AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತಗಳ್ಳತನ ಆರೋಪ: ಸಂಸದ ರಾಹುಲ್​ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ಜೆಡಿಎಸ್​ ದೂರು

ಲೋಕಸಭಾ ಸದಸ್ಯ ರಾಹುಲ್ ಗಾಂಧಿ ಅವರ ವಿರುದ್ಧ ಜೆಡಿಎಸ್ ಕರ್ನಾಟಕ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ. ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಮತಗಳ್ಳತನದ ಬಗ್ಗೆ ಸುಳ್ಳು ಆರೋಪ ಮಾಡಿದ್ದಾರೆ ಎಂದು ಚುನಾವಣಾ ಆಯೋಗಕ್ಕೆ ಜೆಡಿಎಸ್​ ದೂರು ನೀಡಿದೆ. ವಿವಿಧ ರಾಜಕೀಯ ನಾಯಕರು ಈ ಘಟನೆ ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

ಮತಗಳ್ಳತನ ಆರೋಪ: ಸಂಸದ ರಾಹುಲ್​ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ಜೆಡಿಎಸ್​ ದೂರು
ರಾಹುಲ್​ ಗಾಂಧಿ, ಜೆಡಿಎಸ್​
TV9 Web
| Edited By: |

Updated on: Aug 11, 2025 | 5:22 PM

Share

ಬೆಂಗಳೂರು, ಆಗಸ್ಟ್​ 11: ಕಾಂಗ್ರೆಸ್​ ಸಂಸದ ರಾಹುಲ್ ಗಾಂಧಿ (Rahul Gandhi) ಅವರ ವಿರುದ್ಧ ಜೆಡಿಎಸ್ (JDS) ನಿಯೋಗ ​ಕರ್ನಾಟಕ ಚುನಾವಣಾ ಆಯೋಗಕ್ಕೆ (Election Commission) ದೂರು ನೀಡಿದೆ. ಬೆಂಗಳೂರಲ್ಲಿ ಪ್ರತಿಭಟನೆ ವೇಳೆ ಮತಗಳ್ಳತನದ ಬಗ್ಗೆ ಸುಳ್ಳು ಆರೋಪ ಮಾಡಿದ್ದಾರೆ. ಅಲ್ಲದೆ, ಚುನಾವಣಾ ಆಯೋಗದ ವಿರುದ್ಧವೂ ಸುಳ್ಳು ಆರೋಪ ಮಾಡಿದ್ದಾರೆ. ಹೀಗಾಗಿ ಸಂಸದ ರಾಹುಲ್ ಗಾಂಧಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜೆಡಿಎಸ್​ ಎಂಎಲ್​ಸಿ ಕೆ.ಎ.ತಿಪ್ಪೇರುದ್ರಸ್ವಾಮಿ, ಮುಖಂಡರಾದ ಜವರಾಯಿಗೌಡ ಮತ್ತು ಹೆಚ್​​. ಎನ್​. ದೇವರಾಜ್ ಸೇರಿದಂತೆ ಇತರರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಬ್ರಿಟಿಷ್ ಆಡಳಿತವನ್ನ ನೆನಪಿಸುತ್ತೆ: ಹೆಚ್​ಕೆ ಪಾಟೀಲ್​

ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ನೋಟಿಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಾನೂನು ಸಚಿವ ಹೆಚ್​ಕೆ ಪಾಟೀಲ್​ ಮಾತನಾಡಿ, ರಾಹುಲ್ ಗಾಂಧಿಯವರು ನೀಡಿದ ಮಾಹಿತಿಯನ್ನು ಸುಮೋಟೋ ಎಂದು ಪರಿಗಣಿಸಿ. ಒಂದು ಪೋಸ್ಟ್ ಕಾರ್ಡ್ ಬರೆದರೆ PIL ಎಂದು ಪರಿಗಣಿಸುತ್ತೇವೆ. ನೋಟಿಸ್ ಕ್ರಮ ಬ್ರಿಟಿಷ್ ಮಾದರಿಯ ಆಡಳಿತವನ್ನ ನೆನಪಿಸುತ್ತೆ. ಮೋದಿ ಮತಗಳ್ಳತನ ಮಾಡಿ ಪ್ರಧಾನಿ ಆಗಿದ್ದಾರೆ ಎಂದು ಸಚಿವ ಕೆಎನ್​ ರಾಜಣ್ಣ ಹೇಳಿದ್ದಾರೆ. ಅದು ಸರಿಯಾದದ್ದಲ್ವಾ ಎಂದ ಕಾನೂನು ಸಚಿವ ಹೆಚ್​.ಕೆ.ಪಾಟೀಲ್ ಪ್ರಶ್ನಿಸಿದರು.

ಎಐಸಿಸಿ, ಕೆಪಿಸಿಸಿ ನೋಡಿಕೊಳ್ಳುತ್ತೆ: ಪರಮೇಶ್ವರ್​

ರಾಹುಲ್​ ಗಾಂಧಿಯವರಿಗೆ ಚುನಾವಣಾ ಆಯೋಗ ನೋಟಿಸ್ ನೀಡಿದ ವಿಚಾರವನ್ನು ಎಐಸಿಸಿ, ಕೆಪಿಸಿಸಿಯವರು ನೋಡಿಕೊಳ್ಳುತ್ತಾರೆ. ಕೆಪಿಸಿಸಿ ಅಧ್ಯಕ್ಷರ ಬಳಿಯೂ ಸ್ಪಷ್ಟನೆಯನ್ನು ಕೇಳಿದ್ದಾರೆ, ಕೊಡುತ್ತಾರೆ. ದಾಖಲೆಗಳು ಕೊಡಿ ಅಂತ ಚುನಾವಣಾ ಆಯೋಗ ಕೇಳಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು.

ಇದನ್ನೂ ಓದಿ: ಮತಗಳ್ಳತನ ಆರೋಪ: ಸಂಸದ ರಾಹುಲ್​ ಗಾಂಧಿಗೆ ಚುನಾವಣಾ ಆಯೋಗ ನೋಟಿಸ್

ನೋಟೀಸ್‌ಗೆ ಹೆದರಲ್ಲ: ಡಿಕೆ ಶಿವಕುಮಾರ್

ಸಂಸದ ರಾಹುಲ್ ಗಾಂಧಿ ಈ ದೇಶಕ್ಕೆ ಎಲ್ಲಾ ಮಾಹಿತಿ ಕೊಟ್ಟಿದ್ದಾರೆ. ರಾಹುಲ್ ಗಾಂಧಿ ಹೇಳಿಕೆ ಬಗ್ಗೆ ಪರಿಶೀಲಿಸುತ್ತಿದ್ದೇವೆ. ಪರಿಶೀಲನೆ ಬಗ್ಗೆ ರಾಜ್ಯ ಚುನಾವಣಾ ಆಯೋಗ ಹೇಳಿದೆ. ಏನು ತಪ್ಪಾಗಿದೆ ಅಂತ ಆಯೋಗಕ್ಕೆ ಮಾಹಿತಿ ತಿಳಿಸುತ್ತೇವೆ. ಕಾನೂನು ರೀತಿ ಕ್ರಮಕೈಗೊಳ್ಳುವುದು ಅಧಿಕಾರ ಚುನಾವಣಾ ಆಯೋಗಕ್ಕೆ ಇದೆ. ನಾವು ತಪ್ಪು ಹೇಳಿದರೇ ಕೇಸ್ ಹಾಕಲಿ. ನೋಟೀಸ್‌ಗೆ ಹೆದರಲ್ಲ. ಈ ದೇಶದಲ್ಲಿ ಪ್ರಜಾಪ್ರಭುತ್ವ ಉಳಿಯಲೆಂದು ರಾಹುಲ್ ಗಾಂಧಿ ಹೋರಾಟ ಮಾಡುತ್ತಿದ್ದಾರೆ. ಮತ ದುರ್ಬಳಕೆಯಾಗಬಾರದೆಂದು ಅಂತ ಪ್ರತಿಭಟಿಸುತ್ತಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.

ಕರ್ನಾಟಕ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್