AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರಿನಲ್ಲಿ ಕಲುಷಿತ ನೀರು ಕುಡಿದು ವಾಂತಿ ಭೇದಿ ಪ್ರಕರಣ: ಮೃತರ ಸಂಖ್ಯೆ 6ಕ್ಕೆ ಏರಿಕೆ

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಚಿನ್ನೇನಹಳ್ಳಿಯಲ್ಲಿ ಕಲುಷಿತ ನೀರು ಕುಡಿದು ವಾಂತಿ ಭೇದಿಯಿಂದ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆ ಆಗಿದೆ. ಈ ಪೈಕಿ ಉಳಿದ ನಾಲ್ವರು ವೈಯಕ್ತಿ ಕಾಯಿಲೆಯಿಂದ ಮೃತಪಟ್ಟಿದ್ದರೆ, ಇಬ್ಬರೂ ವಾಂತಿ ಭೇದಿಯಿಂದ ಮೃತಪಟ್ಟಿರುವುದಾಗಿ ಆರೋಗ್ಯ ಇಲಾಖೆ ವರದಿ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಚಿನ್ನೆನಹಳ್ಳಿ ಗ್ರಾಮದಲ್ಲಿ ಡಿಸಿ ಶುಭಕಲ್ಯಾಣ್ ಹಾಗೂ ಜಿಪಂ ಸಿಇಒ ಪ್ರಭು ಎಡಿಸಿ ಶಿವಾನಂದ ಕರಾಳೆ ಎಸಿ ಗ್ರಾಮಸ್ಥರಿಗೆ ಧೈರ್ಯ ತುಂಬಿದ್ದಾರೆ.

ತುಮಕೂರಿನಲ್ಲಿ ಕಲುಷಿತ ನೀರು ಕುಡಿದು ವಾಂತಿ ಭೇದಿ ಪ್ರಕರಣ: ಮೃತರ ಸಂಖ್ಯೆ 6ಕ್ಕೆ ಏರಿಕೆ
ತುಮಕೂರಿನಲ್ಲಿ ಕಲುಷಿತ ನೀರು ಕುಡಿದು ವಾಂತಿ ಭೇದಿ ಪ್ರಕರಣ: ಮೃತರ ಸಂಖ್ಯೆ 6ಕ್ಕೆ ಏರಿಕೆ
ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ | Edited By: |

Updated on: Jun 13, 2024 | 4:16 PM

Share

ತುಮಕೂರು, ಜೂನ್​ 13: ಜಿಲ್ಲೆಯ ಮಧುಗಿರಿ ತಾಲೂಕಿನ ಚಿನ್ನೇನಹಳ್ಳಿಯಲ್ಲಿ ಕಲುಷಿತ ನೀರು ಕುಡಿದು (contaminated water) ವಾಂತಿ ಭೇದಿಯಿಂದ ಮೃತಪಟ್ಟವರ (Death) ಸಂಖ್ಯೆ 6ಕ್ಕೆ ಏರಿಕೆ ಆಗಿದೆ. ಈ ಪೈಕಿ ಉಳಿದ ನಾಲ್ವರು ವೈಯಕ್ತಿ ಕಾಯಿಲೆಯಿಂದ ಮೃತಪಟ್ಟಿದ್ದರೆ, ಇಬ್ಬರೂ ವಾಂತಿ ಭೇದಿಯಿಂದ ಮೃತಪಟ್ಟಿರುವುದಾಗಿ ಆರೋಗ್ಯ ಇಲಾಖೆ ವರದಿ ನೀಡಿದೆ. ಜಿಲ್ಲಾಸ್ಪತ್ರೆಯಲ್ಲಿ ನಿನ್ನೆ ಚಿಕ್ಕದಾಸಪ್ಪ(76), ಪೆದ್ದಣ್ಣ(72) ಮೃತಪಟ್ಟಿದ್ದರು. ಅಸ್ತಮಾದಿಂದ ಹನುಮಕ್ಕ(80), ಮನೆಯಲ್ಲೇ ನಿಂಗಮ್ಮ(75), ಮದ್ಯವ್ಯಸನಿಯಾಗಿದ್ದ 75 ವರ್ಷದ ನಾಗಪ್ಪ, ಮನೆಯಲ್ಲೇ ವಾಂತಿ ಭೇದಿಯಾಗಿ ಮೀನಾಕ್ಷಿ(3) ಮೃತಪಟ್ಟಿದ್ದಾರೆ. ಆ ಮೂಲಕ 6 ಜನರ ಸಾವಿನ ಬಗ್ಗೆ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಅನಾಹುತ ಆದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ

ವಾಂತಿ ಭೇದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿನ್ನೆನಹಳ್ಳಿ ಗ್ರಾಮದಲ್ಲಿ ಡಿಸಿ ಶುಭಕಲ್ಯಾಣ್ ಹಾಗೂ ಜಿಪಂ ಸಿಇಒ ಪ್ರಭು ಎಡಿಸಿ ಶಿವಾನಂದ ಕರಾಳೆ ಎಸಿರಿಂದ ಗ್ರಾಮದ ಸರ್ಕಾರಿ ಶಾಲೆ ಬಳಿ ಸಭೆ ಮಾಡಿದ್ದು ಗ್ರಾಮಸ್ಥರಿಗೆ ಧೈರ್ಯ ತುಂಬಿದ್ದಾರೆ.

ಇದನ್ನೂ ಓದಿ: ತುಮಕೂರು: 29 ವರ್ಷದ ಬಳಿಕ ನಡೆದಿದ್ದ ಜಾತ್ರೆಯಲ್ಲಿ ಭಾಗಿಯಾಗಿದ್ದ 35 ಜನ ಅಸ್ವಸ್ಥ

ಅನಾಹುತ ಆದ ಬಳಿಕ ಎಚ್ಚೆತ್ತಿರುವ ಜಿಲ್ಲಾಡಳಿತ ವಾಂತಿ ಭೇದಿ ತಡೆಯಲು ಸಕಲ ಸಿದ್ದತೆ ಮಾಡುವುದಾಗಿ ಹೇಳಿದ್ದಾರೆ. ಕೂಡಲೇ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳಿ. ಯಾರು ಆತಂಕಕ್ಕೆ ಒಳಗಾಗಬೇಡಿ. ಗ್ರಾಮದಲ್ಲಿ ಚರಂಡಿ ವ್ಯವಸ್ಥೆ, ಸಿಸಿ ರಸ್ತೆ ಮಾಡಿಸಲು ಜಿಪಂ‌ ಸಿಇಒ ಪ್ರಭುರಿಂದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜೆಜೆಎಮ್ ಕಾಮಗಾರಿ ಕೂಡ ಮರುಪರಿಶೀಲನೆ ನಡೆಸಿ ಮರುಕಾಮಗಾರಿ ನಡೆಸಲು ಚಿಂತನೆ ಮಾಡಲಾಗುತ್ತಿದೆ.

ಕಳೆದ ಮೂರು ದಿನಗಳಿಂದ ನಲ್ಲಿಗಳ ಮೂಲಕ ನೀರಿನ ಸರಬರಾಜು ಸಂಪೂರ್ಣ ಸ್ಥಗಿತವಾಗಿದೆ. ಜಿಲ್ಲಾಡಳಿತ ತಾಲೂಕು ಆಡಳಿತ ವತಿಯಿಂದ ಟ್ಯಾಂಕರ್ ಮೂಲಕ ಪ್ರತಿದಿನ ಪರೀಕ್ಷೆ ನಡೆಸಿ ಸ್ವಚ್ಚವಾದ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ನೀರನ್ನ ಕಾಯಿಸಿ ಆರಿಸಿ ಕುಡಿಯಲು ಗ್ರಾಮಸ್ಥರಿಗೆ ಜಿಲ್ಲಾಡಳಿತ ಸೂಚನೆ ನೀಡಿದೆ.

ಇದನ್ನೂ ಓದಿ: ಗೃಹ ಪ್ರವೇಶದಲ್ಲಿ ಊಟ ಸೇವಿಸಿದ್ದ ಒಂದೇ ಗ್ರಾಮದ 50ಕ್ಕೂ ಹೆಚ್ಚು ಜನರಲ್ಲಿ ವಾಂತಿ ಭೇದಿ: ವೃದ್ಧೆ ಸಾವು

ಜನಜೀವನ್ ಮಿಷನ್ ಕಾಮಗಾರಿಯಿಂದ ಹಲವೆಡೆ ಪೈಪ್​ಗಳಿಗೆ ಹಾನಿ ಆಗಿದ್ದು, ಇದರಿಂದ ಚರಂಡಿ ನೀರು ಕೂಡ ಮಿಶ್ರಿತವಾಗಿ ಕಲುಷಿತ ಆಗಿರುವ ಶಂಕೆ ವ್ಯಕ್ತವಾಗಿದೆ. ಜಾತ್ರೆ ಇನ್ನೂ ನಾಲ್ಕು ಬಾಕಿ ಇದ್ದಾಗ ಆತುರವಾಗಿ ಕಾಮಗಾರಿ ಮುಗಿಸಿದ್ದಾರೆ. ಅಲ್ಲದೇ ಗ್ರಾಮದಲ್ಲಿ ಸಮರ್ಪಕವಾಗಿ ಸೂಕ್ತ ಚರಂಡಿ ವ್ಯವಸ್ಥೆನೇ ಇಲ್ಲ.

ಮನೆಗಳ ಮುಂದೆ ಚರಂಡಿ ವ್ಯವಸ್ಥೆಯೇ ಇಲ್ಲ. ಸ್ವಚ್ಚತೆ ಇಲ್ಲದಿರುವುದಕ್ಕೆ ಕೂಡ ನೀರು ಕಲುಷಿತ ಆಗಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಗ್ರಾಮಸ್ಥರ ಬಳಿ ಡಿಸಿ ಶುಭಕಲ್ಯಾಣ್ ಸಿಇಒ ಪ್ರಭು ಮಾಹಿತಿ ಪಡೆದುಕೊಂಡಿದ್ದಾರೆ. ಇನ್ನೂ ಜೂನ್ 7 ರಂದು ಓವರ್ ಟ್ಯಾಂಕ್ ನೀರು ಕುಡಿಯಲು ಯೋಗ್ಯ ಎಂದು ವರದಿ ನೀಡಲಾಗಿದೆ. ಆದರೆ ಜಾತ್ರೆ ಆರಂಭವಾದ ಕೂಡಲೇ ಗ್ರಾಮದಲ್ಲಿ ವಾಂತಿ ಭೇದಿ ಆರಂಭವಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Mahesha E
Mahesha E

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...

ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್