AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿನಯ್​ ಕುಲಕರ್ಣಿ ತಪ್ಪು ಮಾಡಿಲ್ಲ, ಸಿಬಿಐ ಅಧಿಕಾರಿಗಳಿಗೆ ಒತ್ತಡ ಇದೆ: ಡಿ.ಕೆ.ಶಿವಕುಮಾರ್​ ಗಂಭೀರ ಆರೋಪ

ಧಾರವಾಡದಲ್ಲಿ ವಿನಯ್​ ಕುಲಕರ್ಣಿ ನಿವಾಸಕ್ಕೆ ಭೇಟಿ ನೀಡಿದ ನಂತರದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ವಿನಯ್​ ಕುಲಕರ್ಣಿ ಬಂಧನ ರಾಜಕೀಯ ಪ್ರೇರಿತ. ವಿನಯ್​ ಕುಲಕರ್ಣಿ ತಪ್ಪು ಮಾಡಿಲ್ಲ ಅನ್ನುವುದು ಗೊತ್ತಿದೆ ಎಂದಿದ್ದಾರೆ.

ವಿನಯ್​ ಕುಲಕರ್ಣಿ ತಪ್ಪು ಮಾಡಿಲ್ಲ, ಸಿಬಿಐ ಅಧಿಕಾರಿಗಳಿಗೆ ಒತ್ತಡ ಇದೆ: ಡಿ.ಕೆ.ಶಿವಕುಮಾರ್​ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್
ರಾಜೇಶ್ ದುಗ್ಗುಮನೆ
| Edited By: |

Updated on: Dec 17, 2020 | 10:24 PM

Share

ಧಾರವಾಡ: ಜಿ.ಪಂ. ಸದಸ್ಯ ಯೋಗೀಶ್‌ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ CBI ಮಾಜಿ ಸಚಿವ ವಿನಯ್​ ಕುಲಕರ್ಣಿಯನ್ನು ಬಂಧಿಸಿತ್ತು. ಈ ಪ್ರಕರಣವು ರಾಜಕೀಯ ಪ್ರೇರಿತ ಎಂದು ಕಾಂಗ್ರೆಸ್​ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ.

ಧಾರವಾಡದಲ್ಲಿ ವಿನಯ್​ ಕುಲಕರ್ಣಿ ನಿವಾಸಕ್ಕೆ ಭೇಟಿ ನೀಡಿದ ನಂತರದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ವಿನಯ್​ ಕುಲಕರ್ಣಿ ಬಂಧನ ರಾಜಕೀಯ ಪ್ರೇರಿತ. ವಿನಯ್​ ಕುಲಕರ್ಣಿ ತಪ್ಪು ಮಾಡಿಲ್ಲ ಅನ್ನುವುದು ಗೊತ್ತಿದೆ. ಒತ್ತಡದಲ್ಲಿ ಸಿಬಿಐ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಈ ಮೂಲಕ ಈ ಪ್ರಕರಣದ ಹಿಂದೆ ಬಿಜೆಪಿ ಕೈವಾಡ ಇದೆ ಎನ್ನುವ ಆರೋಪ ಮಾಡಿದ್ದಾರೆ.

ವಿನಯ್​ ಕುಲಕರ್ಣಿ ಮನೆಯಲ್ಲಿ ಏನು ಚರ್ಚೆ ಆಗಿದೆ ಎನ್ನುವ ಬಗ್ಗೆ ಮಾತನಾಡಿದ ಡಿಕೆಶಿ, ವಿನಯ್​ ಮನೆಯವರು ನನ್ನ ಬಳಿ ಎಲ್ಲಾ ಅಳಲು ತೋಡಿಕೊಂಡಿದ್ದಾರೆ. ಏನೆಲ್ಲ ಚರ್ಚೆ ಆಯಿತು ಎಂದು ಹೇಳಲು ಆಗುವುದಿಲ್ಲ. ನಮಗೂ ನ್ಯಾಯಾಲಯವಿದೆ, ಕಾನೂನಿದೆ ಎಂದು ಡಿಕೆಶಿ ಹೇಳಿದ್ದಾರೆ.

ಏನಿದರ ಹಿನ್ನೆಲೆ: ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್‌ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್​ ಕುಲಕರ್ಣಿ ಕೈವಾಡ ಕೂಡ ಇದೆ ಎನ್ನಲಾಗಿದೆ. ಹೀಗಾಗಿ ಇವರನ್ನು ಬಂಧಿಸಿ ಜೈಲಿನಲ್ಲಿ ಇಡಲಾಗಿದೆ. ಇತ್ತೀಚೆಗೆ ಇವರು ಜಾಮೀನಿಗಾಗಿ ಅರ್ಜಿ ಸಲ್ಲಿಕೆ ಮಾಡಿದ್ದರು. ಆದರೆ, ಅದು ತಿರಸ್ಕಾರಗೊಂಡಿತ್ತು. ಇತ್ತೀಚೆಗೆ, ವಿನಯ್​ ಕುಲಕರ್ಣಿಗೆ ಐಷಾರಾಮಿ ಸವಲತ್ತು ನೀಡಲಾಗುತ್ತಿದೆ ಎನ್ನುವ ಬಗ್ಗೆಯೂ ಟಿವಿ9 ಸುದ್ದಿ ಬಿತ್ತರ ಮಾಡಿತ್ತು.

ಗುಂಡು-ತುಂಡು ಆಯ್ತು, ಈಗ ಜೈಲಲ್ಲಿ ರೌಡಿಶೀಟರ್ ಜತೆ ವಿನಯ್ ಕುಲಕರ್ಣಿ ಕಾಲಹರಣ!

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ