ವಿಶಾಖಪಟ್ಟಣ ಅನಿಲ ದುರಂತ: ಸಕಾಲದಲ್ಲಿ ಸಿಎಂ ಯಡಿಯೂರಪ್ಪ ಕಿವಿಮಾತು

ಬೆಂಗಳೂರು: ನೆರೆಯ ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಇಂದು ಬೆಳಗಿನ ಜಾವ ಘೋರ ಅನಿಲ ದುರಂತ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂತಹ ಘಟನೆಗಳು ನಡೆಯಬಾರದು ಎಂದು ಕೈಗಾರಿಕೋದ್ಯಮಿಗಳಲ್ಲಿ ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದಾರೆ. ಲಾಕ್‌ಡೌನ್ ಬಳಿಕ ಏಕಾಏಕಿ ಕೈಗಾರಿಕೆಗಳನ್ನ ಆರಂಭಿಸುವ ಮುನ್ನ ಎಚ್ಚರವಹಿಸಿ: ಕೊರೊನಾದಿಂದಾಗಿ ಲಾಕ್‌ಡೌನ್ ಹಿನ್ನೆಲೆ ರಾಜ್ಯದಲ್ಲಿ ಕೈಗಾರಿಕೆಗಳು ಬಂದ್ ಆಗಿವೆ. ಮುಂದೆ ಲಾಕ್‌ಡೌನ್ ತೆರವುಗೊಳಿಸಿದ ಬಳಿಕ ಏಕಾಏಕಿ ಕೈಗಾರಿಕೆಗಳನ್ನು ಆರಂಭಿಸುವ ಮುನ್ನ ಎಚ್ಚರವಹಿಸಿ. ವಿಶಾಖಪಟ್ಟಣಂ ಅನಿಲ ದುರಂತವನ್ನು ಎಚ್ಚರಿಕೆಯ ಪಾಠವಾಗಿ ತೆಗೆದುಕೊಳ್ಳಬೇಕು. ಎಲ್ಲಾ ಸುರಕ್ಷಿತ ಮುಂಜಾಗ್ರತಾ […]

ವಿಶಾಖಪಟ್ಟಣ ಅನಿಲ ದುರಂತ: ಸಕಾಲದಲ್ಲಿ  ಸಿಎಂ ಯಡಿಯೂರಪ್ಪ ಕಿವಿಮಾತು
ಸಾಧು ಶ್ರೀನಾಥ್​

Updated on: May 07, 2020 | 2:47 PM

ಬೆಂಗಳೂರು: ನೆರೆಯ ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಇಂದು ಬೆಳಗಿನ ಜಾವ ಘೋರ ಅನಿಲ ದುರಂತ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂತಹ ಘಟನೆಗಳು ನಡೆಯಬಾರದು ಎಂದು ಕೈಗಾರಿಕೋದ್ಯಮಿಗಳಲ್ಲಿ ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಲಾಕ್‌ಡೌನ್ ಬಳಿಕ ಏಕಾಏಕಿ ಕೈಗಾರಿಕೆಗಳನ್ನ ಆರಂಭಿಸುವ ಮುನ್ನ ಎಚ್ಚರವಹಿಸಿ:
ಕೊರೊನಾದಿಂದಾಗಿ ಲಾಕ್‌ಡೌನ್ ಹಿನ್ನೆಲೆ ರಾಜ್ಯದಲ್ಲಿ ಕೈಗಾರಿಕೆಗಳು ಬಂದ್ ಆಗಿವೆ. ಮುಂದೆ ಲಾಕ್‌ಡೌನ್ ತೆರವುಗೊಳಿಸಿದ ಬಳಿಕ ಏಕಾಏಕಿ ಕೈಗಾರಿಕೆಗಳನ್ನು ಆರಂಭಿಸುವ ಮುನ್ನ ಎಚ್ಚರವಹಿಸಿ. ವಿಶಾಖಪಟ್ಟಣಂ ಅನಿಲ ದುರಂತವನ್ನು ಎಚ್ಚರಿಕೆಯ ಪಾಠವಾಗಿ ತೆಗೆದುಕೊಳ್ಳಬೇಕು. ಎಲ್ಲಾ ಸುರಕ್ಷಿತ ಮುಂಜಾಗ್ರತಾ ಕ್ರಮ ಕೈಗೊಂಡು, ಖಾತರಿ ಪಡಿಸಿಕೊಂಡ ನಂತರವೇ ಉತ್ಪಾದನೆ ಆರಂಭಿಸಿ ಎಂದು ಕೈಗಾರಿಕೋದ್ಯಮಿಗಳಿಗೆ ಸಿಎಂ ಯಡಿಯೂರಪ್ಪ ಸಕಾಲದಲ್ಲಿ ಕಿವಿಮಾತು ಹೇಳಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us