AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿಯಲ್ಲಿ ವಿಶ್ವರಾದ್ಯರ ಮಹಾ ರಥೋತ್ಸವ; ಅನ್ಯ ರಾಜ್ಯಗಳಿಂದ ಹರಿದು ಬಂದ ಭಕ್ತ ಸಾಗರ

ಮಠದ ಪೀಠಾಧಿಪತಿ ಗಂಗಾಧರ ಸ್ವಾಮಿಗಳು ರಥದಲ್ಲಿ ಕುಳಿತು ಕೊಳ್ಳುತ್ತಿದ್ದಂತೆ ನೆರೆದ ಭಕ್ತರು ಕೆಕೆ ಹಾಕುತ್ತ ರಥ ಎಳೆದು ಭಕ್ತಿ ಮೆರೆಯುತ್ತಾರೆ. ಭಕ್ತ ಸಮೂಹ ರಥದ ಮೇಲೆ ಉತ್ತತ್ತಿ, ಬಾಳೆಹಣ್ಣು ಎಸೆದು ಸಂತೋಷಪಡುತ್ತಾರೆ. 55 ವರ್ಷಗಳಿಂದ ನಡೆಯುತ್ತ ಬಂದಿರುವ ಜಾತ್ರೆಗೆ ವರ್ಷದಿಂದ ವರ್ಷಕ್ಕೆ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದೆ.

ಯಾದಗಿರಿಯಲ್ಲಿ ವಿಶ್ವರಾದ್ಯರ ಮಹಾ ರಥೋತ್ಸವ; ಅನ್ಯ ರಾಜ್ಯಗಳಿಂದ ಹರಿದು ಬಂದ ಭಕ್ತ ಸಾಗರ
ವಿಶ್ವರಾದ್ಯರ ಮಹಾ ರಥೋತ್ಸವ
sandhya thejappa
|

Updated on: Mar 20, 2021 | 1:35 PM

Share

ಯಾದಗಿರಿ: ವಿಶ್ವರಾದ್ಯ ಮಠ ಸುಪ್ರಸಿದ್ಧ ಮಠ. ಪ್ರತಿ ವರ್ಷ ನಡೆಯುವ ಜಾತ್ರೆಗೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರ ದಂಡೆ ಹರಿದು ಬರುತ್ತದೆ. ವಿಶ್ವರಾದ್ಯರ ರಥೋತ್ಸವನ್ನ ಕಣ್ತುಂಬಿಕೊಳ್ಳಲು ದೂರದ ಊರುಗಳಿಂದ ಪಾದಯಾತ್ರೆ ಮೂಲಕ ವಿಶ್ವರಾದ್ಯರ ಸನ್ನಿಧಿಗೆ ಆಗಮಿಸುತ್ತಾರೆ. ಸುಗ್ಗಿ ಕಾಲದಲ್ಲಿ ನಡೆಯುವ ಜಾತ್ರೆ ಜಿಲ್ಲೆಯಲ್ಲಿ ಅತ್ಯಂತ ಪ್ರಸಿದ್ಧಿ ಪಡೆದಿದೆ.

ಯಾದಗಿರಿ ತಾಲೂಕಿನ ಅಬ್ಬೇತುಮಕುರ ಗ್ರಾಮದ ಮಹಾ ದಾರ್ಶನಿಕ ಮತ್ತು ಸಿದ್ಧಿ ಪುರುಷರೆಂದು ಕರೆಯಲ್ಪಡುವ ಶ್ರೀ ವಿಶ್ವರಾದ್ಯ ರಥೋತ್ಸವ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಅತಿ ವಿಜೃಂಭಣೆಯಿಂದ ನಡೆಯಿತು. ಸಾವಿರಾರು ಭಕ್ತರು ಭಾಗವಹಿಸಿ ಭವ್ಯ ರಥವನ್ನ ಎಳೆಯುವ ಮೂಲಕ ಭಕ್ತಿ ಪರಾಕಾಷ್ಠೆಯನ್ನು ಮೆರೆದರು. ವಿಶೇಷವಾಗಿ ವಿಶ್ವರಾದ್ಯರ ರಥೋತ್ಸವದಲ್ಲಿ ಶಸ್ತ್ರದಾರೆ ಮತ್ತು ಹುಚ್ಚಯ್ಯನ ತೇರು ಕುಣಿತ ಹೀಗೆ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳ ನಡೆಯುತ್ತವೆ. ಪ್ರತಿ ವರ್ಷ ನಡೆಯುವ ಜಾತ್ರೆಗೆ ಸಹಾಸ್ರಾರು ಸಂಖ್ಯೆಯಲ್ಲಿ ಭಕ್ತರ ದಂಡೆ ಆಗಮಿಸಿ ಪೂಜ್ಯರ ಆಶೀರ್ವಾದ ಪಡೆದು ಧನ್ಯರಾಗುತ್ತಾರೆ. ಈ ಜಾತ್ರೆಗೆ ರಾಜ್ಯ ಸೇರಿದಂತೆ ಆಂಧ್ರ, ತೆಲಂಗಾಣ ಮತ್ತು ಮಹಾರಾಷ್ಟ್ರದಿಂದ ಸಾವಿರಾರು ಭಕ್ತರು ಪಾಲ್ಗೊಳ್ಳುತ್ತಾರೆ. ಒಟ್ಟು 5 ದಿನಗಳ ಕಾಲ ನಡೆಯುವ ಈ ಜಾತ್ರೆಯಲ್ಲಿ ರಥೋತ್ಸವ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಧರ್ಮ ಸಮಾವೇಶ ನಡೆಯುವುದು ವಿಶೇಷ. ಜೊತೆಗೆ ವಿಶ್ವರಾದ್ಯರು ಬೇಡಿದ ಹರಕೆಯನ್ನು ಈಡೇರಿಸುತ್ತಾರೆ ಎನ್ನುವ ನಂಬಿಕೆ ಭಕ್ತರಲ್ಲಿದೆ.

ಸ್ವಾಮಿಗಳು

ದೇವಸ್ಥಾನ

ಉಪವಾಸವಿರುವ ಭಕ್ತರು ಮಠದ ಪೀಠಾಧಿಪತಿ ಗಂಗಾಧರ ಸ್ವಾಮಿಗಳು ರಥದಲ್ಲಿ ಕುಳಿತು ಕೊಳ್ಳುತ್ತಿದ್ದಂತೆ ನೆರೆದ ಭಕ್ತರು ಕೆಕೆ ಹಾಕುತ್ತ ರಥ ಎಳೆದು ಭಕ್ತಿ ಮೆರೆಯುತ್ತಾರೆ. ಭಕ್ತ ಸಮೂಹ ರಥದ ಮೇಲೆ ಉತ್ತತ್ತಿ, ಬಾಳೆಹಣ್ಣು ಎಸೆದು ಸಂತೋಷಪಡುತ್ತಾರೆ. 55 ವರ್ಷಗಳಿಂದ ನಡೆಯುತ್ತ ಬಂದಿರುವ ಜಾತ್ರೆಗೆ ವರ್ಷದಿಂದ ವರ್ಷಕ್ಕೆ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದೆ. ಐದು ದಿನ ನಡೆಯುವ ಜಾತ್ರೆಗೆ ಮಠದ ಮುತ್ತೈದೆ ಭಕ್ತರು ಹಾಗೂ ಪುರುಷರು ರಥೋತ್ಸವ ದಿನದಂದು ಉಪವಾಸ ಇದ್ದು ಭಕ್ತಿಯನ್ನ ಮೇರೆಯುತ್ತಾರಂತೆ. ವಿಶ್ವರಾದ್ಯರಲ್ಲಿ ಭಕ್ತರು ಕೇಳಿದನ್ನೆಲ್ಲಾ ಆಗುತ್ತದೆಯಂತೆ. ಮಕ್ಕಳಿಲ್ಲದವರಿಗೆ ಮಕ್ಕಳಾಗಿವೆ. ವಿದ್ಯಾರ್ಥಿಗಳು ಶಿಕ್ಷಣದ ಬಗ್ಗೆ ಬೇಡಿಕೊಂಡರೆ ಎಲ್ಲವೂ ಈಡೇರಿದೆ ಅಂತಾ ಸಾವಿರಾರು ಭಕ್ತರು ತಮ್ಮ ಹರಕೆಯನ್ನ ಹೊತ್ತು ವಿಶ್ವರಾದ್ಯರ ಮಠಕ್ಕೆ ಬರುತ್ತಾರೆ. ಮಠದ ಮೇಲೆ ಭಕ್ತರಿಗೆ ಅಪಾರವಾದ ನಂಬಿಕೆಯಿರುವ ಕಾರಣ ಸ್ವಚ್ಚ ಮನಸ್ಸಿನಿಂದ ಬೇಡಿಕೊಂಡಿದೆಲ್ಲಾ ವಿಶ್ವರಾದ್ಯ ಈಡೇರಿಸುತ್ತಾರೆ ಎನ್ನುವುದು ಈ ಮಠದ ಅಚಲವಾದ ನಂಬಿಕೆಯಾಗಿದೆ.

ಜಾತ್ರೆಯಲ್ಲಿ ತಮಟೆ ಭಾರಿಸಿದ ಭಕ್ತರು

ರಥೋತ್ಸವಕ್ಕೆ ಹರಿದು ಬಂದ ಭಕ್ತ ಸಾಗರ

ಇದನ್ನೂ ಓದಿ

Vastu tips: ತುಳಸಿ ಗಿಡ ಮನೆಯ ಯಾವ ದಿಕ್ಕಿನಲ್ಲಿ ಇದ್ದರೆ ಶ್ರೇಯಸ್ಸು?

ಅಣ್ಣಾಮಲೈ ನಾಮಪತ್ರಕ್ಕೆ ತಡೆ; ಅಪರಾಧ ಪ್ರಕರಣಗಳ ಸ್ಪಷ್ಟೀಕರಣ ನೀಡಲು ಚುನಾವಣಾ ಆಯೋಗ ಸೂಚನೆ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ