AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಚಾರ ಪೊಲೀಸರಿಂದ ಪಿಡಿಎ ಉಪಕರಣಗಳನ್ನು ಹಿಂಪಡೆಯಲಾಗಿದೆ ಎಂಬ ಸುದ್ದಿ ಸುಳ್ಳು

Traffic Rules: ಜಂಟಿ ಪೊಲೀಸ್ ಆಯುಕ್ತರನ್ನು, ಸಂಚಾರ ಪೊಲೀಸರನ್ನು ಯಾವ ಮಾಧ್ಯಮದ ಪ್ರತಿನಿಧಿಯೂ ಸಂಪರ್ಕಿಸಿರುವುದಿಲ್ಲ. ಈ ವಿಚಾರಗಳು ಸಂಪೂರ್ಣ ಸುಳ್ಳು ಎಂದು ಸ್ಪಷ್ಟೀಕರಿಸಿ ಬೆಂಗಳೂರು ನಗರ ಸಂಚಾರ, ಜಂಟಿ ಪೊಲೀಸ್ ಆಯುಕ್ತ ಡಾ. ಬಿ.ಆರ್. ರವಿಕಾಂರೇಗೌಡ ಸ್ಪಷ್ಟನೆ ನೀಡಿದ್ದಾರೆ.

ಸಂಚಾರ ಪೊಲೀಸರಿಂದ ಪಿಡಿಎ ಉಪಕರಣಗಳನ್ನು ಹಿಂಪಡೆಯಲಾಗಿದೆ ಎಂಬ ಸುದ್ದಿ ಸುಳ್ಳು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 10, 2021 | 5:40 PM

Share

ಬೆಂಗಳೂರು: ಕೆಲವು ಮಾಧ್ಯಮಗಳಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು, ಸಂಚಾರ ಪೊಲೀಸರು ಸಂಚಾರಿ ನಿಯಮ ಜಾರಿ ಮಾಡಲು ಉಪಯೋಗಿಸುವ ಪಿಡಿಎ ಉಪಕರಣಗಳನ್ನು ವಾಪಸ್ ಪಡೆಯಲಾಗಿದೆ ಎಂಬ ಸುದ್ದಿ ಹಬ್ಬಿತ್ತು. ಹಾಗೂ ಪೊಲೀಸರು ಪಿಡಿಎ ಮೂಲಕ ಯಾವುದೇ ಸಂಚಾರ ನಿಯಮ ಉಲ್ಲಂಘನೆಗಳನ್ನು ದಾಖಲಿಸಬಾರದಾಗಿ ತಿಳಿಸುತ್ತಾರೆ ಎಂದು ಸುದ್ದಿ ಹರಿದಾಡಿತ್ತು. ಆದರೆ, ಈ ಸುದ್ದಿಗಳು ಸುಳ್ಳು ಸುದ್ದಿಯಾಗಿದೆ ಎಂದು ಸ್ಪಷ್ಟೀಕರಣ ಲಭ್ಯವಾಗಿದೆ.

ಪೊಲೀಸರು ವಾಹನ ಸವಾರರು ನಿಯಮ ಉಲ್ಲಂಘಿಸಿದರೆ ಹಾಕುತ್ತಿದ್ದ ದಂಡ, ಪಿಡಿಎ ಉಪಕರಣಗಳನ್ನು ಹಿಂಪಡೆದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಕೂಡ ಭಾರೀ ಚರ್ಚೆ ನಡೆದಿತ್ತು. ಹಲವರು ಇದು ಉತ್ತಮ ಬೆಳವಣಿಗೆ, ನೂತನ ಸಚಿವರಿಗೆ ಅಭಿನಂದನೆ ಎಂಬ ಪೋಸ್ಟ್​ಗಳನ್ನು ಕೂಡ ಹಂಚಿಕೊಂಡಿದ್ದರು. ಆದರೆ, ಈ ಎಲ್ಲಾ ಸುದ್ದಿಗಳು ಕೇವಲ ವದಂತಿ ಅಷ್ಟೇ ಎಂದು ಈಗ ತಿಳಿದುಬಂದಿದೆ.

ಇಂತಹ ಯಾವುದೇ ಸೂಚನೆಯನ್ನು ನೀಡಿರುವುದಿಲ್ಲ. ಹಾಗೂ ಪಿಡಿಎಗಳನ್ನು ವಾಪಸ್ ಪಡೆದಿರುವುದಿಲ್ಲ. ಜಂಟಿ ಪೊಲೀಸ್ ಆಯುಕ್ತರು, ಸಂಚಾರ ಪೊಲೀಸರು ಪಿಡಿಎಗಳನ್ನು ಹಿಂದೆ ಪಡೆದಿರುವ ಬಗ್ಗೆ ಹೇಳಿಕೆ ನೀಡಿರುತ್ತಾರೆ ಎಂದು ಕೆಲವು ಮಾಧ್ಯಮಗಳು ಪ್ರತಿಬಿಂಬಿಸಿ ಪ್ರಚಾರ ಮಾಡಿರುವುದು ಸತ್ಯಕ್ಕೆ ದೂರವಾಗಿದೆ ಎಂದು ಸ್ಪಷ್ಟನೆ ಕೊಡಲಾಗಿದೆ.

ಈ ಸಂಬಂಧ ಜಂಟಿ ಪೊಲೀಸ್ ಆಯುಕ್ತರನ್ನು, ಸಂಚಾರ ಪೊಲೀಸರನ್ನು ಯಾವ ಮಾಧ್ಯಮದ ಪ್ರತಿನಿಧಿಯೂ ಸಂಪರ್ಕಿಸಿರುವುದಿಲ್ಲ. ಈ ವಿಚಾರಗಳು ಸಂಪೂರ್ಣ ಸುಳ್ಳು ಎಂದು ಸ್ಪಷ್ಟೀಕರಿಸಿ ಬೆಂಗಳೂರು ನಗರ ಸಂಚಾರ, ಜಂಟಿ ಪೊಲೀಸ್ ಆಯುಕ್ತ ಡಾ. ಬಿ.ಆರ್. ರವಿಕಾಂರೇಗೌಡ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿಗರೇ, ಈ ರಸ್ತೆಗಳಲ್ಲಿ ಇನ್ನೂ 15 ದಿನ ಟ್ರಾಫಿಕ್​ ಜಾಮ್​; ರಸ್ತೆಗಿಳಿಯುವ ಮುನ್ನ ಯೋಚಿಸಿ

ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ ಮಾಡುವೆ: ಗೃಹ ಸಚಿವ ಆರಗ ಜ್ಞಾನೇಂದ್ರ

(Viral News on Traffic Rules PDA Machines Traffic Police is totally False and Fake)

Published On - 5:31 pm, Tue, 10 August 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?