AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತದಾರರ ಪಟ್ಟಿ ಪರಿಷ್ಕರಣೆ ಹೆಸರಲ್ಲಿ 3.49 ಲಕ್ಷ ರೂ. ವಂಚನೆ: ಖದೀಮರ ಪ್ಲ್ಯಾನ್​​ ಹೇಗಿತ್ತು ಗೊತ್ತಾ?

ಬೆಂಗಳೂರಿನ ಜೀವನ್ ಭೀಮಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯ ಹೆಸರಿನಲ್ಲಿ ಸೈಬರ್ ವಂಚಕರು ವ್ಯಕ್ತಿಯೊಬ್ಬರಿಂದ ₹3.49 ಲಕ್ಷ ಹಣ ಲೂಟಿ ಮಾಡಿರುವ ಆತಂಕಕಾರಿ ಘಟನೆ ನಡೆದಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೈಬರ್ ತಜ್ಞರು ಸೂಚಿಸಿದ್ದಾರೆ. ಈ ವಂಚನೆಯ ಜಾಲ ಮತ್ತು ಸುರಕ್ಷತಾ ಕ್ರಮಗಳ ಬಗ್ಗೆ ವಿವರ ಇಲ್ಲಿದೆ.

ಮತದಾರರ ಪಟ್ಟಿ ಪರಿಷ್ಕರಣೆ ಹೆಸರಲ್ಲಿ 3.49 ಲಕ್ಷ ರೂ. ವಂಚನೆ: ಖದೀಮರ ಪ್ಲ್ಯಾನ್​​ ಹೇಗಿತ್ತು ಗೊತ್ತಾ?
ಸಾಂದರ್ಭಿಕ ಚಿತ್ರImage Credit source: Getty Images
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Aug 03, 2026 | 11:57 AM

Share

ಬೆಂಗಳೂರು, ಆಗಸ್ಟ್​​ 03: ಮತದಾರರ ಪಟ್ಟಿ ಪರಿಷ್ಕರಣೆ ಹೆಸರಲ್ಲಿ ಸೈಬರ್​​ ವಂಚಕರು ವ್ಯಕ್ತಿಯೋರ್ವರಿಂದ ಹಂತ ಹಂತವಾಗಿ 3 ಲಕ್ಷ ರೂಪಾಯಿಗೂ ಅಧಿಕ ಹಣ ವಂಚಿಸಿರುವ ಘಟನೆ ಬೆಂಗಳೂರಿನ (Bengaluru) ಜೀವನ್ ಭೀಮಾನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪಾರ್ಥಸಾರಥಿ ಎಂಬ ವ್ಯಕ್ತಿಗೆ ECI ಅಧಿಕಾರಿ ಎಂದು ಹೇಳಿಕೊಂಡು ವಾಟ್ಸಪ್ ಕರೆ ಮಾಡಿದ್ದ ಖದೀಮ, ಈಗಾಗಲೇ ನೀವು ಸಲ್ಲಿಸಿರೋ SIR ಅರ್ಜಿ ರಿಜೆಕ್ಟ್ ಆಗಿದೆ. ಹೀಗಾಗಿ ಹೊಸ ಅರ್ಜಿ ಹಾಕಬೇಕು ಎಂದು ಲಿಂಕ್ ಒಂದನ್ನ ಕಳುಹಿಸಿದ್ದ. ಆತನ ಮಾತು ನಂಬಿ ಇವರು ಕೂಡ ಆನ್ಲೈನ್ ಮೂಲಕ ಹೆಸರು, ವಿಳಾಸ ಸೇರಿ ಮಾಹಿತಿ ತುಂಬಿದ್ದರು ಎನ್ನಲಾಗಿದೆ.

ಅರ್ಜಿ ಸ್ವೀಕಾರ ಸಂಬಂಧ ಖದೀಮ 5 ರೂಪಾಯಿ ಕೇಳಿದ್ದ. ಕ್ರೆಡಿಟ್​​ ಕಾರ್ಡ್​​ ಮೂಲಕ ಪೇ ಮಾಡಿದಾಗ ಟ್ರಾನ್ಸ್ಯಾಕ್ಷನ್​​ ಫೇಲ್​​ ಆಗಿತ್ತು. ಹೀಗಾಗಿ ಆತ ಕ್ಯೂಆರ್​​ ಕೋಡ್​​ ಕಳುಹಿಸಿದ್ದ ಎನ್ನಲಾಗಿದೆ. ಅದಾದ ಬಳಿಕ ದೂರುದಾರರ ಅಕೌಂಟ್​​ನಿಂದ ಹಂತ ಹಂತವಾಗಿ 3 ಲಕ್ಷದ 49 ಸಾವಿರದ 999 ರೂ. ಕಟ್ ಆಗಿದೆ. ಮೋಸ ಹೋಗಿರೋದು ಗೊತ್ತಾಗುತ್ತಿದ್ದಂತೆ ಪಾರ್ಥಸಾರಥಿ ಅವರು ಜೀವನ್ ಭಿಮಾನಗರ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಸೈಬರ್ ಹೂಡಿಕೆ ವಂಚನೆ ಪ್ರಕರಣಗಳು! ಸಾರ್ವಜನಿಕರಿಗೆ ಪೊಲೀಸರ ಸೂಚನೆ

SIR ಹೆಸರಿನಲ್ಲಿ ನಡೆಯುತ್ತಿರುವ ವಂಚನೆ ಬಗ್ಗೆ ಎಚ್ಚರಿಕೆ

ಸೈಬರಾಬಾದ್ ಪೊಲೀಸರು ಹಾಗೂ ಸೈಬರ್ ಭದ್ರತಾ ತಜ್ಞರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ. ಚುನಾವಣಾ ಆಯೋಗದ ಅಧಿಕಾರಿ, BLO ಅಥವಾ ಮತದಾರರ ಪಟ್ಟಿ ಪರಿಶೀಲನಾ ತಂಡದವರಂತೆ ಕರೆ ಮಾಡಬಹುದು. ವೈಯಕ್ತಿಕ ಮಾಹಿತಿ, ದಾಖಲೆಗಳು ಅಥವಾ OTP ಕೇಳಬಹುದು. SIR ಪರಿಶೀಲನೆಗಾಗಿ ಹಣ ಪಾವತಿಸಲು ಹೇಳಬಹುದು. ವಾಟ್ಸಾಪ್ ಮೂಲಕ ಲಿಂಕ್ ಅಥವಾ ನಕಲಿ ಆ್ಯಪ್ ಕಳುಹಿಸಬಹುದು. ಆದರೆ ಗಮನದಲ್ಲಿರಲಿ, SIR ಪರಿಶೀಲನೆಗೆ ಚುನಾವಣಾ ಆಯೋಗ ಯಾವುದೇ ಹಣ ಕೇಳುವುದಿಲ್ಲ. ಚುನಾವಣಾ ಆಯೋಗ APK ಫೈಲ್ ಅಥವಾ ಆ್ಯಪ್‌ಗಳನ್ನು ವಾಟ್ಸಾಪ್ ಮೂಲಕ ಕಳುಹಿಸುವುದಿಲ್ಲ. ಮತದಾರರ ಪರಿಶೀಲನೆ ವಾಟ್ಸಾಪ್ ಮೂಲಕ ನಡೆಯುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಸುರಕ್ಷಿತವಾಗಿರಲು ಏನು ಮಾಡಬೇಕು?

ಅಪರಿಚಿತರು ಕಳುಹಿಸುವ ಲಿಂಕ್‌ಗಳನ್ನು ಕ್ಲಿಕ್ ಮಾಡಬೇಡಿ ಮತ್ತು ಪರಿಚಯವಿಲ್ಲದ ಆ್ಯಪ್ ಅಥವಾ APK ಫೈಲ್‌ಗಳನ್ನು ಡೌನ್‌ಲೋಡ್ ಮಾಡಲು ಹೋಗಬೇಡಿ. OTP, ಬ್ಯಾಂಕ್ ಮಾಹಿತಿ ಅಥವಾ ವೈಯಕ್ತಿಕ ದಾಖಲೆಗಳನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ. ಯಾವುದೇ ಅನುಮಾನಾಸ್ಪದ ಕರೆ ಬಂದರೆ ತಕ್ಷಣ 1930 ಸಹಾಯವಾಣಿ ಅಥವಾ cybercrime.gov.in ಮೂಲಕ ದೂರು ನೀಡಿ ಎಂದು ತಜ್ಞರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ