AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತಗಳ್ಳತನ ಆರೋಪ: ಚುನಾವಣೆ ಕಚೇರಿಗೆ ಬಿಗಿ ಭದ್ರತೆ, ದೂರು ಸಲ್ಲಿಸಲು 6 ಜನರಿಗೆ ಅವಕಾಶ

ಕಳೆದ ಲೋಕಸಭೆ ಚುನಾವಣೆಯಲ್ಲಿ ಮತಕಳ್ಳತನವಾಗಿದೆ ಎಂದು ಗುರುವಾರ ದೆಹಲಿಯಲ್ಲಿ ದಾಖಲೆ ಬಿಡುಗಡೆ ಮಾಡಿರುವ ರಾಹುಲ್ ಗಾಂಧಿ ಬೆಂಗಳೂರಿನಲ್ಲಿಂದು ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ. ಪ್ರತಿಭಟನೆ ಬಳಿಕ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ನೀಡಲಿದ್ದು, ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ.ಅನ್ಬುಕುಮಾರ್‌ ಕಾಂಗ್ರೆಸ್​ನ 6 ನಾಯಕರಿಗಷ್ಟೇ ಅನುಮತಿ ನೀಡಿದ್ದಾರೆ. ​

ಮತಗಳ್ಳತನ ಆರೋಪ: ಚುನಾವಣೆ ಕಚೇರಿಗೆ ಬಿಗಿ ಭದ್ರತೆ, ದೂರು ಸಲ್ಲಿಸಲು 6 ಜನರಿಗೆ ಅವಕಾಶ
ರಾಜ್ಯ ಚುನಾವಣಾ ಆಯೋಗ
Kiran HV
| Updated By: ಗಂಗಾಧರ​ ಬ. ಸಾಬೋಜಿ|

Updated on: Aug 08, 2025 | 11:33 AM

Share

ಬೆಂಗಳೂರು, ಆಗಸ್ಟ್​ 08: ಮತಗಳ್ಳತನ ಆರೋಪ‌ ವಿಚಾರಕ್ಕೆ ಸಂಬಂಧಪಟ್ಟಂತೆ ಇಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ರಾಹುಲ್ ಗಾಂಧಿ (Rahul Gandhi) ನೇತೃತ್ವದಲ್ಲಿ ಕಾಂಗ್ರೆಸ್ (congress) ಪ್ರತಿಭಟನೆ ನಡೆಸಲಿದೆ. ಈ ಪ್ರತಿಭಟನೆಗೆ ಪೊಲೀಸ್ ಸರ್ಪಗಾವಲೇ ಏರ್ಪಟ್ಟಿದೆ. ಇತ್ತ ಚುನಾವಣೆ ಮುಖ್ಯ ಕಚೇರಿಗೂ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ.  ಪ್ರತಿಭಟನೆ ಬಳಿಕ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ನೀಡಲಿದ್ದು, 6 ನಾಯಕರಿಗಷ್ಟೇ ಅನುಮತಿ ನೀಡಲಾಗಿದೆ.

ರಾಜ್ಯ ಚುನಾವಣಾಧಿಕಾರಿಗೆ ಕಾಂಗ್ರೆಸ್ ನಾಯಕರಿಂದ ದೂರು ಹಿನ್ನೆಲೆ ಮುಖ್ಯ ಚುನಾವಣಾಧಿಕಾರಿ ಕಚೇರಿ ಬಳಿ ಪೊಲೀಸ್ ಬಂದೋಬಸ್ತ್​ ಒದಗಿಸಲಾಗಿದೆ. ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಕೆ.ಸಿ.ವೇಣುಗೋಪಾಲ್, ಸುರ್ಜೇವಾಲ, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ಗಷ್ಟೇ ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್‌ ದೂರು ಸಲ್ಲಿಸಲು ಅನುಮತಿ ನೀಡಿದ್ದಾರೆ.

ಕುತೂಹಲ ಕೆರಳಿಸಿದ ರಾಹುಲ್​ ಗಾಂಧಿ ಮುಂದಿನ ನಡೆ

ಇನ್ನು ದೂರು ಸಲ್ಲಿಕೆ ವೇಳೆ ರಾಹುಲ್​ ಗಾಂಧಿ ಡಿಕ್ಲರೇಶನ್ ಕಾಪಿಗೆ ಸಹಿ ಹಾಕುತ್ತಾರಾ ಅಥವಾ ಇಲ್ಲವಾ ಎಂಬ ಕುತೂಹಲ ಸೃಷ್ಟಿಯಾಗಿದೆ. ಏಕೆಂದರೆ ಡಿಕ್ಲರೇಶನ್​ಗೆ ಸಹಿ ಹಾಕುವಂತೆ ಚುನಾವಣಾ ಆಯೋಗ ತಾಕೀತು ಮಾಡಿತ್ತು. ಡಿಕ್ಲರೇಶನ್​​ ಮಾದರಿಯನ್ನು ಚುನಾವಣಾ ಆಯೋಗ ತಾವೇ ಸ್ವತಃ ರಾಹುಲ್ ಗಾಂಧಿಗೆ ರವಾನಿಸಿದ್ದು, ಕಾನೂನು ಅಂಶಗಳ ಬಗ್ಗೆ ಉಲ್ಲೇಖಿಸಲಾಗಿದೆ. ಒಂದು ವೇಳೆ ರಾಹುಲ್​ ಗಾಂಧಿ ಡಿಕ್ಲರೇಶನ್​ಗೆ ಸಹಿ ಹಾಕಿದರೆ ಮುಂದೆ ಕಾನೂನಾತ್ಮಕ ಸಮಸ್ಯೆಗಳು ಎದುರಿಸಬೇಕಾಗಬಹುದು.

ಇದನ್ನೂ ಓದಿ
Image
ರಾಹುಲ್ ಗಾಂಧಿ ಪ್ರತಿಭಟನೆಗೆ ಟ್ವೀಟ್​ ಮೂಲಕ ಹೆಚ್​ಡಿ ಕುಮಾರಸ್ವಾಮಿ ಕಿಡಿ
Image
ನಾಳೆ ಬೆಂಗಳೂರಿನಲ್ಲಿ ರಾಹುಲ್ ಪ್ರತಿಭಟನಾ ಸಮಾವೇಶ:ಇಲ್ಲಿದೆ ಸಂಪೂರ್ಣ ಮಾಹಿತಿ
Image
ಮತಗಳ್ಳತನ ಸಂಖ್ಯೆ ಬಿಡುಗಡೆ ಮಾಡಿದ ರಾಹುಲ್​ಗೆ ಚುನಾವಣಾ ಆಯೋಗ ತಿರುಗೇಟು!
Image
ರಾಹುಲ್ ಗಾಂಧಿ ಪ್ರತಿಭಟನೆಗಾಗಿ ಫ್ರೀಡಂ ಪಾರ್ಕ್ ಗೋಡೆ ನೆಲಸಮ:  ಬಿಜೆಪಿ ದೂರು

ಇದನ್ನೂ ಓದಿ: ಚುನಾವಣೆ ಆಯೋಗದ ಮೇಲೆ ಸುಳ್ಳಿನ ಸುರಿಮಳೆ ಜನತಂತ್ರಕ್ಕೆ ನೇಣು ಬಿಗಿಯುವ ದೂರ್ತ ಹುನ್ನಾರ: ಹೆಚ್​ಡಿ ಕುಮಾರಸ್ವಾಮಿ

  • ಚುನಾವಣಾ ಪಟ್ಟಿ ತಿದ್ದುಪಡಿ, ಸಿದ್ದತೆ ಅಥವಾ ಶುದ್ಧೀಕರಣ ಸಂಬಂಧ ನೀಡುವ ತಪ್ಪು ಘೋಷಣೆಯು 1950 ರ ಪ್ರಜಾಪ್ರಭುತ್ವ ಪ್ರತಿನಿಧಿ ಕಾಯ್ದೆಯ ಕಲಂ 31 ರಂತೆ ಶಿಕ್ಷಾರ್ಹವಾಗಿದ್ದು, ಅದಕ್ಕೆ ಗರಿಷ್ಠವಾಗಿ ಒಂದು ವರ್ಷದವರೆಗೆ ಜೈಲುಶಿಕ್ಷೆ ಅಥವಾ ದಂಡ ಅಥವಾ ಎರಡೂ ವಿಧಿಸಲಾಗಬಹುದು ಎಂಬುದನ್ನು ನಾನು ಅರಿತಿದ್ದೇನೆ.
  • ನ್ಯಾಯಾಲಯ ಅಥವಾ ಅಧಿಕೃತ ದಾಖಲೆಗಳಲ್ಲಿ ಸುಳ್ಳು ಸಾಕ್ಷ್ಯ ಅಥವಾ ಪ್ರಮಾಣಪತ್ರ ನೀಡುವುದು 2023ರ ಭಾರತೀಯ ನ್ಯಾಯ ಸಂಹಿತೆಯ ಕಲಂ 227 ರಂತೆ ಶಿಕ್ಷಾರ್ಹವಾಗಿದೆ.
  • ಇದಕ್ಕೆ ಹೆಚ್ಚು ಕಠಿಣ ಶಿಕ್ಷೆಗಳು ವಿಧಿಸಲಾಗುತ್ತವೆ. ವಿಶೇಷವಾಗಿ ನ್ಯಾಯಾಂಗ ಅಥವಾ ಅಧಿಕೃತ ಪ್ರಕರಣಗಳಲ್ಲಿ ಸುಳ್ಳು ಹೇಳಿಕೆ ಅಥವಾ ವಂಚನೆ ಮಾಡಿದರೆ ಎಂಬ ಮಾಹಿತಿ ಕೂಡ ಇದೆ. ಹೀಗೆಂದು ಡಿಕ್ಲರೇಶನ್​ನಲ್ಲಿ ಸಹಿ ಮಾಡುವಂತೆ ಚುನಾವಣಾ ಆಯೋಗ ಸೂಚಿಸಿದೆ.
  • ಸಲ್ಲಿಕೆಯಾದ ದಾಖಲೆಗಳ ಪರಿಶೀಲನೆ ನಡೆಸುವುದಾಗಿ ಸ್ಪಷ್ಟ ಪಡಿಸಿರುವ ಚುನಾವಣಾ ಆಯೋಗ, ನಿನ್ನೆ ಬಹಿರಂಗ ಪಡಿಸಿದ ದಾಖಲೆಗಳು ಸುಳ್ಳು ಅಥವಾ ತಪ್ಪು ಎಂದಾದರೆ ಕಾನೂನಾತ್ಮಕ ಕಟ್ಟಳೆ ಎದುರಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿಯ ನಡೆ ಮುಂದೇನು ಎಂಬ ಬಗ್ಗೆ ಭಾರೀ ಚರ್ಚೆ ಶುರುವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.