AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿಯಲ್ಲಿ ವಿಶ್ವರಾದ್ಯರ ಮಹಾ ರಥೋತ್ಸವ; ಅನ್ಯ ರಾಜ್ಯಗಳಿಂದ ಹರಿದು ಬಂದ ಭಕ್ತ ಸಾಗರ

ಮಠದ ಪೀಠಾಧಿಪತಿ ಗಂಗಾಧರ ಸ್ವಾಮಿಗಳು ರಥದಲ್ಲಿ ಕುಳಿತು ಕೊಳ್ಳುತ್ತಿದ್ದಂತೆ ನೆರೆದ ಭಕ್ತರು ಕೆಕೆ ಹಾಕುತ್ತ ರಥ ಎಳೆದು ಭಕ್ತಿ ಮೆರೆಯುತ್ತಾರೆ. ಭಕ್ತ ಸಮೂಹ ರಥದ ಮೇಲೆ ಉತ್ತತ್ತಿ, ಬಾಳೆಹಣ್ಣು ಎಸೆದು ಸಂತೋಷಪಡುತ್ತಾರೆ. 55 ವರ್ಷಗಳಿಂದ ನಡೆಯುತ್ತ ಬಂದಿರುವ ಜಾತ್ರೆಗೆ ವರ್ಷದಿಂದ ವರ್ಷಕ್ಕೆ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದೆ.

ಯಾದಗಿರಿಯಲ್ಲಿ ವಿಶ್ವರಾದ್ಯರ ಮಹಾ ರಥೋತ್ಸವ; ಅನ್ಯ ರಾಜ್ಯಗಳಿಂದ ಹರಿದು ಬಂದ ಭಕ್ತ ಸಾಗರ
ವಿಶ್ವರಾದ್ಯರ ಮಹಾ ರಥೋತ್ಸವ
sandhya thejappa
|

Updated on: Mar 20, 2021 | 1:35 PM

Share

ಯಾದಗಿರಿ: ವಿಶ್ವರಾದ್ಯ ಮಠ ಸುಪ್ರಸಿದ್ಧ ಮಠ. ಪ್ರತಿ ವರ್ಷ ನಡೆಯುವ ಜಾತ್ರೆಗೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರ ದಂಡೆ ಹರಿದು ಬರುತ್ತದೆ. ವಿಶ್ವರಾದ್ಯರ ರಥೋತ್ಸವನ್ನ ಕಣ್ತುಂಬಿಕೊಳ್ಳಲು ದೂರದ ಊರುಗಳಿಂದ ಪಾದಯಾತ್ರೆ ಮೂಲಕ ವಿಶ್ವರಾದ್ಯರ ಸನ್ನಿಧಿಗೆ ಆಗಮಿಸುತ್ತಾರೆ. ಸುಗ್ಗಿ ಕಾಲದಲ್ಲಿ ನಡೆಯುವ ಜಾತ್ರೆ ಜಿಲ್ಲೆಯಲ್ಲಿ ಅತ್ಯಂತ ಪ್ರಸಿದ್ಧಿ ಪಡೆದಿದೆ.

ಯಾದಗಿರಿ ತಾಲೂಕಿನ ಅಬ್ಬೇತುಮಕುರ ಗ್ರಾಮದ ಮಹಾ ದಾರ್ಶನಿಕ ಮತ್ತು ಸಿದ್ಧಿ ಪುರುಷರೆಂದು ಕರೆಯಲ್ಪಡುವ ಶ್ರೀ ವಿಶ್ವರಾದ್ಯ ರಥೋತ್ಸವ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಅತಿ ವಿಜೃಂಭಣೆಯಿಂದ ನಡೆಯಿತು. ಸಾವಿರಾರು ಭಕ್ತರು ಭಾಗವಹಿಸಿ ಭವ್ಯ ರಥವನ್ನ ಎಳೆಯುವ ಮೂಲಕ ಭಕ್ತಿ ಪರಾಕಾಷ್ಠೆಯನ್ನು ಮೆರೆದರು. ವಿಶೇಷವಾಗಿ ವಿಶ್ವರಾದ್ಯರ ರಥೋತ್ಸವದಲ್ಲಿ ಶಸ್ತ್ರದಾರೆ ಮತ್ತು ಹುಚ್ಚಯ್ಯನ ತೇರು ಕುಣಿತ ಹೀಗೆ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳ ನಡೆಯುತ್ತವೆ. ಪ್ರತಿ ವರ್ಷ ನಡೆಯುವ ಜಾತ್ರೆಗೆ ಸಹಾಸ್ರಾರು ಸಂಖ್ಯೆಯಲ್ಲಿ ಭಕ್ತರ ದಂಡೆ ಆಗಮಿಸಿ ಪೂಜ್ಯರ ಆಶೀರ್ವಾದ ಪಡೆದು ಧನ್ಯರಾಗುತ್ತಾರೆ. ಈ ಜಾತ್ರೆಗೆ ರಾಜ್ಯ ಸೇರಿದಂತೆ ಆಂಧ್ರ, ತೆಲಂಗಾಣ ಮತ್ತು ಮಹಾರಾಷ್ಟ್ರದಿಂದ ಸಾವಿರಾರು ಭಕ್ತರು ಪಾಲ್ಗೊಳ್ಳುತ್ತಾರೆ. ಒಟ್ಟು 5 ದಿನಗಳ ಕಾಲ ನಡೆಯುವ ಈ ಜಾತ್ರೆಯಲ್ಲಿ ರಥೋತ್ಸವ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಧರ್ಮ ಸಮಾವೇಶ ನಡೆಯುವುದು ವಿಶೇಷ. ಜೊತೆಗೆ ವಿಶ್ವರಾದ್ಯರು ಬೇಡಿದ ಹರಕೆಯನ್ನು ಈಡೇರಿಸುತ್ತಾರೆ ಎನ್ನುವ ನಂಬಿಕೆ ಭಕ್ತರಲ್ಲಿದೆ.

ಸ್ವಾಮಿಗಳು

ದೇವಸ್ಥಾನ

ಉಪವಾಸವಿರುವ ಭಕ್ತರು ಮಠದ ಪೀಠಾಧಿಪತಿ ಗಂಗಾಧರ ಸ್ವಾಮಿಗಳು ರಥದಲ್ಲಿ ಕುಳಿತು ಕೊಳ್ಳುತ್ತಿದ್ದಂತೆ ನೆರೆದ ಭಕ್ತರು ಕೆಕೆ ಹಾಕುತ್ತ ರಥ ಎಳೆದು ಭಕ್ತಿ ಮೆರೆಯುತ್ತಾರೆ. ಭಕ್ತ ಸಮೂಹ ರಥದ ಮೇಲೆ ಉತ್ತತ್ತಿ, ಬಾಳೆಹಣ್ಣು ಎಸೆದು ಸಂತೋಷಪಡುತ್ತಾರೆ. 55 ವರ್ಷಗಳಿಂದ ನಡೆಯುತ್ತ ಬಂದಿರುವ ಜಾತ್ರೆಗೆ ವರ್ಷದಿಂದ ವರ್ಷಕ್ಕೆ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದೆ. ಐದು ದಿನ ನಡೆಯುವ ಜಾತ್ರೆಗೆ ಮಠದ ಮುತ್ತೈದೆ ಭಕ್ತರು ಹಾಗೂ ಪುರುಷರು ರಥೋತ್ಸವ ದಿನದಂದು ಉಪವಾಸ ಇದ್ದು ಭಕ್ತಿಯನ್ನ ಮೇರೆಯುತ್ತಾರಂತೆ. ವಿಶ್ವರಾದ್ಯರಲ್ಲಿ ಭಕ್ತರು ಕೇಳಿದನ್ನೆಲ್ಲಾ ಆಗುತ್ತದೆಯಂತೆ. ಮಕ್ಕಳಿಲ್ಲದವರಿಗೆ ಮಕ್ಕಳಾಗಿವೆ. ವಿದ್ಯಾರ್ಥಿಗಳು ಶಿಕ್ಷಣದ ಬಗ್ಗೆ ಬೇಡಿಕೊಂಡರೆ ಎಲ್ಲವೂ ಈಡೇರಿದೆ ಅಂತಾ ಸಾವಿರಾರು ಭಕ್ತರು ತಮ್ಮ ಹರಕೆಯನ್ನ ಹೊತ್ತು ವಿಶ್ವರಾದ್ಯರ ಮಠಕ್ಕೆ ಬರುತ್ತಾರೆ. ಮಠದ ಮೇಲೆ ಭಕ್ತರಿಗೆ ಅಪಾರವಾದ ನಂಬಿಕೆಯಿರುವ ಕಾರಣ ಸ್ವಚ್ಚ ಮನಸ್ಸಿನಿಂದ ಬೇಡಿಕೊಂಡಿದೆಲ್ಲಾ ವಿಶ್ವರಾದ್ಯ ಈಡೇರಿಸುತ್ತಾರೆ ಎನ್ನುವುದು ಈ ಮಠದ ಅಚಲವಾದ ನಂಬಿಕೆಯಾಗಿದೆ.

ಜಾತ್ರೆಯಲ್ಲಿ ತಮಟೆ ಭಾರಿಸಿದ ಭಕ್ತರು

ರಥೋತ್ಸವಕ್ಕೆ ಹರಿದು ಬಂದ ಭಕ್ತ ಸಾಗರ

ಇದನ್ನೂ ಓದಿ

Vastu tips: ತುಳಸಿ ಗಿಡ ಮನೆಯ ಯಾವ ದಿಕ್ಕಿನಲ್ಲಿ ಇದ್ದರೆ ಶ್ರೇಯಸ್ಸು?

ಅಣ್ಣಾಮಲೈ ನಾಮಪತ್ರಕ್ಕೆ ತಡೆ; ಅಪರಾಧ ಪ್ರಕರಣಗಳ ಸ್ಪಷ್ಟೀಕರಣ ನೀಡಲು ಚುನಾವಣಾ ಆಯೋಗ ಸೂಚನೆ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ