AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಕ್ಕಲಿಗ ನಿಗಮಕ್ಕೆ 1,000 ಕೋಟಿ ರೂ. ಅನುದಾನ ಮೀಸಲಿಡಬೇಕು -ಸರ್ಕಾರದ ಮುಂದೆ 4 ಬೇಡಿಕೆಗಳನ್ನಿಟ್ಟ ಸಮುದಾಯ

ಒಕ್ಕಲಿಗರಿಗೆ ಮೀಸಲಾತಿ ಮತ್ತು ಪ್ರಾಧಿಕಾರ ರಚನೆ ಸಂಬಂಧ ಇಂದು ವಿಜಯನಗರದ ಆದಿಚುಂಚನಗಿರಿ ಶಾಖಾ ಮಠದಲ್ಲಿ‌ ಸಭೆ ನಡೆಸಲಾಯಿತು.ಡಿಸಿಎಂ ಅಶ್ವತ್ಥ್​ ನಾರಾಯಣ್​ಗೆ ನಿರ್ಮಲಾನಂದನಾಥಶ್ರೀಗಳು ಮನವಿ ಸಲ್ಲಿಸಿದರು. ಒಕ್ಕಲಿಗ ಸಮುದಾಯ ನೀಡಿದ್ದ ಮನವಿಯನ್ನು ಶ್ರೀಗಳು ಸಲ್ಲಿಸಿದರು.

ಒಕ್ಕಲಿಗ ನಿಗಮಕ್ಕೆ 1,000 ಕೋಟಿ ರೂ. ಅನುದಾನ ಮೀಸಲಿಡಬೇಕು -ಸರ್ಕಾರದ ಮುಂದೆ 4 ಬೇಡಿಕೆಗಳನ್ನಿಟ್ಟ ಸಮುದಾಯ
ಡಿಸಿಎಂ ಅಶ್ವತ್ಥ್​ ನಾರಾಯಣ್​ಗೆ ಮನವಿ ಸಲ್ಲಿಸಿದ ನಿರ್ಮಲಾನಂದನಾಥಶ್ರೀಗಳು
KUSHAL V
|

Updated on: Feb 22, 2021 | 10:14 PM

Share

ಬೆಂಗಳೂರು: ಒಕ್ಕಲಿಗರಿಗೆ ಮೀಸಲಾತಿ ಮತ್ತು ಪ್ರಾಧಿಕಾರ ರಚನೆ ಸಂಬಂಧ ಇಂದು ವಿಜಯನಗರದ ಆದಿಚುಂಚನಗಿರಿ ಶಾಖಾ ಮಠದಲ್ಲಿ‌ ಸಭೆ ನಡೆಸಲಾಯಿತು. ಸಭೆಯಲ್ಲಿ ಡಿಸಿಎಂ ಅಶ್ವತ್ಥ್​ ನಾರಾಯಣ, ಸಚಿವ ಅಶೋಕ್ ಬಿಡಿಎ ಅಧ್ಯಕ್ಷ ವಿಶ್ವನಾಥ್, ಸಚಿವ ಕೆ.ಸಿ.ನಾರಾಯಣಗೌಡ, ಶಾಸಕ ಸತೀಶ್ ರೆಡ್ಡಿ, MLC ಪುಟ್ಟಣ್ಣ, ನಂಜಾವದೂತಶ್ರೀ ಸೇರಿದಂತೆ ಸಮುದಾಯದ ಹಲವು ಮುಖಂಡರು ಭಾಗಿಯಾಗಿದ್ದರು. ಈ ವೇಳೆ, ಡಿಸಿಎಂ ಅಶ್ವತ್ಥ್​ ನಾರಾಯಣ್​ಗೆ ನಿರ್ಮಲಾನಂದನಾಥಶ್ರೀಗಳು ಮನವಿ ಸಲ್ಲಿಸಿದರು. ಒಕ್ಕಲಿಗ ಸಮುದಾಯ ನೀಡಿದ್ದ ಮನವಿಯನ್ನು ಶ್ರೀಗಳು ಸಲ್ಲಿಸಿದರು.

ಸಭೆ ಬಳಿಕ ಕಂದಾಯ ಸಚಿವ ಆರ್.ಅಶೋಕ್ ಮಾತನಾಡಿ ಸಮುದಾಯದವರು ಪ್ರಮುಖವಾಗಿ 4 ಬೇಡಿಕೆಗಳನ್ನ ಮುಂದಿಟ್ಟಿದ್ದಾರೆ. ಅವುಗಳು ಯಾವುದೆಂದರೆ ಒಕ್ಕಲಿಗ ನಿಗಮ ಆಗಬೇಕು, ಇದಕ್ಕೆ 1 ಸಾವಿರ ಕೋಟಿ ರೂಪಾಯಿ ಅನುದಾನ ಮೀಸಲಿಡಬೇಕು. ಸದ್ಯ, ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ 3Aಗೆ ಶೇ.4ರಷ್ಟಿದೆ. ಅದರಲ್ಲಿ ಬೇರೆ ಜಾತಿಯವರನ್ನ ಸೇರಿಸಲಾಗಿದೆ. ಹಾಗಾಗಿ, ಸಮುದಾಯಕ್ಕೆ ಮೀಸಲಾತಿ ಪರ್ಸೆಂಟೇಜ್​ ಹೆಚ್ಚಿಸಬೇಕು ಎಂದು ಅಶೋಕ್​ ಹೇಳಿದರು.

ಇದಲ್ಲದೆ, ಯಾವುದೇ ಕಾರಣಕ್ಕೂ ಜಾತಿ ಗಣತಿಯನ್ನ ಒಪ್ಪಬಾರದು. ಕಾಂತರಾಜು ಜಾತಿ ಗಣತಿ ಒಪ್ಪಬಾರದು ಎಂದು ಮನವಿ ಮಾಡಲಾಗಿದೆ. ಜೊತೆಗೆ, ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪನೆ ಬಗ್ಗೆ ಗಮನಹರಿಸಬೇಕು ಎಂದು ಅಶೋಕ್​ ಹೇಳಿದರು.

ನಿಗಮ ಸ್ಥಾಪನೆ ಬಗ್ಗೆ ಕೂಡಲೇ ಗಮನಹರಿಸಲು ಸಮುದಾಯದವರು ಮತ್ತು ಶ್ರೀಗಳು ತಿಳಿಸಿದ್ದಾರೆ. ಸಿಎಂ ಯಡಿಯೂರಪ್ಪರ ಗಮನಕ್ಕೆ ತರುವಂತೆ ತಿಳಿಸಿದ್ದಾರೆ. ನಿಗಮ ಸ್ಥಾಪನೆ ಬಗ್ಗೆ ನಾಳೆ ಸಿಎಂ ಬಿಎಸ್​​ವೈ ಬಳಿ ಪ್ರಸ್ತಾಪ ಮಾಡುತ್ತೇವೆ ಎಂದು ಸಭೆ ಬಳಿಕ ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.

BNG VOKKALIGA REQUEST LETTER 1

ಒಕ್ಕಲಿಗರಿಗೆ ಮೀಸಲಾತಿ ಮತ್ತು ಪ್ರಾಧಿಕಾರ ರಚನೆ ಸಂಬಂಧ ನಡೆದ ಸಭೆ

ಇದನ್ನೂ ಓದಿ:‘ಲಿಂಗಾಯತ, ಕುರುಬ, ವಾಲ್ಮೀಕಿ ಸಮುದಾಯಗಳು ಮೀಸಲಾತಿಗಾಗಿ ಬೊಬ್ಬೆ ಹಾಕ್ತಿದೆ.. ನಿಮ್ಗೂ ಕೊಡೋಣಪ್ಪ ಅನ್ನೋಕೆ ಅದೇನು ಕಡ್ಲೇಕಾಯಿನಾ?’

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ