AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವನಾಥ್ ಇತಿಹಾಸವನ್ನು ಓದಿಕೊಂಡಿದ್ದಾರೆ ಮತ್ತು ವಿಷಯಗಳನ್ನು ತಿಳಿದುಕೊಂಡಿದ್ದಾರೆ: ಇಬ್ರಾಹಿಂ

ಬಿಜೆಪಿ ಎಮ್ಮೆಲ್ಸಿ ಹೆಚ್.ವಿಶ್ವನಾಥ್ ಅವರು ಬುಧವಾರದಂದು ಟಿಪ್ಪು ಸುಲ್ತಾನ ಕುರಿತು ಆಡಿರುವ ಮೆಚ್ಚುಗೆ ಮಾತುಗಳನ್ನು ವಿರೋಧಪಕ್ಷದ ನಾಯಕರು ತಮ್ಮ ಅನುಕೂಲಕ್ಕೆ ಬಳಸಿಕೊಳ್ಳವುದನ್ನು ಆರಂಭಿಸಿದ್ದಾರೆ. ಹಿರಿಯ ಕಾಂಗ್ರೆಸ್ ನಾಯಕ ಮತ್ತು ಪ್ರಬಲ ಮುಸ್ಲಿಂ ಮುಖಂಡ ಸಿಎಂ ಇಬ್ರಾಹಿಂ ಇಂದು ಬೆಂಗಳೂರಿನಲ್ಲಿ ಹೇಳಿಕೆಯೊಂದನ್ನು ನೀಡಿ, ವಿಶ್ವನಾಥ್ ಹೇಳಿರುವುದರಲ್ಲಿ ತಪ್ಪೇನೂ ಇಲ್ಲ ಎಂದರು ‘‘ವಿಶ್ವನಾಥ್ ತಮ್ಮ ಅಂತರಾಳದ ಮಾತನಾಡಿದ್ದಾರೆ, ಅವರು ಇತಿಹಾಸವನ್ನು ಓದಿದ್ದಾರೆ ಹಾಗೂ ವಿಷಯಗಳನ್ನು ಚಿನ್ನಾಗಿ ಅರ್ಥಮಾಡಿಕೊಂಡಿದ್ದಾರೆ. ಇದು ಪಕ್ಷ ಅಥವಾ ಸಿದ್ಧಾಂತಗಳ ವಿಷಯ ಅಲ್ಲ. ಕರ್ನಾಟಕದ ಜನಕ್ಕೆ ಚೆನ್ನಾಗಿ […]

ವಿಶ್ವನಾಥ್ ಇತಿಹಾಸವನ್ನು ಓದಿಕೊಂಡಿದ್ದಾರೆ ಮತ್ತು ವಿಷಯಗಳನ್ನು ತಿಳಿದುಕೊಂಡಿದ್ದಾರೆ: ಇಬ್ರಾಹಿಂ
ಅರುಣ್​ ಕುಮಾರ್​ ಬೆಳ್ಳಿ
|

Updated on: Aug 27, 2020 | 5:48 PM

Share

ಬಿಜೆಪಿ ಎಮ್ಮೆಲ್ಸಿ ಹೆಚ್.ವಿಶ್ವನಾಥ್ ಅವರು ಬುಧವಾರದಂದು ಟಿಪ್ಪು ಸುಲ್ತಾನ ಕುರಿತು ಆಡಿರುವ ಮೆಚ್ಚುಗೆ ಮಾತುಗಳನ್ನು ವಿರೋಧಪಕ್ಷದ ನಾಯಕರು ತಮ್ಮ ಅನುಕೂಲಕ್ಕೆ ಬಳಸಿಕೊಳ್ಳವುದನ್ನು ಆರಂಭಿಸಿದ್ದಾರೆ.

ಹಿರಿಯ ಕಾಂಗ್ರೆಸ್ ನಾಯಕ ಮತ್ತು ಪ್ರಬಲ ಮುಸ್ಲಿಂ ಮುಖಂಡ ಸಿಎಂ ಇಬ್ರಾಹಿಂ ಇಂದು ಬೆಂಗಳೂರಿನಲ್ಲಿ ಹೇಳಿಕೆಯೊಂದನ್ನು ನೀಡಿ, ವಿಶ್ವನಾಥ್ ಹೇಳಿರುವುದರಲ್ಲಿ ತಪ್ಪೇನೂ ಇಲ್ಲ ಎಂದರು

‘‘ವಿಶ್ವನಾಥ್ ತಮ್ಮ ಅಂತರಾಳದ ಮಾತನಾಡಿದ್ದಾರೆ, ಅವರು ಇತಿಹಾಸವನ್ನು ಓದಿದ್ದಾರೆ ಹಾಗೂ ವಿಷಯಗಳನ್ನು ಚಿನ್ನಾಗಿ ಅರ್ಥಮಾಡಿಕೊಂಡಿದ್ದಾರೆ. ಇದು ಪಕ್ಷ ಅಥವಾ ಸಿದ್ಧಾಂತಗಳ ವಿಷಯ ಅಲ್ಲ. ಕರ್ನಾಟಕದ ಜನಕ್ಕೆ ಚೆನ್ನಾಗಿ ನೆನಪಿದೆ. ಇದೇ ಯಡಿಯೂರಪ್ಪ, ಜಗದೀಶ್ ಶೆಟ್ಟರ್ ಅವರು ಹಿಂದೆ ಅಧಿಕಾರದಲ್ಲಿದ್ದಾಗ ಟಿಪ್ಪು ಜಯಂತಿ ಆಚರಿಸಿದ್ದರು,’’ ಎಂದು ಇಬ್ರಾಹಿಂ ಹೇಳಿದರು.

‘‘ಮುಸ್ಲಿಮರನ್ನು ವೋಟ್ ಬ್ಯಾಂಕ್ ಆಗಿ ಪರಿವರ್ತಿಸುವ ಕೆಲಸ ಬಿಜೆಪಿ ಮಾಡ್ತಿದೆ. ನಮ್ಮಲ್ಲಿ ಬಹುಸಂಖ್ಯಾತ ಮತದಾರರು ಅಂದರೆ ಹಿಂದೂಗಳು ಈ ಬಹು ಸಂಖ್ಯಾತ ಮತದಾರರ ಭಾವನೆ ಕೆರಳಿಸುವ ಕೆಲಸ ಮೊದಲಿನಿಂದಲೂ ಬಿಜೆಪಿ ಮಾಡಿಕೊಂಡು ಬಂದಿದೆ,’’ ಎಂದು ಕಾಂಗ್ರೆಸ್ ನಾಯಕ ಹೇಳಿದರು.

‘‘ಬಿಜೆಪಿಯವರು ಸುಮ್ಮನೇ ಹೇಳಿಕೆ ಕೊಡುವುದನ್ನು ಬಿಟ್ಟು ನಡ್ಡಾನೋ ಪಡ್ಡಾನೋ ಹತ್ತಿರ ಹೋಗಿ ಹಣ ಕೇಳಿ ರಾಜ್ಯಕ್ಕೆ ತರಲಿ. ರಾಜ್ಯ ಸರ್ಕಾರ ನಡೆಸುತ್ತಿರುವವರು ಕೆರೆಯಲ್ಲಿ ಈಜಾಡದೆ, ಸಮುದ್ರಕ್ಕೆ ಧುಮುಕಲಿ. ಡಿ.ಜೆ.ಹಳ್ಳಿ ಗಲಾಟೆಗೆ ಡ್ರಗ್ಸ್‌ ದಂಧೆಯೇ ಕಾರಣ. ಇದನ್ನು ನಾವು ಮೊದಲಿನಿಂದಲೂ ಹೇಳುತ್ತಿದ್ದೇವೆ. ಡ್ರಗ್ಸ್‌ ಮಾರಾಟಗಾರರನ್ನು ಮೊದಲೇ ಯಾಕೆ ಹಿಡಿಯಲಿಲ್ಲ? ಈ ವೈಫಲ್ಯವನ್ನು ಸರ್ಕಾರ ಯಾಕೆ ಒಪ್ಪಿಕೊಳ್ಳುತ್ತಿಲ್ಲ?’’ ಎಂದು ಇಬ್ರಾಹಿಂ ಪ್ರಶ್ನಿಸಿದರು.

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು