AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವನಹಳ್ಳಿಯ ರೆಸಾರ್ಟ್‌ನಲ್ಲಿ ಶಶಿಕಲಾ ವಾಸ್ತವ್ಯ.. ಸಂಬಂಧಿಕರು, ಬೆಂಬಲಿಗರ ಭೇಟಿ ನಿರಾಕರಿಸಿದ ಚಿನ್ನಮ್ಮ

ನಾಲ್ಕು ವರ್ಷಗಳ ಕಾಲ ನಾಲ್ಕು ಗೋಡೆಯ ಮಧ್ಯೆಯೆ ಕಾಲ ಕಳೆದಿದ್ದ ಚಿನ್ನಮ್ಮ ಆಸ್ವತ್ರೆಯಿಂದ ಬಿಡುಗಡೆಯಾಗಿ ಬಂದು ರೆಸಾರ್ಟ್ ಸೇರಿದ್ರು. ಇನ್ನೂ ರೆಸಾರ್ಟ್ನಲ್ಲಿ ಮೊದಲ ದಿನ ಕಳೆದ ತಮಿಳರ ಚಿನ್ನಮ್ಮ ಎರಡನೇ ದಿನವೂ ಒಂಟಿಯಾಗೆ ಕಾಲ ಕಳೆದಿದ್ದು, ಏನೆಲ್ಲ ಮಾಡಿದ್ರು ಅನ್ನೂ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ ಓದಿ.

ದೇವನಹಳ್ಳಿಯ ರೆಸಾರ್ಟ್‌ನಲ್ಲಿ ಶಶಿಕಲಾ ವಾಸ್ತವ್ಯ.. ಸಂಬಂಧಿಕರು, ಬೆಂಬಲಿಗರ ಭೇಟಿ ನಿರಾಕರಿಸಿದ ಚಿನ್ನಮ್ಮ
ವಿ.ಕೆ. ಶಶಿಕಲಾ
ಆಯೇಷಾ ಬಾನು
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Feb 10, 2021 | 3:05 PM

Share

ದೇವನಹಳ್ಳಿ: ದಿವಂಗತ ಜಯಲಲಿತಾ ಆಪ್ತೆ ಜೈಲಿನಿಂದ ಬಿಡುಗಡೆಯಾಗಿ, ಕೊರೊನಾದಿಂದ ಗುಣಮುಖರಾಗಿ ಇದೀಗ ದೇವನಹಳ್ಳಿ ಬಳಿಯಿರುವ ಖಾಸಗಿ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. 7 ದಿನಗಳ ಕಾಲ ಹೋಂ ಕ್ವಾರಂಟೈನ್ ಇರಬೇಕಾಗಿರುವ ಹಿನ್ನೆಲೆಯಲ್ಲಿ ರೆಸಾರ್ಟ್‌ನಲ್ಲಿರುವ ವಿಲ್ಲಾದಲ್ಲಿ ಶಶಿಕಲಾ ತಂಗಿದ್ದಾರೆ.

ಚಿನ್ನಮ್ಮ ರೆಸಾರ್ಟ್‌ಗೆ ಆಗಮಿಸುತ್ತಿದ್ದಂತೆ ಸಂಬಂಧಿಕರು, ಆಪ್ತರು, ಬೆಂಬಲಿಗರು ಕುಶಲೋಪರಿ ವಿಚಾರಿಸಲು ಮುಂದಾದ್ರು. ಆದ್ರೆ ಯಾರ ಜತೆಯು ಮಾತನಾಡದೆ ನೇರವಾಗಿ ತಮಗಾಗಿ ಮೀಸಲಿಟ್ಟಿದ್ದ ವಿಲ್ಲಾಗೆ ತೆರಳಿದ ಶಶಿಕಲಾ ತಮ್ಮ ಕೊಠಡಿಯಲ್ಲಿ ಒಂಟಿಯಾಗಿ ಕಾಲ ಕಳೆದಿದ್ದಾರೆ.

ಇಂದು ತಮಿಳುನಾಡಿನ ಎಂಪಿಗಳ ಜೊತೆ ಮಾತುಕತೆ ಇಂದು ಒಂದಷ್ಟು ಆಪ್ತರ ಜೊತೆ ರೆಸಾರ್ಟ್‌ನಲ್ಲಿ ಚಿನ್ನಮ್ಮ ಚರ್ಚೆ ನಡೆಸುವ ಸಾಧ್ಯತೆಯಿದ್ದು, ತಮಿಳುನಾಡಿನ ಎಂಪಿ ಮತ್ತು ರಾಜಕೀಯ ನಾಯಕರು ಶಶಿಕಲಾರನ್ನ ಭೇಟಿಯಾಗುವ ಸಾಧ್ಯತೆಯಿದೆ. ಇನ್ನು ಬೃಹತ್ ಱಲಿ ಮೂಲಕ ತಮಿಳುನಾಡಿಗೆ ಎಂಟ್ರಿಕೊಡಲು ಶಶಿಕಲಾ ಒಂದಷ್ಟು ಪ್ಲ್ಯಾನ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಒಟ್ನಲ್ಲಿ ನಾಲ್ಕು ವರ್ಷಗಳ ಬಳಿಕೆ ಜೈಲಿನಿಂದ ಹೊರಬಂದಿರುವ ಚಿನ್ನಮ್ಮ ಸೈಲೆಂಟಾಗಿ ರೆಸಾರ್ಟ್ ನಲ್ಲಿ ಕುಳಿತು ತನ್ನದೇ ಆದ ಲೆಕ್ಕಾಚಾರಗಳನ್ನ ಹಾಕ್ತಿದ್ದಾರೆ. ಚಿನ್ನಮ್ಮರ ಮುಂದಿನ ಹೆಜ್ಜೆ ಬಗ್ಗೆ ತಮಿಳುನಾಡಿನಲ್ಲಿ ಬಹಳ ಕುತೂಹಲ ಕೆರಳಿಸಿದೆ.

ಶಶಿಕಲಾ ನಟರಾಜನ್ ಆಸ್ಪತ್ರೆಯಿಂದ ಡಿಸ್ಚಾರ್ಜ್: ಅಮಾವಾಸ್ಯೆ ನಂತರ ತಮಿಳುನಾಡಿಗೆ ಗ್ರ್ಯಾಂಡ್ ಎಂಟ್ರಿ ನೀಡಲು ಸಿದ್ದತೆ?

Published On - 7:09 am, Tue, 2 February 21

ಪಿಕ್​ಅಪ್ ವ್ಯಾನ್ ಮೇಲೆ ಬಿದ್ದ ನಿರ್ಮಾಣ ಹಂತದ ಮೇಲ್ಸೇತುವೆಯ ಗ್ರಿಡರ್
ಪಿಕ್​ಅಪ್ ವ್ಯಾನ್ ಮೇಲೆ ಬಿದ್ದ ನಿರ್ಮಾಣ ಹಂತದ ಮೇಲ್ಸೇತುವೆಯ ಗ್ರಿಡರ್
ಜಾಲಹಳ್ಳಿಯಲ್ಲಿ ಫ್ಲೈಓವರ್ ಪಿಲ್ಲರ್ ಎಡೆಯಲ್ಲಿ ಆರಾಮವಾಗಿ ಮಲಗಿದ ವ್ಯಕ್ತಿ!
ಜಾಲಹಳ್ಳಿಯಲ್ಲಿ ಫ್ಲೈಓವರ್ ಪಿಲ್ಲರ್ ಎಡೆಯಲ್ಲಿ ಆರಾಮವಾಗಿ ಮಲಗಿದ ವ್ಯಕ್ತಿ!
ಬೆತ್ ಮೂನಿಯ ಭರ್ಜರಿ ಸೆಂಚುರಿಯೊಂದಿಗೆ ಗೆದ್ದು ಬೀಗಿದ ಸ್ಕಾಚರ್ಸ್
ಬೆತ್ ಮೂನಿಯ ಭರ್ಜರಿ ಸೆಂಚುರಿಯೊಂದಿಗೆ ಗೆದ್ದು ಬೀಗಿದ ಸ್ಕಾಚರ್ಸ್
ಗಿಲ್ಲಿ-ಕಾವ್ಯಾ ನಡುವೆ ಇನ್ನೂ ಮುಗಿದಿಲ್ಲ ಹುಸಿಮುನಿಸು
ಗಿಲ್ಲಿ-ಕಾವ್ಯಾ ನಡುವೆ ಇನ್ನೂ ಮುಗಿದಿಲ್ಲ ಹುಸಿಮುನಿಸು
ದಾಂಪತ್ಯದಲ್ಲಿ ಈ ಐದು ವಿಷಯಗಳನ್ನು ಗಂಡನಿಗೆ ಹೆಂಡತಿ ಹೇಳಲೇಬಾರದು!
ದಾಂಪತ್ಯದಲ್ಲಿ ಈ ಐದು ವಿಷಯಗಳನ್ನು ಗಂಡನಿಗೆ ಹೆಂಡತಿ ಹೇಳಲೇಬಾರದು!
ಗುರುಗಳ ಲಹರಿ ಇರುವ ಈ ದಿನ ಹೇಗಿರಲಿದೆ ನಿಮ್ಮ ಭವಿಷ್ಯ? ಇಲ್ಲಿದೆ ವಿವರಣೆ
ಗುರುಗಳ ಲಹರಿ ಇರುವ ಈ ದಿನ ಹೇಗಿರಲಿದೆ ನಿಮ್ಮ ಭವಿಷ್ಯ? ಇಲ್ಲಿದೆ ವಿವರಣೆ
ದೇವಸ್ಥಾನದೊಳಗೆ ದೇವರೆದುರು ಕುಳಿತಿದ್ದಾಗಲೇ ಪ್ರಾಣ ಬಿಟ್ಟ ಭಕ್ತ!
ದೇವಸ್ಥಾನದೊಳಗೆ ದೇವರೆದುರು ಕುಳಿತಿದ್ದಾಗಲೇ ಪ್ರಾಣ ಬಿಟ್ಟ ಭಕ್ತ!
ದೆಹಲಿ ಸ್ಫೋಟದ ಶೀಘ್ರ ತನಿಖೆಗೆ ನಿರ್ಧಾರ; ಸಚಿವ ಅಶ್ವಿನಿ ವೈಷ್ಣವ್
ದೆಹಲಿ ಸ್ಫೋಟದ ಶೀಘ್ರ ತನಿಖೆಗೆ ನಿರ್ಧಾರ; ಸಚಿವ ಅಶ್ವಿನಿ ವೈಷ್ಣವ್
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಗಿರಕಿ ಹೊಡೆದ ಆಟೋ: ಎದೆ ಝಲ್​ ಎನ್ನುವ ದೃಶ್ಯ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಗಿರಕಿ ಹೊಡೆದ ಆಟೋ: ಎದೆ ಝಲ್​ ಎನ್ನುವ ದೃಶ್ಯ
ಬೋಟ್ಸ್ವಾನದೊಂದಿಗಿನ ಸಂಬಂಧ ಗಟ್ಟಿಗೊಳಿಸಲು ಬದ್ಧ; ರಾಷ್ಟ್ರಪತಿ ಮುರ್ಮು
ಬೋಟ್ಸ್ವಾನದೊಂದಿಗಿನ ಸಂಬಂಧ ಗಟ್ಟಿಗೊಳಿಸಲು ಬದ್ಧ; ರಾಷ್ಟ್ರಪತಿ ಮುರ್ಮು