ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ರಕ್ಷಣೆ, ಮೀನುಗಾರನ ಸಾಹಸದ ವಿಡಿಯೋ ವೈರಲ್

ಯಾದಗಿರಿ: ಭೀಮಾ ನದಿಯಲ್ಲಿ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ಸಿನಿಮೀಯ ರೀತಿಯಲ್ಲಿ ರಕ್ಷಣೆ ಮಾಡಿರುವ ವಿಡಿಯೋ ವೈರಲ್ ಆಗಿದೆ. ಯಾದಗಿರಿ ನಗರದ ಹೊರ ವಲಯದ ಭೀಮಾ ಸೇತುವೆ ಬಳಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮಹಿಳೆಯೊಬ್ಬರು ವೈಯಕ್ತಿಕ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಳ್ಳಲು ಭೀಮಾ ನದಿಗೆ ಹಾರಿದ್ದಾರೆ. ಇನ್ನೇನು ಮುಳುಗುದ್ರು ಎನ್ನುವಷ್ಟರಲ್ಲಿ ಹೀರೋ ಹಾಗೇ ಬಂದ ಮೀನುಗಾರ ಮಹಿಳೆಯ ಜೀವ ಉಳಿಸಿದ್ದಾನೆ. ಸ್ಥಳೀಯ ಮೀನುಗಾರರೊಬ್ಬರು ಜೀವ ಉಳಿಸಿದ ದೃಶ್ಯವನ್ನು ತಮ್ಮ ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದಾರೆ. ಮಹಿಳೆಯನ್ನು […]

ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ರಕ್ಷಣೆ, ಮೀನುಗಾರನ ಸಾಹಸದ ವಿಡಿಯೋ  ವೈರಲ್
ಸಾಧು ಶ್ರೀನಾಥ್​

Updated on: Nov 29, 2019 | 5:00 PM

ಯಾದಗಿರಿ: ಭೀಮಾ ನದಿಯಲ್ಲಿ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ಸಿನಿಮೀಯ ರೀತಿಯಲ್ಲಿ ರಕ್ಷಣೆ ಮಾಡಿರುವ ವಿಡಿಯೋ ವೈರಲ್ ಆಗಿದೆ. ಯಾದಗಿರಿ ನಗರದ ಹೊರ ವಲಯದ ಭೀಮಾ ಸೇತುವೆ ಬಳಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಮಹಿಳೆಯೊಬ್ಬರು ವೈಯಕ್ತಿಕ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಳ್ಳಲು ಭೀಮಾ ನದಿಗೆ ಹಾರಿದ್ದಾರೆ. ಇನ್ನೇನು ಮುಳುಗುದ್ರು ಎನ್ನುವಷ್ಟರಲ್ಲಿ ಹೀರೋ ಹಾಗೇ ಬಂದ ಮೀನುಗಾರ ಮಹಿಳೆಯ ಜೀವ ಉಳಿಸಿದ್ದಾನೆ. ಸ್ಥಳೀಯ ಮೀನುಗಾರರೊಬ್ಬರು ಜೀವ ಉಳಿಸಿದ ದೃಶ್ಯವನ್ನು ತಮ್ಮ ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದಾರೆ. ಮಹಿಳೆಯನ್ನು ಮೀನುಗಾರ ಕಾಪಾಡಿದ ಸಾಹಸಮಯ ದೃಶ್ಯ ಈಗ ಫುಲ್ ವೈರಲ್ ಆಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us