AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವನಹಳ್ಳಿಯ ರೆಸಾರ್ಟ್‌ನಲ್ಲಿ ಶಶಿಕಲಾ ವಾಸ್ತವ್ಯ.. ಸಂಬಂಧಿಕರು, ಬೆಂಬಲಿಗರ ಭೇಟಿ ನಿರಾಕರಿಸಿದ ಚಿನ್ನಮ್ಮ

ನಾಲ್ಕು ವರ್ಷಗಳ ಕಾಲ ನಾಲ್ಕು ಗೋಡೆಯ ಮಧ್ಯೆಯೆ ಕಾಲ ಕಳೆದಿದ್ದ ಚಿನ್ನಮ್ಮ ಆಸ್ವತ್ರೆಯಿಂದ ಬಿಡುಗಡೆಯಾಗಿ ಬಂದು ರೆಸಾರ್ಟ್ ಸೇರಿದ್ರು. ಇನ್ನೂ ರೆಸಾರ್ಟ್ನಲ್ಲಿ ಮೊದಲ ದಿನ ಕಳೆದ ತಮಿಳರ ಚಿನ್ನಮ್ಮ ಎರಡನೇ ದಿನವೂ ಒಂಟಿಯಾಗೆ ಕಾಲ ಕಳೆದಿದ್ದು, ಏನೆಲ್ಲ ಮಾಡಿದ್ರು ಅನ್ನೂ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ ಓದಿ.

ದೇವನಹಳ್ಳಿಯ ರೆಸಾರ್ಟ್‌ನಲ್ಲಿ ಶಶಿಕಲಾ ವಾಸ್ತವ್ಯ.. ಸಂಬಂಧಿಕರು, ಬೆಂಬಲಿಗರ ಭೇಟಿ ನಿರಾಕರಿಸಿದ ಚಿನ್ನಮ್ಮ
ವಿ.ಕೆ. ಶಶಿಕಲಾ
ಆಯೇಷಾ ಬಾನು
| Edited By: |

Updated on:Feb 10, 2021 | 3:05 PM

Share

ದೇವನಹಳ್ಳಿ: ದಿವಂಗತ ಜಯಲಲಿತಾ ಆಪ್ತೆ ಜೈಲಿನಿಂದ ಬಿಡುಗಡೆಯಾಗಿ, ಕೊರೊನಾದಿಂದ ಗುಣಮುಖರಾಗಿ ಇದೀಗ ದೇವನಹಳ್ಳಿ ಬಳಿಯಿರುವ ಖಾಸಗಿ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. 7 ದಿನಗಳ ಕಾಲ ಹೋಂ ಕ್ವಾರಂಟೈನ್ ಇರಬೇಕಾಗಿರುವ ಹಿನ್ನೆಲೆಯಲ್ಲಿ ರೆಸಾರ್ಟ್‌ನಲ್ಲಿರುವ ವಿಲ್ಲಾದಲ್ಲಿ ಶಶಿಕಲಾ ತಂಗಿದ್ದಾರೆ.

ಚಿನ್ನಮ್ಮ ರೆಸಾರ್ಟ್‌ಗೆ ಆಗಮಿಸುತ್ತಿದ್ದಂತೆ ಸಂಬಂಧಿಕರು, ಆಪ್ತರು, ಬೆಂಬಲಿಗರು ಕುಶಲೋಪರಿ ವಿಚಾರಿಸಲು ಮುಂದಾದ್ರು. ಆದ್ರೆ ಯಾರ ಜತೆಯು ಮಾತನಾಡದೆ ನೇರವಾಗಿ ತಮಗಾಗಿ ಮೀಸಲಿಟ್ಟಿದ್ದ ವಿಲ್ಲಾಗೆ ತೆರಳಿದ ಶಶಿಕಲಾ ತಮ್ಮ ಕೊಠಡಿಯಲ್ಲಿ ಒಂಟಿಯಾಗಿ ಕಾಲ ಕಳೆದಿದ್ದಾರೆ.

ಇಂದು ತಮಿಳುನಾಡಿನ ಎಂಪಿಗಳ ಜೊತೆ ಮಾತುಕತೆ ಇಂದು ಒಂದಷ್ಟು ಆಪ್ತರ ಜೊತೆ ರೆಸಾರ್ಟ್‌ನಲ್ಲಿ ಚಿನ್ನಮ್ಮ ಚರ್ಚೆ ನಡೆಸುವ ಸಾಧ್ಯತೆಯಿದ್ದು, ತಮಿಳುನಾಡಿನ ಎಂಪಿ ಮತ್ತು ರಾಜಕೀಯ ನಾಯಕರು ಶಶಿಕಲಾರನ್ನ ಭೇಟಿಯಾಗುವ ಸಾಧ್ಯತೆಯಿದೆ. ಇನ್ನು ಬೃಹತ್ ಱಲಿ ಮೂಲಕ ತಮಿಳುನಾಡಿಗೆ ಎಂಟ್ರಿಕೊಡಲು ಶಶಿಕಲಾ ಒಂದಷ್ಟು ಪ್ಲ್ಯಾನ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಒಟ್ನಲ್ಲಿ ನಾಲ್ಕು ವರ್ಷಗಳ ಬಳಿಕೆ ಜೈಲಿನಿಂದ ಹೊರಬಂದಿರುವ ಚಿನ್ನಮ್ಮ ಸೈಲೆಂಟಾಗಿ ರೆಸಾರ್ಟ್ ನಲ್ಲಿ ಕುಳಿತು ತನ್ನದೇ ಆದ ಲೆಕ್ಕಾಚಾರಗಳನ್ನ ಹಾಕ್ತಿದ್ದಾರೆ. ಚಿನ್ನಮ್ಮರ ಮುಂದಿನ ಹೆಜ್ಜೆ ಬಗ್ಗೆ ತಮಿಳುನಾಡಿನಲ್ಲಿ ಬಹಳ ಕುತೂಹಲ ಕೆರಳಿಸಿದೆ.

ಶಶಿಕಲಾ ನಟರಾಜನ್ ಆಸ್ಪತ್ರೆಯಿಂದ ಡಿಸ್ಚಾರ್ಜ್: ಅಮಾವಾಸ್ಯೆ ನಂತರ ತಮಿಳುನಾಡಿಗೆ ಗ್ರ್ಯಾಂಡ್ ಎಂಟ್ರಿ ನೀಡಲು ಸಿದ್ದತೆ?

Published On - 7:09 am, Tue, 2 February 21

ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ
ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ
ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ