ಬೆಂಗಳೂರು, ಏಪ್ರಿಲ್ 16: ಜಾತಿಗಣತಿ ವಿಚಾರ (Caste Census Report) ಕರ್ನಾಟಕ ರಾಜಕೀಯದಲ್ಲಿ (Karnataka Politics) ಭಾರಿ ಕಂಪನ ಎಬ್ಬಿಸಿದೆ. ವರದಿಯ ಅಂಶಗಳು ಸಚಿವರ ಕೈಸೇರಿದ್ದೇ ತಡ ಒಕ್ಕಲಿಗ, ಲಿಂಗಾಯತ ಸಮುದಾಯಗಳು ಸಿಡಿದೆದ್ದಿವೆ. ಇದೇ ಕಾರಣಕ್ಕೆ ಮಂಗಳವಾರ ಒಕ್ಕಲಿಗ ಶಾಸಕರ ಸಭೆ ಕರೆದಿದ್ದ ಡಿಸಿಎಂ ಡಿಕೆ ಶಿವಕುಮಾರ್ (DK Shivakumar), ಎಲ್ಲರ ಅಭಿಪ್ರಾಯಗಳನ್ನ ಆಲಿಸಿದ್ದಾರೆ. ಈ ವೇಳೆ ಶಾಸಕರು ತಮ್ಮ ಅಸಮಾಧಾನ ತೋಡಿಕೊಂಡಿದ್ದಾರೆ. ಸಮುದಾಯದ ಅಂಕಿ ಅಂಶಗಳ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ.
ಡಿಕೆ ಶಿವಕುಮಾರ್ ಸರ್ಕಾರಿ ನಿವಾಸದಲ್ಲಿ ನಡೆದ ಶಾಸಕರ ಅಭಿಪ್ರಾಯ ಆಲಿಸುವ ಸಭೆಯಲ್ಲಿ ಜಾತಿಗಣತಿ ನೇರವಾಗಿ ವಿರೋಧ ಮಾಡಲು ಸಾಧ್ಯವಿಲ್ಲ ಅನ್ನೋ ಅಭಿಪ್ರಾಯ ವ್ಯಕ್ತವಾಗಿದೆ. ಹೈಕಮಾಂಡ್ ಕೂಡಾ ಜಾತಿಗಣತಿ ಬೆಂಬಲಿಸಿ ಕಾರ್ಯಕ್ರಮ ರೂಪಿಸಿದೆ. ಹೀಗಾಗಿ, ಅಳೆದು ತೂಗಿ ಎಚ್ಚರಿಕೆ ಹೆಜ್ಜೆ ಇಡಬೇಕು ಎಂದು ಚರ್ಚಿಸಲಾಗಿದೆ. ಇನ್ನು, ಸಭೆ ಬಳಿಕ ಮಾತನಾಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಸುಮ್ಮನೆ ವರದಿ ಮಾಡಿಲ್ಲ, ಲಕ್ಷಾಂತರ ಜನ ಕೆಲಸ ಮಾಡಿದ್ದಾರೆ ಎಂದಿದ್ದಾರೆ.
ಇದನ್ನೂ ಓದಿ: ಜಾತಿ ಗಣತಿ ವಿರುದ್ಧ ಸಿಡಿದೆದ್ದ ಒಕ್ಕಲಿಗರು, ಲಿಂಗಾಯತರು: ವರದಿ ಜಾರಿಯಾದರೆ ಸರ್ಕಾರ ಬೀಳಿಸುವ ಎಚ್ಚರಿಕೆ
ಅಷ್ಟೇ ಅಲ್ಲದೆ, ಕೇವಲ ಒಂದು ಸಮಾಜದ ಯೋಚನೆ ಮಾಡುತ್ತಿಲ್ಲ. ವರದಿ ಸುಮ್ಮನೇ ಮಾಡಿದ್ದಾರಾ? ಎಲ್ಲರಿಗೂ ನ್ಯಾಯ ಕೊಡುತ್ತೇವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಸದ್ಯ ಒಕ್ಕಲಿಗ ನಾಯಕರು ಸಹನೆಯಿಂದಲೇ ಸಮುದಾಯದ ಆಕ್ರೋಶವನ್ನು ನಿಭಾಯಿಸುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಮುಂದೆ ಇದು ಯಾವ ದಿಕ್ಕಿಗೆ ಹೊರಳಲಿದೆ, ಒಕ್ಕಲಿಗ ಡಿಸಿಎಂ ಹೇಗೆ ನಿಭಾಯಿಸುತ್ತಾರೆ ಎಂಬುದೇ ಸದ್ಯದ ಪ್ರಶ್ನೆಯಾಗಿದೆ.
Published On - 7:26 am, Wed, 16 April 25