೆ ಬಂದ ತಹಶೀಲ್ದಾರ್ ರಾಜ್​ಗೋಪಾಲ್ ಅವರನ್ನು ಸನ್ಮಾನಿಸಿದರು. ನಂತರ ತೆರೆದ ಜೀಪ್​ನಲ್ಲಿ 6 ಕೀಮಿ ಹಾರೋಹಳ್ಳಿ ಗ್ರಾಮದವರೆಗೂ ಯೋಧ ರಾಜ್​ಗೋಪಾಲ್ಅವರನ್ನು ಮೆರವಣಿಗೆ ಮಾಡಲಾಯಿತು. ಇನ್ನು ಗ್ರಾಮಕ್ಕೆ ಯೋಧ ಬರುತ್ತಿದ್ದಂತೆ ಗ್ರಾಮದ ಮಹಿಳೆಯರು ಯೋಧನಿಗೆ ಆರತಿ ಬೆಳಗಿ ಪುಷ್ಪಮಾಲೆಯನ್ನ ಹಾಕಿ ಸ್ವಾಗತಿಸಿದರು. ಈ ವೇಳೆ ಜನರು ಯೋಧರ ಮೇಲೆ ಇಟ್ಟಿರುವ ಗೌರವ ಕಂಡು ಬಾವುಕರಾದ ಯೋಧ ರಾಜ್ಗೋಪಾಲ್ ನಾಡಿನ ಮಣ್ಣಿಗೆ ಮುತ್ತಿಟ್ಟುಅಲಗೆ ಏಟಿಗೆ ಸ್ಟೆಪ್ ಹಾಕಿ ಖುಷಿಪಟ್ಟರು.

soldier

35 ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿದ ಯೋಧನಿಗೆ ಅದ್ದೂರಿ ಸ್ವಾಗತ

ಒಟ್ಟಾರೆ 35 ವರ್ಷಗಳ ಕಾಲ ದೇಶವನ್ನ ರಕ್ಷಣೆ ಮಾಡಿ ತಾಯ್ನಾಡಿಗೆ ವಾಪಸ್ ಆದ ಯೋಧನಿಗೆ ಗ್ರಾಮಸ್ಥರು ಸೇರಿದಂತೆ, ವಿವಿಧ ಸಂಘ- ಸಂಸ್ಥೆಗಳು ಅದ್ದೂರಿಯಾಗಿ ಬರಮಾಡಿಕೊಳ್ಳುವ ಮೂಲಕ ಯೋಧರಾಗಿ ದೇಶ ಸೇವೆಗೆ ಸೇರುವ ಯುವಕರಿಗೆ ಹುರಿದುಂಬಿಸುವ ಕೆಲಸ ಮಾಡಿದ್ದಾರೆ.

(ವರದಿ: ನವೀನ್ -9980914152)

ಇದನ್ನೂ ಓದಿ:

ಸೈನಿಕ ಶಾಲೆ ಪ್ರವೇಶ ಪರೀಕ್ಷೆ ವೇಳೆ ಅಧಿಕಾರಿಗಳ ಎಡವಟ್ಟು: ಅಭ್ಯರ್ಥಿಗಳಿಗೆ ನೀಡಿದ ಪ್ರಶ್ನೆಪತ್ರಿಕೆ, OMR ಶೀಟ್ ಅದಲು ಬದಲು

20 ವಿದೇಶಿ ತಳಿಯ ಶ್ವಾನಗಳ ಪಾಲನೆ: ಬೀದರ್ ರಾಜಕಾರಣಿಯ ಶ್ವಾನ ಪ್ರೀತಿ ಇತರರಿಗೆ ಮಾದರಿ

( Villagers threw a lavish welcome to the soldier who served for the country for 35 years in Devanahalli Bangaluru)

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!