Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಕ್ಕಲಿಗ ನಿಗಮಕ್ಕೆ 1,000 ಕೋಟಿ ರೂ. ಅನುದಾನ ಮೀಸಲಿಡಬೇಕು -ಸರ್ಕಾರದ ಮುಂದೆ 4 ಬೇಡಿಕೆಗಳನ್ನಿಟ್ಟ ಸಮುದಾಯ

ಒಕ್ಕಲಿಗರಿಗೆ ಮೀಸಲಾತಿ ಮತ್ತು ಪ್ರಾಧಿಕಾರ ರಚನೆ ಸಂಬಂಧ ಇಂದು ವಿಜಯನಗರದ ಆದಿಚುಂಚನಗಿರಿ ಶಾಖಾ ಮಠದಲ್ಲಿ‌ ಸಭೆ ನಡೆಸಲಾಯಿತು.ಡಿಸಿಎಂ ಅಶ್ವತ್ಥ್​ ನಾರಾಯಣ್​ಗೆ ನಿರ್ಮಲಾನಂದನಾಥಶ್ರೀಗಳು ಮನವಿ ಸಲ್ಲಿಸಿದರು. ಒಕ್ಕಲಿಗ ಸಮುದಾಯ ನೀಡಿದ್ದ ಮನವಿಯನ್ನು ಶ್ರೀಗಳು ಸಲ್ಲಿಸಿದರು.

ಒಕ್ಕಲಿಗ ನಿಗಮಕ್ಕೆ 1,000 ಕೋಟಿ ರೂ. ಅನುದಾನ ಮೀಸಲಿಡಬೇಕು -ಸರ್ಕಾರದ ಮುಂದೆ 4 ಬೇಡಿಕೆಗಳನ್ನಿಟ್ಟ ಸಮುದಾಯ
ಡಿಸಿಎಂ ಅಶ್ವತ್ಥ್​ ನಾರಾಯಣ್​ಗೆ ಮನವಿ ಸಲ್ಲಿಸಿದ ನಿರ್ಮಲಾನಂದನಾಥಶ್ರೀಗಳು
Follow us
KUSHAL V
|

Updated on: Feb 22, 2021 | 10:14 PM

ಬೆಂಗಳೂರು: ಒಕ್ಕಲಿಗರಿಗೆ ಮೀಸಲಾತಿ ಮತ್ತು ಪ್ರಾಧಿಕಾರ ರಚನೆ ಸಂಬಂಧ ಇಂದು ವಿಜಯನಗರದ ಆದಿಚುಂಚನಗಿರಿ ಶಾಖಾ ಮಠದಲ್ಲಿ‌ ಸಭೆ ನಡೆಸಲಾಯಿತು. ಸಭೆಯಲ್ಲಿ ಡಿಸಿಎಂ ಅಶ್ವತ್ಥ್​ ನಾರಾಯಣ, ಸಚಿವ ಅಶೋಕ್ ಬಿಡಿಎ ಅಧ್ಯಕ್ಷ ವಿಶ್ವನಾಥ್, ಸಚಿವ ಕೆ.ಸಿ.ನಾರಾಯಣಗೌಡ, ಶಾಸಕ ಸತೀಶ್ ರೆಡ್ಡಿ, MLC ಪುಟ್ಟಣ್ಣ, ನಂಜಾವದೂತಶ್ರೀ ಸೇರಿದಂತೆ ಸಮುದಾಯದ ಹಲವು ಮುಖಂಡರು ಭಾಗಿಯಾಗಿದ್ದರು. ಈ ವೇಳೆ, ಡಿಸಿಎಂ ಅಶ್ವತ್ಥ್​ ನಾರಾಯಣ್​ಗೆ ನಿರ್ಮಲಾನಂದನಾಥಶ್ರೀಗಳು ಮನವಿ ಸಲ್ಲಿಸಿದರು. ಒಕ್ಕಲಿಗ ಸಮುದಾಯ ನೀಡಿದ್ದ ಮನವಿಯನ್ನು ಶ್ರೀಗಳು ಸಲ್ಲಿಸಿದರು.

ಸಭೆ ಬಳಿಕ ಕಂದಾಯ ಸಚಿವ ಆರ್.ಅಶೋಕ್ ಮಾತನಾಡಿ ಸಮುದಾಯದವರು ಪ್ರಮುಖವಾಗಿ 4 ಬೇಡಿಕೆಗಳನ್ನ ಮುಂದಿಟ್ಟಿದ್ದಾರೆ. ಅವುಗಳು ಯಾವುದೆಂದರೆ ಒಕ್ಕಲಿಗ ನಿಗಮ ಆಗಬೇಕು, ಇದಕ್ಕೆ 1 ಸಾವಿರ ಕೋಟಿ ರೂಪಾಯಿ ಅನುದಾನ ಮೀಸಲಿಡಬೇಕು. ಸದ್ಯ, ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ 3Aಗೆ ಶೇ.4ರಷ್ಟಿದೆ. ಅದರಲ್ಲಿ ಬೇರೆ ಜಾತಿಯವರನ್ನ ಸೇರಿಸಲಾಗಿದೆ. ಹಾಗಾಗಿ, ಸಮುದಾಯಕ್ಕೆ ಮೀಸಲಾತಿ ಪರ್ಸೆಂಟೇಜ್​ ಹೆಚ್ಚಿಸಬೇಕು ಎಂದು ಅಶೋಕ್​ ಹೇಳಿದರು.

ಇದಲ್ಲದೆ, ಯಾವುದೇ ಕಾರಣಕ್ಕೂ ಜಾತಿ ಗಣತಿಯನ್ನ ಒಪ್ಪಬಾರದು. ಕಾಂತರಾಜು ಜಾತಿ ಗಣತಿ ಒಪ್ಪಬಾರದು ಎಂದು ಮನವಿ ಮಾಡಲಾಗಿದೆ. ಜೊತೆಗೆ, ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪನೆ ಬಗ್ಗೆ ಗಮನಹರಿಸಬೇಕು ಎಂದು ಅಶೋಕ್​ ಹೇಳಿದರು.

ನಿಗಮ ಸ್ಥಾಪನೆ ಬಗ್ಗೆ ಕೂಡಲೇ ಗಮನಹರಿಸಲು ಸಮುದಾಯದವರು ಮತ್ತು ಶ್ರೀಗಳು ತಿಳಿಸಿದ್ದಾರೆ. ಸಿಎಂ ಯಡಿಯೂರಪ್ಪರ ಗಮನಕ್ಕೆ ತರುವಂತೆ ತಿಳಿಸಿದ್ದಾರೆ. ನಿಗಮ ಸ್ಥಾಪನೆ ಬಗ್ಗೆ ನಾಳೆ ಸಿಎಂ ಬಿಎಸ್​​ವೈ ಬಳಿ ಪ್ರಸ್ತಾಪ ಮಾಡುತ್ತೇವೆ ಎಂದು ಸಭೆ ಬಳಿಕ ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.

BNG VOKKALIGA REQUEST LETTER 1

ಒಕ್ಕಲಿಗರಿಗೆ ಮೀಸಲಾತಿ ಮತ್ತು ಪ್ರಾಧಿಕಾರ ರಚನೆ ಸಂಬಂಧ ನಡೆದ ಸಭೆ

ಇದನ್ನೂ ಓದಿ:‘ಲಿಂಗಾಯತ, ಕುರುಬ, ವಾಲ್ಮೀಕಿ ಸಮುದಾಯಗಳು ಮೀಸಲಾತಿಗಾಗಿ ಬೊಬ್ಬೆ ಹಾಕ್ತಿದೆ.. ನಿಮ್ಗೂ ಕೊಡೋಣಪ್ಪ ಅನ್ನೋಕೆ ಅದೇನು ಕಡ್ಲೇಕಾಯಿನಾ?’

‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ