AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ನಾಯಕತ್ವ ಬದಲಾವಣೆ ಫೈಟ್ ಬಳಿಕ‌ ಬಿಜೆಪಿಯಲ್ಲಿ ಒಕ್ಕಲಿಗ ನಾಯಕತ್ವದ ಫೈಟ್?

ಭಾನುವಾರ ವಿಧಾನಸೌಧದಲ್ಲಿ ಕೆಂಪೇಗೌಡ ಜಯಂತಿ ನಡೆಯಿತು. ಈ ವೇಳೆ ಕಾರ್ಯಕ್ರಮಕ್ಕೆ ನಾಲ್ವರು ಒಕ್ಕಲಿಗ ಸಚಿವರು ಗೈರಾಗಿದ್ದರು. ಸಿಎಂ ಯಡಿಯೂರಪ್ಪ ಮತ್ತು ಒಕ್ಕಲಿಗ ಸಮುದಾಯದ ಸ್ವಾಮೀಜಿಗಳು ಪಾಲ್ಗೊಂಡಿದ್ದ ಅಧಿಕೃತ ಸರ್ಕಾರಿ ಕಾರ್ಯಕ್ರಮದಿಂದ ಬಿಜೆಪಿ ಒಕ್ಕಲಿಗ ಶಾಸಕರು, ಸಚಿವರು ಅಂತರ ಕಾಯ್ದುಕೊಂಡಿದ್ದಾರೆ.

ಸಿಎಂ ನಾಯಕತ್ವ ಬದಲಾವಣೆ ಫೈಟ್ ಬಳಿಕ‌ ಬಿಜೆಪಿಯಲ್ಲಿ ಒಕ್ಕಲಿಗ ನಾಯಕತ್ವದ ಫೈಟ್?
ಸಂಗ್ರಹ ಚಿತ್ರ
TV9 Web
| Edited By: |

Updated on: Jun 29, 2021 | 8:34 AM

Share

ಬೆಂಗಳೂರು: ಬಿಜೆಪಿಯಲ್ಲಿ ಸಿಎಂ ನಾಯಕತ್ವ ಬದಲಾವಣೆ ಫೈಟ್ ಬಳಿಕ‌ ಈಗ ಒಕ್ಕಲಿಗ ನಾಯಕತ್ವದ ಫೈಟ್ ಶುರುವಾಗಿದೆ. ಕೆಂಪೇಗೌಡ ಜಯಂತಿ ಕಮಲ ಪಕ್ಷದಲ್ಲಿನ ಒಕ್ಕಲಿಗ ಫೈಟ್ ಬಿಚ್ಚಿಟ್ಟಿದೆ.

ಭಾನುವಾರ ವಿಧಾನಸೌಧದಲ್ಲಿ ಕೆಂಪೇಗೌಡ ಜಯಂತಿ ನಡೆಯಿತು. ಈ ವೇಳೆ ಕಾರ್ಯಕ್ರಮಕ್ಕೆ ನಾಲ್ವರು ಒಕ್ಕಲಿಗ ಸಚಿವರು ಗೈರಾಗಿದ್ದರು. ಸಿಎಂ ಯಡಿಯೂರಪ್ಪ ಮತ್ತು ಒಕ್ಕಲಿಗ ಸಮುದಾಯದ ಸ್ವಾಮೀಜಿಗಳು ಪಾಲ್ಗೊಂಡಿದ್ದ ಅಧಿಕೃತ ಸರ್ಕಾರಿ ಕಾರ್ಯಕ್ರಮದಿಂದ ಬಿಜೆಪಿ ಒಕ್ಕಲಿಗ ಶಾಸಕರು, ಸಚಿವರು ಅಂತರ ಕಾಯ್ದುಕೊಂಡಿದ್ದಾರೆ. ಈ ಒಕ್ಕಲಿಗ ಸಚಿವರ ಅನುಪಸ್ಥಿತಿ ಆಡಳಿತ ಪಕ್ಷದಲ್ಲಿ ಚರ್ಚೆಗೆ ಕಾರಣವಾಗಿದೆ.

ಸಚಿವರಾದ ಆರ್. ಅಶೋಕ್, ಸಿ.ಪಿ. ಯೋಗೇಶ್ವರ್, ಎಸ್.ಟಿ. ಸೋಮಶೇಖರ್ ಮತ್ತು‌ ಡಾ. ಸುಧಾಕರ್ ಕೆಂಪೇಗೌಡ ಜಯಂತಿ ಕಾರ್ಯಕ್ರಮದಿಂದ ದೂರ ಉಳಿದಿದ್ದರು. ಬೆಂಗಳೂರಿನಲ್ಲೇ ಇದ್ದರೂ ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಿಂದ ದೂರ ಇದ್ದದ್ದು ಚರ್ಚೆಗೆ ಕಾರಣವಾಗಿದೆ. ಕೆ.ಆರ್. ಪುರಂನಲ್ಲಿ ನಡೆದ ಪ್ರತ್ಯೇಕ ಕೆಂಪೇಗೌಡ ಜಯಂತಿಯಲ್ಲಿ ಸಚಿವರಾದ ಅಶೋಕ್ ಮತ್ತು ಎಸ್.ಟಿ. ಸೋಮಶೇಖರ್ ಪಾಲ್ಗೊಂಡಿದ್ದರು. ಹಾಗೂ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಕೂಡಾ ಕೆ.ಆರ್. ಪುರಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಆದರೆ ವಿಧಾನಸೌಧದಲ್ಲಿ ನಡೆದ ಕೆಂಪೇಗೌಡ ಜಯಂತಿಯಲ್ಲಿ ಭಾಗಿಯಾಗಿಲ್ಲ.

ಇನ್ನು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರಾಗಿರುವ ಡಿಸಿಎಂ ಡಾ. ಅಶ್ವಥ್ ನಾರಾಯಣ ವಿಧಾನಸೌಧದಲ್ಲಿ ನಡೆದ ಕೆಂಪೇಗೌಡ ಜಯಂತಿ ನೇತೃತ್ವ ವಹಿಸಿಕೊಂಡಿದ್ದರು. ಒಕ್ಕಲಿಗ ನಾಯಕತ್ವದ ಮುಸುಕಿನ ಗುದ್ದಾಟದಿಂದಾಗಿ ಒಕ್ಕಲಿಗ ಸಚಿವರು ಗೈರು ಎಂದು ಬಿಜೆಪಿಯಲ್ಲಿ ಚರ್ಚೆ ನಡೆಯುತ್ತಿದೆ. ಡಿಸಿಎಂ ಅಶ್ವಥ್ ನಾರಾಯಣ ಮತ್ತು ಸಚಿವ ಅಶೋಕ್ ನಡುವಿನ ಒಕ್ಕಲಿಗ ನಾಯಕತ್ವದ ಫೈಟ್ ಕೆಂಪೇಗೌಡ ಜಯಂತಿ ಮೂಲಕ ಬಹಿರಂಗವಾಗಿದೆ.

ಇದನ್ನೂ ಓದಿ: ಒಂದೂವರೆ ವರ್ಷದಲ್ಲಿ 150ಕ್ಕೂ ಹೆಚ್ಚು ಕೃಷಿ ಹೊಂಡಗಳ ನಿರ್ಮಾಣ; ಧಾರವಾಡ ಜಿಲ್ಲೆಯ ರೈತರ ಮೊಗದಲ್ಲಿ ಮಂದಹಾಸ

ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?