AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವನಾಥ್ ಇತಿಹಾಸವನ್ನು ಓದಿಕೊಂಡಿದ್ದಾರೆ ಮತ್ತು ವಿಷಯಗಳನ್ನು ತಿಳಿದುಕೊಂಡಿದ್ದಾರೆ: ಇಬ್ರಾಹಿಂ

ಬಿಜೆಪಿ ಎಮ್ಮೆಲ್ಸಿ ಹೆಚ್.ವಿಶ್ವನಾಥ್ ಅವರು ಬುಧವಾರದಂದು ಟಿಪ್ಪು ಸುಲ್ತಾನ ಕುರಿತು ಆಡಿರುವ ಮೆಚ್ಚುಗೆ ಮಾತುಗಳನ್ನು ವಿರೋಧಪಕ್ಷದ ನಾಯಕರು ತಮ್ಮ ಅನುಕೂಲಕ್ಕೆ ಬಳಸಿಕೊಳ್ಳವುದನ್ನು ಆರಂಭಿಸಿದ್ದಾರೆ. ಹಿರಿಯ ಕಾಂಗ್ರೆಸ್ ನಾಯಕ ಮತ್ತು ಪ್ರಬಲ ಮುಸ್ಲಿಂ ಮುಖಂಡ ಸಿಎಂ ಇಬ್ರಾಹಿಂ ಇಂದು ಬೆಂಗಳೂರಿನಲ್ಲಿ ಹೇಳಿಕೆಯೊಂದನ್ನು ನೀಡಿ, ವಿಶ್ವನಾಥ್ ಹೇಳಿರುವುದರಲ್ಲಿ ತಪ್ಪೇನೂ ಇಲ್ಲ ಎಂದರು ‘‘ವಿಶ್ವನಾಥ್ ತಮ್ಮ ಅಂತರಾಳದ ಮಾತನಾಡಿದ್ದಾರೆ, ಅವರು ಇತಿಹಾಸವನ್ನು ಓದಿದ್ದಾರೆ ಹಾಗೂ ವಿಷಯಗಳನ್ನು ಚಿನ್ನಾಗಿ ಅರ್ಥಮಾಡಿಕೊಂಡಿದ್ದಾರೆ. ಇದು ಪಕ್ಷ ಅಥವಾ ಸಿದ್ಧಾಂತಗಳ ವಿಷಯ ಅಲ್ಲ. ಕರ್ನಾಟಕದ ಜನಕ್ಕೆ ಚೆನ್ನಾಗಿ […]

ವಿಶ್ವನಾಥ್ ಇತಿಹಾಸವನ್ನು ಓದಿಕೊಂಡಿದ್ದಾರೆ ಮತ್ತು ವಿಷಯಗಳನ್ನು ತಿಳಿದುಕೊಂಡಿದ್ದಾರೆ: ಇಬ್ರಾಹಿಂ
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Aug 27, 2020 | 5:48 PM

Share

ಬಿಜೆಪಿ ಎಮ್ಮೆಲ್ಸಿ ಹೆಚ್.ವಿಶ್ವನಾಥ್ ಅವರು ಬುಧವಾರದಂದು ಟಿಪ್ಪು ಸುಲ್ತಾನ ಕುರಿತು ಆಡಿರುವ ಮೆಚ್ಚುಗೆ ಮಾತುಗಳನ್ನು ವಿರೋಧಪಕ್ಷದ ನಾಯಕರು ತಮ್ಮ ಅನುಕೂಲಕ್ಕೆ ಬಳಸಿಕೊಳ್ಳವುದನ್ನು ಆರಂಭಿಸಿದ್ದಾರೆ.

ಹಿರಿಯ ಕಾಂಗ್ರೆಸ್ ನಾಯಕ ಮತ್ತು ಪ್ರಬಲ ಮುಸ್ಲಿಂ ಮುಖಂಡ ಸಿಎಂ ಇಬ್ರಾಹಿಂ ಇಂದು ಬೆಂಗಳೂರಿನಲ್ಲಿ ಹೇಳಿಕೆಯೊಂದನ್ನು ನೀಡಿ, ವಿಶ್ವನಾಥ್ ಹೇಳಿರುವುದರಲ್ಲಿ ತಪ್ಪೇನೂ ಇಲ್ಲ ಎಂದರು

‘‘ವಿಶ್ವನಾಥ್ ತಮ್ಮ ಅಂತರಾಳದ ಮಾತನಾಡಿದ್ದಾರೆ, ಅವರು ಇತಿಹಾಸವನ್ನು ಓದಿದ್ದಾರೆ ಹಾಗೂ ವಿಷಯಗಳನ್ನು ಚಿನ್ನಾಗಿ ಅರ್ಥಮಾಡಿಕೊಂಡಿದ್ದಾರೆ. ಇದು ಪಕ್ಷ ಅಥವಾ ಸಿದ್ಧಾಂತಗಳ ವಿಷಯ ಅಲ್ಲ. ಕರ್ನಾಟಕದ ಜನಕ್ಕೆ ಚೆನ್ನಾಗಿ ನೆನಪಿದೆ. ಇದೇ ಯಡಿಯೂರಪ್ಪ, ಜಗದೀಶ್ ಶೆಟ್ಟರ್ ಅವರು ಹಿಂದೆ ಅಧಿಕಾರದಲ್ಲಿದ್ದಾಗ ಟಿಪ್ಪು ಜಯಂತಿ ಆಚರಿಸಿದ್ದರು,’’ ಎಂದು ಇಬ್ರಾಹಿಂ ಹೇಳಿದರು.

‘‘ಮುಸ್ಲಿಮರನ್ನು ವೋಟ್ ಬ್ಯಾಂಕ್ ಆಗಿ ಪರಿವರ್ತಿಸುವ ಕೆಲಸ ಬಿಜೆಪಿ ಮಾಡ್ತಿದೆ. ನಮ್ಮಲ್ಲಿ ಬಹುಸಂಖ್ಯಾತ ಮತದಾರರು ಅಂದರೆ ಹಿಂದೂಗಳು ಈ ಬಹು ಸಂಖ್ಯಾತ ಮತದಾರರ ಭಾವನೆ ಕೆರಳಿಸುವ ಕೆಲಸ ಮೊದಲಿನಿಂದಲೂ ಬಿಜೆಪಿ ಮಾಡಿಕೊಂಡು ಬಂದಿದೆ,’’ ಎಂದು ಕಾಂಗ್ರೆಸ್ ನಾಯಕ ಹೇಳಿದರು.

‘‘ಬಿಜೆಪಿಯವರು ಸುಮ್ಮನೇ ಹೇಳಿಕೆ ಕೊಡುವುದನ್ನು ಬಿಟ್ಟು ನಡ್ಡಾನೋ ಪಡ್ಡಾನೋ ಹತ್ತಿರ ಹೋಗಿ ಹಣ ಕೇಳಿ ರಾಜ್ಯಕ್ಕೆ ತರಲಿ. ರಾಜ್ಯ ಸರ್ಕಾರ ನಡೆಸುತ್ತಿರುವವರು ಕೆರೆಯಲ್ಲಿ ಈಜಾಡದೆ, ಸಮುದ್ರಕ್ಕೆ ಧುಮುಕಲಿ. ಡಿ.ಜೆ.ಹಳ್ಳಿ ಗಲಾಟೆಗೆ ಡ್ರಗ್ಸ್‌ ದಂಧೆಯೇ ಕಾರಣ. ಇದನ್ನು ನಾವು ಮೊದಲಿನಿಂದಲೂ ಹೇಳುತ್ತಿದ್ದೇವೆ. ಡ್ರಗ್ಸ್‌ ಮಾರಾಟಗಾರರನ್ನು ಮೊದಲೇ ಯಾಕೆ ಹಿಡಿಯಲಿಲ್ಲ? ಈ ವೈಫಲ್ಯವನ್ನು ಸರ್ಕಾರ ಯಾಕೆ ಒಪ್ಪಿಕೊಳ್ಳುತ್ತಿಲ್ಲ?’’ ಎಂದು ಇಬ್ರಾಹಿಂ ಪ್ರಶ್ನಿಸಿದರು.

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ