AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಊರಿಗೆ ಕೊವಿಡ್​ ಬಾರದಂತೆ ನೋಡಿಕೊಳ್ತೀವಿ; ಕೊರೊನಾ ನಿಯಂತ್ರಣಕ್ಕೆ ಪ್ರತಿಜ್ಞಾವಿಧಿ ಸ್ವೀಕರಿಸಿದ ಗ್ರಾಮಸ್ಥರು

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ 46 ಹಳ್ಳಿಗಳಲ್ಲಿ ಈ ವಿಭಿನ್ನ ಪ್ರಯತ್ನಕ್ಕೆ ಕೈಹಾಕಲಾಗಿದ್ದು, ಗ್ರಾಮಗಳಿಗೆ ಭೇಟಿ ನೀಡುತ್ತಿರುವ ಅಧಿಕಾರಿಗಳು ಕೊರೊನಾ ತಡೆಗಟ್ಟಲು ಹೇಗೆಲ್ಲಾ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು. ಕೊರೊನಾ ನಿಯಮಾವಳಿಗಳ ಪ್ರಾಮುಖ್ಯತೆ ಏನು. ನಿಯಮ ಪಾಲಿಸುವವರ ವಿರುದ್ಧ ಯಾವೆಲ್ಲಾ ರೀತಿಯ ಕ್ರಮಕೈಗೊಳ್ಳಬಹುದು ಎಂಬಿತ್ಯಾದಿಯಾಗಿ ವಿವರಣೆ ನೀಡುತ್ತಿದ್ದಾರೆ.

ನಮ್ಮ ಊರಿಗೆ ಕೊವಿಡ್​ ಬಾರದಂತೆ ನೋಡಿಕೊಳ್ತೀವಿ; ಕೊರೊನಾ ನಿಯಂತ್ರಣಕ್ಕೆ ಪ್ರತಿಜ್ಞಾವಿಧಿ ಸ್ವೀಕರಿಸಿದ ಗ್ರಾಮಸ್ಥರು
ಜಾಗೃತಿ ಅಭಿಯಾನದಲ್ಲಿ ಪಾಲ್ಗೊಂಡ ಗ್ರಾಮಸ್ಥರು
Skanda
|

Updated on: May 20, 2021 | 8:29 AM

Share

ದಾವಣಗೆರೆ: ಕರ್ನಾಟಕದಲ್ಲಿ ಕೊರೊನಾ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಹಳ್ಳಿಗಳಲ್ಲೂ ಸೋಂಕು ಕಾಣಿಸಿಕೊಳ್ಳುತ್ತಿರುವ ಕಾರಣ ಅಧಿಕಾರಿಗಳು ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ 46 ಹಳ್ಳಿಗಳಲ್ಲಿ ಸೋಂಕಿನ ವಿರುದ್ಧ ಹೋರಾಡಲು ವಿಭಿನ್ನ ರೀತಿಯಲ್ಲಿ ಪ್ರಯತ್ನಿಸಲಾಗುತ್ತಿದ್ದು, ಎಸ್ಐ ಶಿವರುದ್ರಪ್ಪ ಮೇಟಿ ಹಾಗೂ ಇನ್ನಿತರ ಗಣ್ಯರ ನೇತೃತ್ವದಲ್ಲಿ ಜಾಗೃತಿ ಅಭಿಯಾನವನ್ನು ಏರ್ಪಡಿಸುವ ಮೂಲಕ ಹಳ್ಳಿಗರಿಗೆ ಪ್ರತಿಜ್ಞಾವಿಧಿ ಬೋಧಿಸಲಾಗುತ್ತಿದೆ.

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ 46 ಹಳ್ಳಿಗಳಲ್ಲಿ ಈ ವಿಭಿನ್ನ ಪ್ರಯತ್ನಕ್ಕೆ ಕೈಹಾಕಲಾಗಿದ್ದು, ಗ್ರಾಮಗಳಿಗೆ ಭೇಟಿ ನೀಡುತ್ತಿರುವ ಅಧಿಕಾರಿಗಳು ಕೊರೊನಾ ತಡೆಗಟ್ಟಲು ಹೇಗೆಲ್ಲಾ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು. ಕೊರೊನಾ ನಿಯಮಾವಳಿಗಳ ಪ್ರಾಮುಖ್ಯತೆ ಏನು. ನಿಯಮ ಪಾಲಿಸುವವರ ವಿರುದ್ಧ ಯಾವೆಲ್ಲಾ ರೀತಿಯ ಕ್ರಮಕೈಗೊಳ್ಳಬಹುದು ಎಂಬಿತ್ಯಾದಿಯಾಗಿ ವಿವರಣೆ ನೀಡುತ್ತಿದ್ದಾರೆ. ಆ ಮೂಲಕ ಜನರಿಗೆ ಪರಿಸ್ಥಿತಿಯ ಗಂಭೀರತೆಯನ್ನು ಅರ್ಥ ಮಾಡಿಸುತ್ತಿದ್ದಾರೆ.

ಹೀಗೆ ಹಳ್ಳಿಗಳಿಗೆ ತೆರಳಿ ಅಲ್ಲಿನ ಗ್ರಾಮಸ್ಥರನ್ನೆಲ್ಲಾ ಸಾಮಾಜಿಕ ಅಂತರ ಕಾಯ್ದುಕೊಂಡು, ಕೊರೊನಾ ನಿಯಮಾವಳಿಗಳು ಉಲ್ಲಂಘನೆಯಾಗದ ರೀತಿಯಲ್ಲಿ ಒಂದೆಡೆ ಸೇರಿಸಿ ಕೊವಿಡ್ ನಿಯಂತ್ರಣಕ್ಕಾಗಿ ಕಠಿಣ ನಿರ್ಧಾರ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿಸುತ್ತಿದ್ದಾರೆ. ಪೊಲೀಸ್ ಅಧಿಕಾರಿಗಳ ಈ ಕ್ರಮಕ್ಕೆ ಗ್ರಾಮಸ್ಥರು ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದು, ನಿಯಮ ಪಾಲನೆ ವಿಚಾರದಲ್ಲಿ ಹಾಗೂ ಸೋಂಕು ನಿಯಂತ್ರಣಕ್ಕಾಗಿ ಎಲ್ಲಾ ರೀತಿಯ ಸಹಕಾರ ಒದಗಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.

DAVANAGERE SANTHEBENNURU POLICE

ಜನರಲ್ಲಿ ಜಾಗೃತಿ ಮೂಡಿಸುತ್ತಿರುವ ಪೊಲೀಸ್ ಅಧಿಕಾರಿ

ಎರಡನೇ ಅಲೆಯಲ್ಲಿ ಸೋಂಕು ವೇಗವಾಗಿ ಹಬ್ಬುತ್ತಿದ್ದು ಗ್ರಾಮೀಣ ಪ್ರದೇಶಗಳನ್ನು ಆವರಿಸುತ್ತಿತರುವ ಹೊತ್ತಿನಲ್ಲಿ ಸಂತೆಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂಥದ್ದೊಂದು ವಿಭಿನ್ನ ಜಾಗೃತಿ ಕಾರ್ಯಕ್ರಮ ಆಯೋಜಿಸಿರುವುದು ನಿಜಕ್ಕೂ ಮಾದರಿಯಾಗಿದೆ. ಪೊಲೀಸರ ಜನಪರ ಕಾಳಜಿಗೆ ಹಾಗೂ ಆಲೋಚನೆಗೆ ಊರಿನ ಹಿರಿಯರು ಸಹ ಧನ್ಯವಾದ ಹೇಳಿದ್ದು, ಇದೇ ರೀತಿ ಎಲ್ಲಾ ಗ್ರಾಮದ ಜನರೂ ಸೋಂಕು ನಿಯಂತ್ರಣಕ್ಕೆ ಸ್ವಯಂ ನಿಬಂಧನೆಗಳನ್ನು ರೂಪಿಸಿಕೊಂಡರೆ ಅನುಕೂಲವಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ‘ಗ್ರಾಮೀಣ ಭಾರತದಲ್ಲಿ ಕೊವಿಡ್​ನಿಂದಾಗಿ ಇಡೀ ಕುಟುಂಬಗಳೇ ಇಲ್ಲದಾಗಬಹುದು’  

ಜೂನ್ ಅಂತ್ಯದವರೆಗೂ ಗ್ರಾಮೀಣ ಭಾಗದಲ್ಲಿ ಕಟ್ಟೆಚ್ಚರ ವಹಿಸಿ; ರಾಜ್ಯ ಸರ್ಕಾರಕ್ಕೆ ತಜ್ಞರ ಸಲಹೆ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ