AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾತಿ ಗಣತಿ ವರದಿ: ಡಿಸಿಎಂ ಡಿಕೆ ಶಿವಕುಮಾರ್​ಗೆ ಮಹತ್ವದ ಬೇಡಿಕೆ ಇಟ್ಟ ಒಕ್ಕಲಿಗ ಶಾಸಕರು

ಜಾತಿ ಜನಗಣತಿಯ ಜ್ವಾಲಾಮುಖಿ ನಿಧಾನವಾಗಿ ಸ್ಪೋಟಗೊಳ್ಳತೊಡಗಿದೆ. ಜನಗಣತಿಯ ಬಗ್ಗೆ ಭಾರೀ ಅನುಮಾನ ಇಟ್ಟುಕೊಂಡ ಒಕ್ಕಲಿಗ ಸಮುದಾಯ ಸಿಡಿದು ನಿಂತಿದೆ. ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ ಶಾಸಕರ ಅಭಿಪ್ರಾಯ ಆಲಿಸಲು ಡಿಸಿಎಂ ಡಿಕೆ ಶಿವಕುಮಾರ್ ಒಕ್ಕಲಿಗ ಶಾಸಕರ ಸಭೆ ಕರೆದಿದ್ದರು. ಈ ಸಭೆಯಲ್ಲಿ ಶಾಸಕರು ಜಾತಿ ಗಣತಿ ವರದಿಯ ಅಂಕಿಅಂಶಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಡಿಕೆ ಶಿವಕುಮಾರ್ ಮುಂದೆ ಹಲವು ಅಹವಾಲುಗಳನ್ನು ತೋಡಿಕೊಂಡಿದ್ದಾರೆ.

ಜಾತಿ ಗಣತಿ ವರದಿ: ಡಿಸಿಎಂ ಡಿಕೆ ಶಿವಕುಮಾರ್​ಗೆ ಮಹತ್ವದ ಬೇಡಿಕೆ ಇಟ್ಟ ಒಕ್ಕಲಿಗ ಶಾಸಕರು
ಡಿಕೆ ಶಿವಕುಮಾರ್
ಪ್ರಸನ್ನ ಗಾಂವ್ಕರ್​
| Updated By: Ganapathi Sharma|

Updated on:Apr 16, 2025 | 7:27 AM

Share

ಬೆಂಗಳೂರು, ಏಪ್ರಿಲ್ 16: ಜಾತಿಗಣತಿ ವಿಚಾರ (Caste Census Report) ಕರ್ನಾಟಕ ರಾಜಕೀಯದಲ್ಲಿ (Karnataka Politics) ಭಾರಿ ಕಂಪನ ಎಬ್ಬಿಸಿದೆ. ವರದಿಯ ಅಂಶಗಳು ಸಚಿವರ ಕೈಸೇರಿದ್ದೇ ತಡ ಒಕ್ಕಲಿಗ, ಲಿಂಗಾಯತ ಸಮುದಾಯಗಳು ಸಿಡಿದೆದ್ದಿವೆ. ಇದೇ ಕಾರಣಕ್ಕೆ ಮಂಗಳವಾರ ಒಕ್ಕಲಿಗ ಶಾಸಕರ ಸಭೆ ಕರೆದಿದ್ದ ಡಿಸಿಎಂ ಡಿಕೆ ಶಿವಕುಮಾರ್ (DK Shivakumar), ಎಲ್ಲರ ಅಭಿಪ್ರಾಯಗಳನ್ನ ಆಲಿಸಿದ್ದಾರೆ. ಈ ವೇಳೆ ಶಾಸಕರು ತಮ್ಮ ಅಸಮಾಧಾನ ತೋಡಿಕೊಂಡಿದ್ದಾರೆ. ಸಮುದಾಯದ ಅಂಕಿ ಅಂಶಗಳ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ.

ಡಿಕೆ ಶಿವಕುಮಾರ್ ಮುಂದೆ ಒಕ್ಕಲಿಗ ಶಾಸಕರ ವಾದವೇನು?

  • ಜಾತಿಗಣತಿಯಲ್ಲಿ ಒಕ್ಕಲಿಗ ಸಮುದಾಯದ ಅಂಕಿಸಂಖ್ಯೆ ತಪ್ಪಾಗಿದೆ.
  • ವರದಿಯಲ್ಲಿನ ಅಂಕಿ ಸಂಖ್ಯೆ ಬಗ್ಗೆ ಸಮುದಾಯದಲ್ಲಿ ಆಕ್ರೋಶವಿದೆ.
  • ಸಮಾಜಕ್ಕೆ ಆದ ಅನ್ಯಾಯದ ಬಗ್ಗೆ ಸಿಎಂಗೆ ಮನವರಿಕೆ ಮಾಡಬೇಕು.
  • ಸಮುದಾಯದ ಜನಸಂಖ್ಯೆ ನಿಖರವಾಗಿ ದಾಖಲಿಸಲು ವ್ಯವಸ್ಥೆ ಮಾಡಿ.
  • ಇದಕ್ಕಾಗಿ ಸಿಎಂ ಸಿದ್ದರಾಮಯ್ಯಗೆ ಒತ್ತಾಯಿಸಲು ಹಲವರಿಂದ ಸಲಹೆ.
  • ಒಂದು ಸಮಿತಿ ಮಾಡಿ ಮೂರು ತಿಂಗಳುಗಳ ಕಾಲಾವಕಾಶ ನೀಡಿ.
  • ಬಿಜೆಪಿ-ಜೆಡಿಎಸ್ ಸಮುದಾಯದ ಧ್ವನಿ ಎಂಬಂತೆ ಬಿಂಬಿಸುತ್ತಿದ್ದಾರೆ.
  • ಇದಕ್ಕೆ ಸರ್ಕಾರ ಅವಕಾಶ ಮಾಡಿಕೊಡಬಾರದು.
  • ಕ್ಯಾಬಿನೆಟ್ ಸಬ್ ಕಮಿಟಿ ಮಾಡಿ ಅಂಕಿ ಅಂಶ ಕಲೆಹಾಕಲು ಒತ್ತಡ

ಸುಮ್ಮನೆ ವರದಿ ಮಾಡಿಲ್ಲ, ಲಕ್ಷಾಂತರ ಜನ ಕೆಲಸ ಮಾಡಿದ್ದಾರೆ: ಡಿಕೆ ಶಿವಕುಮಾರ್

ಡಿಕೆ ಶಿವಕುಮಾರ್ ಸರ್ಕಾರಿ ನಿವಾಸದಲ್ಲಿ ನಡೆದ ಶಾಸಕರ ಅಭಿಪ್ರಾಯ ಆಲಿಸುವ ಸಭೆಯಲ್ಲಿ ಜಾತಿಗಣತಿ ನೇರವಾಗಿ ವಿರೋಧ ಮಾಡಲು ಸಾಧ್ಯವಿಲ್ಲ ಅನ್ನೋ ಅಭಿಪ್ರಾಯ ವ್ಯಕ್ತವಾಗಿದೆ. ಹೈಕಮಾಂಡ್ ಕೂಡಾ ಜಾತಿಗಣತಿ ಬೆಂಬಲಿಸಿ ಕಾರ್ಯಕ್ರಮ ರೂಪಿಸಿದೆ. ಹೀಗಾಗಿ, ಅಳೆದು ತೂಗಿ ಎಚ್ಚರಿಕೆ ಹೆಜ್ಜೆ ಇಡಬೇಕು ಎಂದು ಚರ್ಚಿಸಲಾಗಿದೆ. ಇನ್ನು, ಸಭೆ ಬಳಿಕ ಮಾತನಾಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಸುಮ್ಮನೆ ವರದಿ ಮಾಡಿಲ್ಲ, ಲಕ್ಷಾಂತರ ಜನ ಕೆಲಸ ಮಾಡಿದ್ದಾರೆ ಎಂದಿದ್ದಾರೆ.

ಇದನ್ನೂ ಓದಿ: ಜಾತಿ ಗಣತಿ ವಿರುದ್ಧ ಸಿಡಿದೆದ್ದ ಒಕ್ಕಲಿಗರು, ಲಿಂಗಾಯತರು: ವರದಿ ಜಾರಿಯಾದರೆ ಸರ್ಕಾರ ಬೀಳಿಸುವ ಎಚ್ಚರಿಕೆ

ಅಷ್ಟೇ ಅಲ್ಲದೆ, ಕೇವಲ ಒಂದು ಸಮಾಜದ ಯೋಚನೆ ಮಾಡುತ್ತಿಲ್ಲ. ವರದಿ ಸುಮ್ಮನೇ ಮಾಡಿದ್ದಾರಾ? ಎಲ್ಲರಿಗೂ ನ್ಯಾಯ ಕೊಡುತ್ತೇವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಸದ್ಯ ಒಕ್ಕಲಿಗ ನಾಯಕರು ಸಹನೆಯಿಂದಲೇ ಸಮುದಾಯದ ಆಕ್ರೋಶವನ್ನು ನಿಭಾಯಿಸುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಮುಂದೆ ಇದು ಯಾವ ದಿಕ್ಕಿಗೆ ಹೊರಳಲಿದೆ, ಒಕ್ಕಲಿಗ ಡಿಸಿಎಂ ಹೇಗೆ ನಿಭಾಯಿಸುತ್ತಾರೆ ಎಂಬುದೇ ಸದ್ಯದ ಪ್ರಶ್ನೆಯಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:26 am, Wed, 16 April 25

ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಕಳೆದ ಶುಕ್ರವಾರ ಹಲವಾರು ಸಮಸ್ಯೆಗಳನ್ನು ಭಕ್ತರು ಟಿವಿ9 ಗಮನಕ್ಕೆ ತಂದಿದ್ದರು
ಕಳೆದ ಶುಕ್ರವಾರ ಹಲವಾರು ಸಮಸ್ಯೆಗಳನ್ನು ಭಕ್ತರು ಟಿವಿ9 ಗಮನಕ್ಕೆ ತಂದಿದ್ದರು
ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು
ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು
ಪೋರ್ಟ್​ ಆಫ್​ ಸ್ಪೇನ್​​ನಲ್ಲಿ ಭೋಜ್ಪುರಿ ಗೀತೆಯೊಂದಿಗೆ ಮೋದಿಗೆ ಸ್ವಾಗತ
ಪೋರ್ಟ್​ ಆಫ್​ ಸ್ಪೇನ್​​ನಲ್ಲಿ ಭೋಜ್ಪುರಿ ಗೀತೆಯೊಂದಿಗೆ ಮೋದಿಗೆ ಸ್ವಾಗತ
ಆಷಾಢ ಶುಕ್ರವಾರ: ಮೈಸೂರು ಚಾಮುಂಡೇಶ್ವರಿ ದರ್ಶನಕ್ಕೆ ಬರುವ ಭಕ್ತರೇ ಗಮನಿಸಿ
ಆಷಾಢ ಶುಕ್ರವಾರ: ಮೈಸೂರು ಚಾಮುಂಡೇಶ್ವರಿ ದರ್ಶನಕ್ಕೆ ಬರುವ ಭಕ್ತರೇ ಗಮನಿಸಿ
ಕನ್ನಡದಲ್ಲೇ ಮಾತು ಆರಂಭಿಸಿದ ನೀರಜ್ ಚೋಪ್ರಾ ಬೆಂಗಳೂರಿನ ಬಗ್ಗೆ ಹೇಳಿದ್ದೇನು?
ಕನ್ನಡದಲ್ಲೇ ಮಾತು ಆರಂಭಿಸಿದ ನೀರಜ್ ಚೋಪ್ರಾ ಬೆಂಗಳೂರಿನ ಬಗ್ಗೆ ಹೇಳಿದ್ದೇನು?
ಪತ್ನಿಯೊಂದಿಗೆ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದ ನಟ ದರ್ಶನ್
ಪತ್ನಿಯೊಂದಿಗೆ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದ ನಟ ದರ್ಶನ್
ಟ್ರಿನಿಡಾಡ್ ಮತ್ತು ಟೊಬಾಗೊ ಪ್ರಧಾನಿ ಕಮಲಾರನ್ನು ಬಿಹಾರದ ಮಗಳು
ಟ್ರಿನಿಡಾಡ್ ಮತ್ತು ಟೊಬಾಗೊ ಪ್ರಧಾನಿ ಕಮಲಾರನ್ನು ಬಿಹಾರದ ಮಗಳು