AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯಿಂದಲೇ ಮತದಾನದ ವೇಳೆ ಬಿಜೆಪಿ ಏಜೆಂಟ್ ಇದ್ದರೇ? ಕಾಂಗ್ರೆಸ್ ದೂರಿನ ಬಗ್ಗೆ ಆಯೋಗ ಹೇಳಿದ್ದಿಷ್ಟು

ಲೋಕಸಭೆ ಚುನಾವಣೆಗೆ ಮನೆಯಿಂದಲೇ ಮತದಾನ ಪ್ರಕ್ರಿಯೆ ಕರ್ನಾಟಕದಲ್ಲಿ ಈಗಾಗಲೇ ಆರಂಭವಾಗಿದೆ. ಈ ವೇಳೆ, ರಾಜಾಜಿನಗರದ ಮನೆಯೊಂದರಲ್ಲಿ ಚುನಾವಣಾ ಅಧಿಕಾರಿಗಳ ಜತೆ ಬಿಜೆಪಿ ಏಜೆಂಟ್ ಇದ್ದರು ಎಂಬ ಆರೋಪ ಕೇಳಿಬಂದಿದೆ. ಇದಕ್ಕೆ ಚುನಾವಣಾ ಆಯೋಗ ಸ್ಪಷ್ಟನೆಯನ್ನೂ ನೀಡಿದೆ. ಆಯೋಗ ಹೇಳಿದ್ದೇನು ಎಂಬ ಮಾಹಿತಿ ಇಲ್ಲಿದೆ.

ಮನೆಯಿಂದಲೇ ಮತದಾನದ ವೇಳೆ ಬಿಜೆಪಿ ಏಜೆಂಟ್ ಇದ್ದರೇ? ಕಾಂಗ್ರೆಸ್ ದೂರಿನ ಬಗ್ಗೆ ಆಯೋಗ ಹೇಳಿದ್ದಿಷ್ಟು
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Apr 15, 2024 | 7:05 AM

Share

ಬೆಂಗಳೂರು, ಏಪ್ರಿಲ್ 15: ಬೆಂಗಳೂರು ಸೆಂಟ್ರಲ್ ಕ್ಷೇತ್ರದ ವ್ಯಾಪ್ತಿಯ ರಾಜಾಜಿನಗರದ (Rajajinagar) ಮನೆಯೊಂದರಲ್ಲಿ ಹಿರಿಯ ನಾಗರಿಕರ ಮತದಾನದ ವೇಳೆ (Vote From Home) ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂಬ ಆರೋಪವನ್ನು ಚುನಾವಣಾ ಅಧಿಕಾರಿಗಳು ಅಲ್ಲಗಳೆದಿದ್ದಾರೆ. ಹಿರಿಯ ನಾಗರಿಕರು ಮತ ಹಾಕಲು ವ್ಯವಸ್ಥೆ ಮಾಡಲಾಗಿದ್ದ ಮನೆಯಲ್ಲಿ ಬಿಜೆಪಿ ಏಜೆಂಟರು ಚುನಾವಣಾಧಿಕಾರಿಗಳ ಜೊತೆಗಿದ್ದರು ಎಂದು ಆರೋಪಿಸಿದ್ದ ಕಾಂಗ್ರೆಸ್, ಆ ಬಗ್ಗೆ ದೂರು ದಾಖಲಿಸಿತ್ತು.

ಹಿರಿಯ ಮತದಾರರೊಬ್ಬರ ಮನೆಯಲ್ಲಿ ಮತದಾನದ ವೇಳೆ ಬಿಜೆಪಿ ಕಾರ್ಯಕರ್ತನ ಉಪಸ್ಥಿತಿಯ ಬಗ್ಗೆ ಕಾಂಗ್ರೆಸ್ ಮತ್ತು ಎಎಪಿಯಿಂದ ದೂರು ಸ್ವೀಕರಿಸಿದ್ದೇವೆ ಎಂದು ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ. ಆ ಬಗ್ಗೆ ವಿಚಾರಣೆ ನಡೆಸಿರುವುದಾಗಿಯೂ ಅದು ಸುಳ್ಳು ಆರೋಪ ಎಂಬುದು ತಿಳಿದು ಬಂದಿದೆ ಎಂಬುದಾಗಿಯೂ ನಂತರ ಅವರು ಹೇಳಿದ್ದಾರೆ.

ದೂರಿನ ಬಗ್ಗೆ ವಿಚಾರಣೆ ನಡೆಸಿದ್ದೇವೆ. ಹಿರಿಯರು ಮತ ಹಾಕುವ ವೇಳೆ ಬಿಜೆಪಿಗೆ ಸೇರಿದವರು ಇರಲಿಲ್ಲ. ನಾವು ಅಧಿಕಾರಿಗಳ ವರದಿಯನ್ನು ಪರಿಶೀಲಿಸಿದ್ದೇವೆ ಮತ್ತು ವೀಡಿಯೊವನ್ನು ಸಹ ಪರಿಶೀಲಿಸಿದ್ದೇವೆ. ಮತದ ಗೋಪ್ಯತೆಗೆ ಧಕ್ಕೆಯಾಗಿಲ್ಲ. ಬಿಜೆಪಿಯ ವ್ಯಕ್ತಿಯೊಬ್ಬರು ಮನೆಯ ಆಸುಪಾಸಿನಲ್ಲಿದ್ದಿರಬಹುದೇ ವಿನಃ ಮನೆಯೊಳಗೆ ಅಲ್ಲ ಎಂದು ಅವರು ತಿಳಿಸಿದ್ದಾರೆ.

ವಶ ಪಡೆದಿದ್ದ ನಗದು, ಚಿನ್ನ ಏನಾಯ್ತು?

2023 ರ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ವಶಪಡಿಸಿಕೊಂಡಿದ್ದ 384 ಕೋಟಿ ರೂಪಾಯಿ ನಗದು ಮತ್ತು ಬೆಲೆಬಾಳುವ ವಸ್ತುಗಳ ಪೈಕಿ ಶೇಕಡಾ 49 ರಷ್ಟನ್ನು ಆಯೋಗವು ಬಿಡುಗಡೆ ಮಾಡಿದೆ ಎಂದು ಮೀನಾ ಮಾಹಿತಿ ನೀಡಿದ್ದಾರೆ. ವಿಜಿಲೆನ್ಸ್ ಸಮಿತಿಯು ಸಲ್ಲಿಸಿದ ದಾಖಲೆಗಳ ಆಧಾರದ ಮೇಲೆ ಹಕ್ಕುಗಳ ಬಗ್ಗೆ ಮನವರಿಕೆಯಾದಾಗ ಮೊತ್ತವನ್ನು ಬಿಡುಗಡೆ ಮಾಡುತ್ತದೆ. ಉಳಿದ ಮೊತ್ತಕ್ಕೆ ಪ್ರಕರಣಗಳು ದಾಖಲಾಗಿದ್ದು, ಇದೀಗ ನ್ಯಾಯಾಲಯದ ಆಸ್ತಿಯಾಗಿದೆ. 10 ಲಕ್ಷಕ್ಕಿಂತ ಹೆಚ್ಚಿನ ಹಣ ಆದಾಯ ತೆರಿಗೆ ಇಲಾಖೆ ವ್ಯಾಪ್ತಿಯಲ್ಲಿ ಇರುತ್ತದೆ. ಉಚಿತವಾಗಿ ಹಂಚಲು ಕೊಂಡೊಯ್ಯುತ್ತಿದ್ದ ಮತ್ತು ಬೆಲೆಬಾಳುವ ವಸ್ತುಗಳು ಪೊಲೀಸರ ಬಳಿ ಇವೆ. ನ್ಯಾಯಾಲಯದ ಆದೇಶದ ಮೇರೆಗೆ ಅವುಗಳನ್ನು ವಿಲೇವಾರಿ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಉತ್ತರದಲ್ಲಿ ಶೋಭಾ ಕರಂದ್ಲಾಜೆ ಗೆಲುವು ಸುಲಭವೇ? ಕೈ, ಕಮಲ ಬಲಾಬಲ ಹೀಗಿದೆ

ಶೇ 90ರಷ್ಟು ಪ್ರಕರಣಗಳಲ್ಲಿ ಆರೋಪಪಟ್ಟಿ ಸಲ್ಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಹೆಚ್ಚಿನ ಪ್ರಕರಣಗಳಲ್ಲಿ, ವಿಚಾರಣೆಗಳು ನಡೆಯುತ್ತಿವೆ ಮತ್ತು ಶೇ 40 ರಷ್ಟು ಆರೋಪಿಗಳಿಗೆ ಶಿಕ್ಷೆಯಾಗಿದೆ. ಸಾಮಾನ್ಯವಾಗಿ ಇಂಥ ಪ್ರಕರಣಗಳಲ್ಲಿ ಜೈಲು ಶಿಕ್ಷೆಯ ಬದಲು ದಂಡ ವಿಧಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ