AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹೆಬ್ಬಾವನ್ನೇ‌ ನುಂಗಿದ ಬೃಹತ್ ಕಾಳಿಂಗ ಸರ್ಪ! ಬೆಳ್ತಂಗಡಿ ತಾಲೂಕಿನ ಸೋಮಂತಡ್ಕದಲ್ಲಿ ಘಟನೆ

ವಿವರ ತಿಳಿದು ಸ್ಥಳಕ್ಕೆ ಬಂದ ಸ್ನೇಕ್ ಅಶೋಕ್ ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಿದ್ದಾರೆ. ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಿ ಮತ್ತೆ ಕಾಡಿಗೆ ಬಿಟ್ಟಿದ್ದಾರೆ. ಆದರೆ, ಘಟನೆಯಲ್ಲಿ ಹೆಬ್ಬಾವು ಮೃತಪಟ್ಟಿದೆ.

Viral Video: ಹೆಬ್ಬಾವನ್ನೇ‌ ನುಂಗಿದ ಬೃಹತ್ ಕಾಳಿಂಗ ಸರ್ಪ! ಬೆಳ್ತಂಗಡಿ ತಾಲೂಕಿನ ಸೋಮಂತಡ್ಕದಲ್ಲಿ ಘಟನೆ
ಕಾಳಿಂಗ ಸರ್ಪ
TV9 Web
| Edited By: |

Updated on:Apr 05, 2022 | 12:55 PM

Share

ಮಂಗಳೂರು: ಬೃಹತ್ ಕಾಳಿಂಗ ಸರ್ಪವೊಂದು ಹೆಬ್ಬಾವನ್ನು ನುಂಗಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಸೋಮಂತಡ್ಕದಲ್ಲಿ ನಡೆದಿದೆ. ಮನೆಯೊಂದರ ಹಿತ್ತಲಿನಲ್ಲಿದ್ದ ಹೆಬ್ಬಾವನ್ನು ಬೃಹತ್ ಕಾಳಿಂಗ ನುಂಗಿದೆ. ಬಳಿಕ ಹರಿದಾಡಲು ಸಾಧ್ಯವಾಗದೆ ನುಂಗಿದ ಹಾವನ್ನು ಹೊರಹಾಕಿದೆ. ಹೆಬ್ಬಾವನ್ನು ನುಂಗಿ ವಾಪಾಸು ಹೊರ ಹಾಕಿದ ಚಿತ್ರಣವೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರು ಮೂಗಿನ ಮೇಲೆ ಬೆರಳಿಡುವಂತೆ ಮಾಡಿದೆ.

ಸುಮಾರು 14 ಫೀಟ್ ಉದ್ದದ ಕಾಳಿಂಗ ಸರ್ಪವು ಹೆಬ್ಬಾವನ್ನು ನುಂಗಿತ್ತು. ಅಚ್ಚರಿಯ ವಿಷಯ ಅಂದರೆ, ಕಾಳಿಂಗ ಸರ್ಪ ಎರಡು ದಿನದಿಂದ ಇದ್ದಲ್ಲೇ ಇತ್ತು ಎಂದು ತಿಳಿದು ಬಂದಿರುವುದು. ದೈತ್ಯ ಹೆಬ್ಬಾವನ್ನು ನುಂಗಿದ್ದರಿಂದ ಕಾಳಿಂಗ ಸರ್ಪಕ್ಕೆ ಹರಿದಾಡಲು ಆಗುತ್ತಿರಲಿಲ್ಲ. ನೆರೆಯ ಮನೆಯವರು ಉರಗತಜ್ಞ ಬೆಳ್ತಂಗಡಿಯ ಸ್ನೇಕ್ ಅಶೋಕ್​ಗೆ ಈ ಬಗ್ಗೆ ಮಾಹಿತಿ ನೀಡಿದ್ದರು.

ವಿವರ ತಿಳಿದು ಸ್ಥಳಕ್ಕೆ ಬಂದ ಸ್ನೇಕ್ ಅಶೋಕ್ ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಿದ್ದಾರೆ. ಕಾಳಿಂಗ ಸರ್ಪವನ್ನು ರಕ್ಷಣೆ ಮಾಡಿ ಮತ್ತೆ ಕಾಡಿಗೆ ಬಿಟ್ಟಿದ್ದಾರೆ. ಆದರೆ, ಘಟನೆಯಲ್ಲಿ ಹೆಬ್ಬಾವು ಮೃತಪಟ್ಟಿದೆ.

ಇದನ್ನೂ ಓದಿ: ಕಸ ತೆಗೆಯುತ್ತಿದ್ದಾಗ ಕಂತೆಕಂತೆ ನೋಟು ಕಂಡು ಕಂಗಾಲಾದ ಪೌರಕಾರ್ಮಿಕರು; ಸ್ಥಳಕ್ಕೆ ಓಡೋಡಿ ಬಂದ ಪೊಲೀಸರು ಬಿದ್ದುಬಿದ್ದು ನಕ್ಕರು !

ಇದನ್ನೂ ಓದಿ: Viral Video: ಕೋಳಿ ಕಾಲಿನ ವ್ಯಕ್ತಿಯಿಂದ ಜಿಮ್​​ನಲ್ಲಿ ಭರ್ಜರಿ ವರ್ಕೌಟ್​; ಅವರ ಕಾಲು ಹಾಗಾಗಿದ್ದು ಯಾಕೆ ಗೊತ್ತಾ?

Published On - 3:45 pm, Sat, 3 April 21

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ