AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಕ್ಕಲಿಗ ನಿಗಮಕ್ಕೆ 1,000 ಕೋಟಿ ರೂ. ಅನುದಾನ ಮೀಸಲಿಡಬೇಕು -ಸರ್ಕಾರದ ಮುಂದೆ 4 ಬೇಡಿಕೆಗಳನ್ನಿಟ್ಟ ಸಮುದಾಯ

ಒಕ್ಕಲಿಗರಿಗೆ ಮೀಸಲಾತಿ ಮತ್ತು ಪ್ರಾಧಿಕಾರ ರಚನೆ ಸಂಬಂಧ ಇಂದು ವಿಜಯನಗರದ ಆದಿಚುಂಚನಗಿರಿ ಶಾಖಾ ಮಠದಲ್ಲಿ‌ ಸಭೆ ನಡೆಸಲಾಯಿತು.ಡಿಸಿಎಂ ಅಶ್ವತ್ಥ್​ ನಾರಾಯಣ್​ಗೆ ನಿರ್ಮಲಾನಂದನಾಥಶ್ರೀಗಳು ಮನವಿ ಸಲ್ಲಿಸಿದರು. ಒಕ್ಕಲಿಗ ಸಮುದಾಯ ನೀಡಿದ್ದ ಮನವಿಯನ್ನು ಶ್ರೀಗಳು ಸಲ್ಲಿಸಿದರು.

ಒಕ್ಕಲಿಗ ನಿಗಮಕ್ಕೆ 1,000 ಕೋಟಿ ರೂ. ಅನುದಾನ ಮೀಸಲಿಡಬೇಕು -ಸರ್ಕಾರದ ಮುಂದೆ 4 ಬೇಡಿಕೆಗಳನ್ನಿಟ್ಟ ಸಮುದಾಯ
ಡಿಸಿಎಂ ಅಶ್ವತ್ಥ್​ ನಾರಾಯಣ್​ಗೆ ಮನವಿ ಸಲ್ಲಿಸಿದ ನಿರ್ಮಲಾನಂದನಾಥಶ್ರೀಗಳು
KUSHAL V
|

Updated on: Feb 22, 2021 | 10:14 PM

Share

ಬೆಂಗಳೂರು: ಒಕ್ಕಲಿಗರಿಗೆ ಮೀಸಲಾತಿ ಮತ್ತು ಪ್ರಾಧಿಕಾರ ರಚನೆ ಸಂಬಂಧ ಇಂದು ವಿಜಯನಗರದ ಆದಿಚುಂಚನಗಿರಿ ಶಾಖಾ ಮಠದಲ್ಲಿ‌ ಸಭೆ ನಡೆಸಲಾಯಿತು. ಸಭೆಯಲ್ಲಿ ಡಿಸಿಎಂ ಅಶ್ವತ್ಥ್​ ನಾರಾಯಣ, ಸಚಿವ ಅಶೋಕ್ ಬಿಡಿಎ ಅಧ್ಯಕ್ಷ ವಿಶ್ವನಾಥ್, ಸಚಿವ ಕೆ.ಸಿ.ನಾರಾಯಣಗೌಡ, ಶಾಸಕ ಸತೀಶ್ ರೆಡ್ಡಿ, MLC ಪುಟ್ಟಣ್ಣ, ನಂಜಾವದೂತಶ್ರೀ ಸೇರಿದಂತೆ ಸಮುದಾಯದ ಹಲವು ಮುಖಂಡರು ಭಾಗಿಯಾಗಿದ್ದರು. ಈ ವೇಳೆ, ಡಿಸಿಎಂ ಅಶ್ವತ್ಥ್​ ನಾರಾಯಣ್​ಗೆ ನಿರ್ಮಲಾನಂದನಾಥಶ್ರೀಗಳು ಮನವಿ ಸಲ್ಲಿಸಿದರು. ಒಕ್ಕಲಿಗ ಸಮುದಾಯ ನೀಡಿದ್ದ ಮನವಿಯನ್ನು ಶ್ರೀಗಳು ಸಲ್ಲಿಸಿದರು.

ಸಭೆ ಬಳಿಕ ಕಂದಾಯ ಸಚಿವ ಆರ್.ಅಶೋಕ್ ಮಾತನಾಡಿ ಸಮುದಾಯದವರು ಪ್ರಮುಖವಾಗಿ 4 ಬೇಡಿಕೆಗಳನ್ನ ಮುಂದಿಟ್ಟಿದ್ದಾರೆ. ಅವುಗಳು ಯಾವುದೆಂದರೆ ಒಕ್ಕಲಿಗ ನಿಗಮ ಆಗಬೇಕು, ಇದಕ್ಕೆ 1 ಸಾವಿರ ಕೋಟಿ ರೂಪಾಯಿ ಅನುದಾನ ಮೀಸಲಿಡಬೇಕು. ಸದ್ಯ, ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ 3Aಗೆ ಶೇ.4ರಷ್ಟಿದೆ. ಅದರಲ್ಲಿ ಬೇರೆ ಜಾತಿಯವರನ್ನ ಸೇರಿಸಲಾಗಿದೆ. ಹಾಗಾಗಿ, ಸಮುದಾಯಕ್ಕೆ ಮೀಸಲಾತಿ ಪರ್ಸೆಂಟೇಜ್​ ಹೆಚ್ಚಿಸಬೇಕು ಎಂದು ಅಶೋಕ್​ ಹೇಳಿದರು.

ಇದಲ್ಲದೆ, ಯಾವುದೇ ಕಾರಣಕ್ಕೂ ಜಾತಿ ಗಣತಿಯನ್ನ ಒಪ್ಪಬಾರದು. ಕಾಂತರಾಜು ಜಾತಿ ಗಣತಿ ಒಪ್ಪಬಾರದು ಎಂದು ಮನವಿ ಮಾಡಲಾಗಿದೆ. ಜೊತೆಗೆ, ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪನೆ ಬಗ್ಗೆ ಗಮನಹರಿಸಬೇಕು ಎಂದು ಅಶೋಕ್​ ಹೇಳಿದರು.

ನಿಗಮ ಸ್ಥಾಪನೆ ಬಗ್ಗೆ ಕೂಡಲೇ ಗಮನಹರಿಸಲು ಸಮುದಾಯದವರು ಮತ್ತು ಶ್ರೀಗಳು ತಿಳಿಸಿದ್ದಾರೆ. ಸಿಎಂ ಯಡಿಯೂರಪ್ಪರ ಗಮನಕ್ಕೆ ತರುವಂತೆ ತಿಳಿಸಿದ್ದಾರೆ. ನಿಗಮ ಸ್ಥಾಪನೆ ಬಗ್ಗೆ ನಾಳೆ ಸಿಎಂ ಬಿಎಸ್​​ವೈ ಬಳಿ ಪ್ರಸ್ತಾಪ ಮಾಡುತ್ತೇವೆ ಎಂದು ಸಭೆ ಬಳಿಕ ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.

BNG VOKKALIGA REQUEST LETTER 1

ಒಕ್ಕಲಿಗರಿಗೆ ಮೀಸಲಾತಿ ಮತ್ತು ಪ್ರಾಧಿಕಾರ ರಚನೆ ಸಂಬಂಧ ನಡೆದ ಸಭೆ

ಇದನ್ನೂ ಓದಿ:‘ಲಿಂಗಾಯತ, ಕುರುಬ, ವಾಲ್ಮೀಕಿ ಸಮುದಾಯಗಳು ಮೀಸಲಾತಿಗಾಗಿ ಬೊಬ್ಬೆ ಹಾಕ್ತಿದೆ.. ನಿಮ್ಗೂ ಕೊಡೋಣಪ್ಪ ಅನ್ನೋಕೆ ಅದೇನು ಕಡ್ಲೇಕಾಯಿನಾ?’

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್