AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಟ್ ವಾಪಸ್ ಪಡೆದು ಕೋರ್ಟ್ ಆದೇಶ ಉಲ್ಲಂಘನೆ: ಮುಡಾ ಆಯುಕ್ತರ ಬಂಧನಕ್ಕೆ ಕುಮಾರಸ್ವಾಮಿ ಆಗ್ರಹ

ಮುಡಾ ಹಗರಣದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ 14 ನಿವೇಶನಗಳನ್ನು ವಾಪಸ್ ನೀಡಿರುವ ಬಗ್ಗೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಅನುಮಾನ ವ್ಯಕ್ತಪಡಿಸಿದ್ದಾರೆ. ಸೈಟ್ ವಾಪಸ್ ಪಡೆದು ಕೋರ್ಟ್ ಆದೇಶ ಉಲ್ಲಂಘನೆ ಮಾಡಲಾಗಿದೆ. ಮುಡಾ ಆಯುಕ್ತರನ್ನು ಬಂಧಿಸಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಸೈಟ್ ವಾಪಸ್ ಪಡೆದು ಕೋರ್ಟ್ ಆದೇಶ ಉಲ್ಲಂಘನೆ: ಮುಡಾ ಆಯುಕ್ತರ ಬಂಧನಕ್ಕೆ ಕುಮಾರಸ್ವಾಮಿ ಆಗ್ರಹ
ಕುಮಾರಸ್ವಾಮಿ
Sunil MH
| Edited By: |

Updated on: Oct 02, 2024 | 3:11 PM

Share

ಬೆಂಗಳೂರು, ಅಕ್ಟೋಬರ್ 2: ಮುಡಾ 14 ಸೈಟ್​ಗಳ ಖಾತೆ ರದ್ದು ಮತ್ತು ಸಿಎಂ ಸಿದ್ದರಾಮಯ್ಯ ಪಾರ್ವತಿ ಹೆಸರಿನಲ್ಲಿದ್ದ ಸೈಟ್​ಗಳು ಮುಡಾ ಪಾಲಾಗಿದ್ದರಿಂದ ಮುಡಾ ಹಗರಣಕ್ಕೆ ದೊಡ್ಡ ತಿರುವು ದೊರೆತಿದೆ. ಮಂಗಳವಾರ ಖುದ್ದು ಸಿಎಂ ಸಿದ್ದರಾಮಯ್ಯರ ಪತ್ನಿಯೇ ಮುಡಾ ಕಚೇರಿಗೆ ಬಂದು ಸೈಟ್ ವಾಪಸ್​ ಕೊಡೋದಾಗಿ ಹೇಳಿದ್ದರು. ಇದಾಗ್ತಿದ್ದಂತೆಯೇ ತಕ್ಷಣವೇ ಸಿಎಂ ಪತ್ನಿಯ ಹೆಸರಿನಲ್ಲಿದ್ದ ಸೈಟ್​ಗಳು ಮುಡಾ ಪಾಲಾಗಿದೆ. 14 ಸೈಟ್​ಗಳ ಕ್ರಮಪತ್ರ ರದ್ದಾಗಿದೆ ಎಂದು ಮುಡಾ ಆಯುಕ್ತರೇ ಹೇಳಿಕೆ ಕೊಟ್ಟಿದ್ದಾರೆ. ಈ ಮಧ್ಯೆ ಈ ಎಲ್ಲಾ ಬೆಳವಣಿಗೆಗಳ ಬಗ್ಗೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಅನುಮಾನ ವ್ಯಕ್ತಪಡಿಸಿದ್ದಾರೆ.

ಸೈಟ್​ ವಾಪಸ್ ನೀಡುವ ಮೂಲಕ ಸಿಎಂ ಸಿದ್ದರಾಮಯ್ಯ ಸಾಕ್ಷ್ಯನಾಶಕ್ಕೆ ಪ್ರಯತ್ನಿಸಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ. ಮುಡಾ ಆಯುಕ್ತರ ಮೇಲೆ ಯಾಱರು ಪ್ರಭಾವ ಬೀರಿದ್ದಾರೆ ಅಂತಾ ಗೊತ್ತಾಗ್ಬೇಕಿದೆ ಎಂದು ಆಗ್ರಹಿಸಿದ್ದಾರೆ.

ಮುಡಾದಲ್ಲಿ ನೂರಾರು ಫಲಾನುಭವಿಗಳು ಇದ್ದಾರೆ: ಚಲುವರಾಯಸ್ವಾಮಿ

ಮುಡಾದಲ್ಲಿ ನೂರಾರು ಜನರು ಫಲಾನುಭವಿಗಳು ಇದ್ದಾರೆ. ಇದರಲ್ಲಿ ಬಿಜೆಪಿ, ಕಾಂಗ್ರೆಸ್​ನವರು ಎಲ್ಲ ಇದ್ದಾರೆ ಎಂದು ಸಚಿವ ಚಲುವರಾಯಸ್ವಾಮಿ ಹೊಸ ಟ್ವಿಸ್ಟ್ ಕೊಟ್ಟಿದ್ದಾರೆ. ತನಿಖೆ ಆದ ಮೇಲೆ ಎಲ್ಲವೂ ಹೊರಗೆ ಬರುತ್ತೆ. ಎಲ್ಲರೂ ತಾಳ್ಮೆಯಿಂದ ಇರಿ ಎಂದು ಹೇಳಿದ್ದಾರೆ.

ಕೇಂದ್ರದ 29 ಸಚಿವರ ವಿರುದ್ಧ ಕ್ರಿಮಿನಲ್​ ಕೇಸ್​ಗಳಿವೆ: ಲಾಡ್ ಕಿಡಿ

ಸಿದ್ದರಾಮಯ್ಯ ರಾಜೀನಾಮೆ ಕೇಳ್ತಿರೋ ಬಿಜೆಪಿಗೆ ಸಚಿವ ಸಂತೋಷ್ ಲಾಡ್​ ಕೌಂಟರ್ ಕೊಟ್ಟಿದ್ದಾರೆ. ಕೇಂದ್ರ ಸಂಪುಟದ 29 ಸಚಿವರ ವಿರುದ್ಧ ಕ್ರಿಮಿನಲ್ ಕೇಸ್​ಗಳಿವೆ. ಅವರು ರಾಜೀನಾಮೆ ಕೊಡ್ಬೇಕಲ್ವಾ? ಅಂತಾ ಪ್ರಶ್ನಿಸಿದ್ದಾರೆ. ಇನ್ನ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ, ಸಿಎಂ ಪತ್ನಿ ಮುಜುಗರದಿಂದ ಸೈಟ್ ವಾಪಸ್ ಕೊಟ್ಟಿದ್ದಾರೆ ಎಂದರು.

ಇತ್ತ ಸಿಎಂ ಪತ್ನಿ ಸೈಟ್ ವಾಪಸ್ ಕೊಟ್ಟಿದ್ದನ್ನೇ ವಿಪಕ್ಷ ನಾಯಕರು ಅಸ್ತ್ರ ಮಾಡಿಕೊಂಡಿದ್ದಾರೆ. ಸಿಎಂ ಕುಟುಂಬ ಕಾನೂನು ಕುಣಿಕೆಯಿಂದ ತಪ್ಪಿಸಿಕೊಳ್ಳೋಕೆ ಸಾಧ್ಯವೇ ಇಲ್ಲ, ಸಿಎಂ ರಾಜೀನಾಮೆ ಕೊಟ್ಟೇ ಕೊಡ್ತಾರೆ ಅಂತಾ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ.

ಸಿಎಂ ಸಿದ್ದರಾಮಯ್ಯ ರೆಡ್​ಹ್ಯಾಂಡ್ ಆಗಿ ಸಿಕ್ಕಿಹಾಕಿಕೊಂಡಿದ್ದಾರೆ, ರಾಜೀನಾಮೆ ಕೊಡಲಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಇಡಿ ಪ್ರಕರಣ ದಾಖಲಿಸುತ್ತಿದ್ದಂತೆಯೇ ಸಿದ್ದರಾಮಯ್ಯ ಪತ್ನಿ ಮುಡಾ ಸೈಟ್ ವಾಪಸ್ ಕೊಡಲು ಇದೆ ಬಲವಾದ ಕಾರಣ

ಒಟ್ಟಾರೆಯಾಗಿ ಸೈಟ್​ ವಾಪಸ್​ ಪಡೆದ ಮುಡಾ ಪ್ರಾಧಿಕಾರದ ನಡೆಯನ್ನೇ ವಿಪಕ್ಷ ನಾಯಕರ ಅನುಮಾನಿಸಿದ್ದಾರೆ. ಯಾರು ಪ್ರಭಾವ ಬೀರಿದ್ದಾರೆ ಅನ್ನೋದು ತನಿಖೆ ಆಗ್ಬೇಕು ಅಂತಾ ಆಗ್ರಹಿಸಿದ್ದಾರೆ. ಇತ್ತಾ ಮುಡಾದಲ್ಲಿ ಬಿಜೆಪಿಯವರು ಫಲಾನುಭವಿಗಳಾಗಿದ್ದಾರೆ, ತನಿಖೆಯಿಂದ ಮುಂದೆ ಗೊತ್ತಾಗುತ್ತೆ ಅಂತಾ ಕಾಂಗ್ರೆಸ್​ ತಿರುಗೇಟು ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್