AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿನಯ್​ ಕುಲಕರ್ಣಿ ತಪ್ಪು ಮಾಡಿಲ್ಲ, ಸಿಬಿಐ ಅಧಿಕಾರಿಗಳಿಗೆ ಒತ್ತಡ ಇದೆ: ಡಿ.ಕೆ.ಶಿವಕುಮಾರ್​ ಗಂಭೀರ ಆರೋಪ

ಧಾರವಾಡದಲ್ಲಿ ವಿನಯ್​ ಕುಲಕರ್ಣಿ ನಿವಾಸಕ್ಕೆ ಭೇಟಿ ನೀಡಿದ ನಂತರದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ವಿನಯ್​ ಕುಲಕರ್ಣಿ ಬಂಧನ ರಾಜಕೀಯ ಪ್ರೇರಿತ. ವಿನಯ್​ ಕುಲಕರ್ಣಿ ತಪ್ಪು ಮಾಡಿಲ್ಲ ಅನ್ನುವುದು ಗೊತ್ತಿದೆ ಎಂದಿದ್ದಾರೆ.

ವಿನಯ್​ ಕುಲಕರ್ಣಿ ತಪ್ಪು ಮಾಡಿಲ್ಲ, ಸಿಬಿಐ ಅಧಿಕಾರಿಗಳಿಗೆ ಒತ್ತಡ ಇದೆ: ಡಿ.ಕೆ.ಶಿವಕುಮಾರ್​ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್
ರಾಜೇಶ್ ದುಗ್ಗುಮನೆ
| Edited By: |

Updated on: Dec 17, 2020 | 10:24 PM

Share

ಧಾರವಾಡ: ಜಿ.ಪಂ. ಸದಸ್ಯ ಯೋಗೀಶ್‌ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ CBI ಮಾಜಿ ಸಚಿವ ವಿನಯ್​ ಕುಲಕರ್ಣಿಯನ್ನು ಬಂಧಿಸಿತ್ತು. ಈ ಪ್ರಕರಣವು ರಾಜಕೀಯ ಪ್ರೇರಿತ ಎಂದು ಕಾಂಗ್ರೆಸ್​ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ.

ಧಾರವಾಡದಲ್ಲಿ ವಿನಯ್​ ಕುಲಕರ್ಣಿ ನಿವಾಸಕ್ಕೆ ಭೇಟಿ ನೀಡಿದ ನಂತರದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ವಿನಯ್​ ಕುಲಕರ್ಣಿ ಬಂಧನ ರಾಜಕೀಯ ಪ್ರೇರಿತ. ವಿನಯ್​ ಕುಲಕರ್ಣಿ ತಪ್ಪು ಮಾಡಿಲ್ಲ ಅನ್ನುವುದು ಗೊತ್ತಿದೆ. ಒತ್ತಡದಲ್ಲಿ ಸಿಬಿಐ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಈ ಮೂಲಕ ಈ ಪ್ರಕರಣದ ಹಿಂದೆ ಬಿಜೆಪಿ ಕೈವಾಡ ಇದೆ ಎನ್ನುವ ಆರೋಪ ಮಾಡಿದ್ದಾರೆ.

ವಿನಯ್​ ಕುಲಕರ್ಣಿ ಮನೆಯಲ್ಲಿ ಏನು ಚರ್ಚೆ ಆಗಿದೆ ಎನ್ನುವ ಬಗ್ಗೆ ಮಾತನಾಡಿದ ಡಿಕೆಶಿ, ವಿನಯ್​ ಮನೆಯವರು ನನ್ನ ಬಳಿ ಎಲ್ಲಾ ಅಳಲು ತೋಡಿಕೊಂಡಿದ್ದಾರೆ. ಏನೆಲ್ಲ ಚರ್ಚೆ ಆಯಿತು ಎಂದು ಹೇಳಲು ಆಗುವುದಿಲ್ಲ. ನಮಗೂ ನ್ಯಾಯಾಲಯವಿದೆ, ಕಾನೂನಿದೆ ಎಂದು ಡಿಕೆಶಿ ಹೇಳಿದ್ದಾರೆ.

ಏನಿದರ ಹಿನ್ನೆಲೆ: ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್‌ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್​ ಕುಲಕರ್ಣಿ ಕೈವಾಡ ಕೂಡ ಇದೆ ಎನ್ನಲಾಗಿದೆ. ಹೀಗಾಗಿ ಇವರನ್ನು ಬಂಧಿಸಿ ಜೈಲಿನಲ್ಲಿ ಇಡಲಾಗಿದೆ. ಇತ್ತೀಚೆಗೆ ಇವರು ಜಾಮೀನಿಗಾಗಿ ಅರ್ಜಿ ಸಲ್ಲಿಕೆ ಮಾಡಿದ್ದರು. ಆದರೆ, ಅದು ತಿರಸ್ಕಾರಗೊಂಡಿತ್ತು. ಇತ್ತೀಚೆಗೆ, ವಿನಯ್​ ಕುಲಕರ್ಣಿಗೆ ಐಷಾರಾಮಿ ಸವಲತ್ತು ನೀಡಲಾಗುತ್ತಿದೆ ಎನ್ನುವ ಬಗ್ಗೆಯೂ ಟಿವಿ9 ಸುದ್ದಿ ಬಿತ್ತರ ಮಾಡಿತ್ತು.

ಗುಂಡು-ತುಂಡು ಆಯ್ತು, ಈಗ ಜೈಲಲ್ಲಿ ರೌಡಿಶೀಟರ್ ಜತೆ ವಿನಯ್ ಕುಲಕರ್ಣಿ ಕಾಲಹರಣ!

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?