AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಊರಿಗೆ ಕೊವಿಡ್​ ಬಾರದಂತೆ ನೋಡಿಕೊಳ್ತೀವಿ; ಕೊರೊನಾ ನಿಯಂತ್ರಣಕ್ಕೆ ಪ್ರತಿಜ್ಞಾವಿಧಿ ಸ್ವೀಕರಿಸಿದ ಗ್ರಾಮಸ್ಥರು

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ 46 ಹಳ್ಳಿಗಳಲ್ಲಿ ಈ ವಿಭಿನ್ನ ಪ್ರಯತ್ನಕ್ಕೆ ಕೈಹಾಕಲಾಗಿದ್ದು, ಗ್ರಾಮಗಳಿಗೆ ಭೇಟಿ ನೀಡುತ್ತಿರುವ ಅಧಿಕಾರಿಗಳು ಕೊರೊನಾ ತಡೆಗಟ್ಟಲು ಹೇಗೆಲ್ಲಾ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು. ಕೊರೊನಾ ನಿಯಮಾವಳಿಗಳ ಪ್ರಾಮುಖ್ಯತೆ ಏನು. ನಿಯಮ ಪಾಲಿಸುವವರ ವಿರುದ್ಧ ಯಾವೆಲ್ಲಾ ರೀತಿಯ ಕ್ರಮಕೈಗೊಳ್ಳಬಹುದು ಎಂಬಿತ್ಯಾದಿಯಾಗಿ ವಿವರಣೆ ನೀಡುತ್ತಿದ್ದಾರೆ.

ನಮ್ಮ ಊರಿಗೆ ಕೊವಿಡ್​ ಬಾರದಂತೆ ನೋಡಿಕೊಳ್ತೀವಿ; ಕೊರೊನಾ ನಿಯಂತ್ರಣಕ್ಕೆ ಪ್ರತಿಜ್ಞಾವಿಧಿ ಸ್ವೀಕರಿಸಿದ ಗ್ರಾಮಸ್ಥರು
ಜಾಗೃತಿ ಅಭಿಯಾನದಲ್ಲಿ ಪಾಲ್ಗೊಂಡ ಗ್ರಾಮಸ್ಥರು
Skanda
|

Updated on: May 20, 2021 | 8:29 AM

Share

ದಾವಣಗೆರೆ: ಕರ್ನಾಟಕದಲ್ಲಿ ಕೊರೊನಾ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಹಳ್ಳಿಗಳಲ್ಲೂ ಸೋಂಕು ಕಾಣಿಸಿಕೊಳ್ಳುತ್ತಿರುವ ಕಾರಣ ಅಧಿಕಾರಿಗಳು ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ 46 ಹಳ್ಳಿಗಳಲ್ಲಿ ಸೋಂಕಿನ ವಿರುದ್ಧ ಹೋರಾಡಲು ವಿಭಿನ್ನ ರೀತಿಯಲ್ಲಿ ಪ್ರಯತ್ನಿಸಲಾಗುತ್ತಿದ್ದು, ಎಸ್ಐ ಶಿವರುದ್ರಪ್ಪ ಮೇಟಿ ಹಾಗೂ ಇನ್ನಿತರ ಗಣ್ಯರ ನೇತೃತ್ವದಲ್ಲಿ ಜಾಗೃತಿ ಅಭಿಯಾನವನ್ನು ಏರ್ಪಡಿಸುವ ಮೂಲಕ ಹಳ್ಳಿಗರಿಗೆ ಪ್ರತಿಜ್ಞಾವಿಧಿ ಬೋಧಿಸಲಾಗುತ್ತಿದೆ.

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ 46 ಹಳ್ಳಿಗಳಲ್ಲಿ ಈ ವಿಭಿನ್ನ ಪ್ರಯತ್ನಕ್ಕೆ ಕೈಹಾಕಲಾಗಿದ್ದು, ಗ್ರಾಮಗಳಿಗೆ ಭೇಟಿ ನೀಡುತ್ತಿರುವ ಅಧಿಕಾರಿಗಳು ಕೊರೊನಾ ತಡೆಗಟ್ಟಲು ಹೇಗೆಲ್ಲಾ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು. ಕೊರೊನಾ ನಿಯಮಾವಳಿಗಳ ಪ್ರಾಮುಖ್ಯತೆ ಏನು. ನಿಯಮ ಪಾಲಿಸುವವರ ವಿರುದ್ಧ ಯಾವೆಲ್ಲಾ ರೀತಿಯ ಕ್ರಮಕೈಗೊಳ್ಳಬಹುದು ಎಂಬಿತ್ಯಾದಿಯಾಗಿ ವಿವರಣೆ ನೀಡುತ್ತಿದ್ದಾರೆ. ಆ ಮೂಲಕ ಜನರಿಗೆ ಪರಿಸ್ಥಿತಿಯ ಗಂಭೀರತೆಯನ್ನು ಅರ್ಥ ಮಾಡಿಸುತ್ತಿದ್ದಾರೆ.

ಹೀಗೆ ಹಳ್ಳಿಗಳಿಗೆ ತೆರಳಿ ಅಲ್ಲಿನ ಗ್ರಾಮಸ್ಥರನ್ನೆಲ್ಲಾ ಸಾಮಾಜಿಕ ಅಂತರ ಕಾಯ್ದುಕೊಂಡು, ಕೊರೊನಾ ನಿಯಮಾವಳಿಗಳು ಉಲ್ಲಂಘನೆಯಾಗದ ರೀತಿಯಲ್ಲಿ ಒಂದೆಡೆ ಸೇರಿಸಿ ಕೊವಿಡ್ ನಿಯಂತ್ರಣಕ್ಕಾಗಿ ಕಠಿಣ ನಿರ್ಧಾರ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿಸುತ್ತಿದ್ದಾರೆ. ಪೊಲೀಸ್ ಅಧಿಕಾರಿಗಳ ಈ ಕ್ರಮಕ್ಕೆ ಗ್ರಾಮಸ್ಥರು ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದು, ನಿಯಮ ಪಾಲನೆ ವಿಚಾರದಲ್ಲಿ ಹಾಗೂ ಸೋಂಕು ನಿಯಂತ್ರಣಕ್ಕಾಗಿ ಎಲ್ಲಾ ರೀತಿಯ ಸಹಕಾರ ಒದಗಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.

DAVANAGERE SANTHEBENNURU POLICE

ಜನರಲ್ಲಿ ಜಾಗೃತಿ ಮೂಡಿಸುತ್ತಿರುವ ಪೊಲೀಸ್ ಅಧಿಕಾರಿ

ಎರಡನೇ ಅಲೆಯಲ್ಲಿ ಸೋಂಕು ವೇಗವಾಗಿ ಹಬ್ಬುತ್ತಿದ್ದು ಗ್ರಾಮೀಣ ಪ್ರದೇಶಗಳನ್ನು ಆವರಿಸುತ್ತಿತರುವ ಹೊತ್ತಿನಲ್ಲಿ ಸಂತೆಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂಥದ್ದೊಂದು ವಿಭಿನ್ನ ಜಾಗೃತಿ ಕಾರ್ಯಕ್ರಮ ಆಯೋಜಿಸಿರುವುದು ನಿಜಕ್ಕೂ ಮಾದರಿಯಾಗಿದೆ. ಪೊಲೀಸರ ಜನಪರ ಕಾಳಜಿಗೆ ಹಾಗೂ ಆಲೋಚನೆಗೆ ಊರಿನ ಹಿರಿಯರು ಸಹ ಧನ್ಯವಾದ ಹೇಳಿದ್ದು, ಇದೇ ರೀತಿ ಎಲ್ಲಾ ಗ್ರಾಮದ ಜನರೂ ಸೋಂಕು ನಿಯಂತ್ರಣಕ್ಕೆ ಸ್ವಯಂ ನಿಬಂಧನೆಗಳನ್ನು ರೂಪಿಸಿಕೊಂಡರೆ ಅನುಕೂಲವಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ‘ಗ್ರಾಮೀಣ ಭಾರತದಲ್ಲಿ ಕೊವಿಡ್​ನಿಂದಾಗಿ ಇಡೀ ಕುಟುಂಬಗಳೇ ಇಲ್ಲದಾಗಬಹುದು’  

ಜೂನ್ ಅಂತ್ಯದವರೆಗೂ ಗ್ರಾಮೀಣ ಭಾಗದಲ್ಲಿ ಕಟ್ಟೆಚ್ಚರ ವಹಿಸಿ; ರಾಜ್ಯ ಸರ್ಕಾರಕ್ಕೆ ತಜ್ಞರ ಸಲಹೆ

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ