AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಹಳದಿ ಬಣ್ಣಕ್ಕೆ ತಿರುಗಿದ ವೃಷಭಾವತಿ ನದಿ ನೀರು!

ಬೆಂಗಳೂರು: ರಾಜ್ಯ ರಾಜಾಧಾನಿ ಬೆಂಗಳೂರಿನಲ್ಲಿ ಹರಿಯುವ ಏಕೈಕ ನದಿಯೆಂದರೆ ವೃಷಭಾವತಿ ನದಿ. ಈ ಹಿಂದೆ ವೃಷಭಾವತಿ ನೀರನ್ನೇ ಬೆಂಗಳೂರಿನ ಜನ ಬಳಸುತ್ತಿದ್ದರು. ಸಾವಿರಾರು ರೈತರಿಗೆ ಈ ನದಿ ವರದಾನವಾಗಿತ್ತು. ಆದ್ರೆ ದಿನದಿಂದ ದಿನಕ್ಕೆ ಬೆಂಗಳೂರಿನಲ್ಲಿ ಕಾರ್ಖಾನೆಗಳು ಹೆಚ್ಚಾದ ಕಾರಣ ನೀರಿನ ಬಣ್ಣವೇ ಬದಲಾಗಿದೆ. ನದಿಯಲ್ಲಿ ಕೊಳಚೆ ನೀರು ಹರಿಯುತ್ತಿರುವ ಕಾರಣ ವೃಷಭಾವತಿ ನದಿ ಉಳಿವಿಗಾಗಿ ಇತ್ತೀಚಿನ ದಿನಗಳಲ್ಲಿ ಹಲವು ಆಂದೋಲನಗಳನ್ನು ಹಮ್ಮಿಕೊಳ್ಳಲಾಗಿತ್ತು. ಆದ್ರೆ, ಇದೀಗ ಮತ್ತೆ ವೃಷಭಾವತಿ ನದಿ ನೀರು ಹಳದಿ ಬಣ್ಣದಲ್ಲಿ ಹರಿಯುತ್ತಿದೆ. ಇದರಿಂದ ವೃಷಭಾವತಿ […]

ಮತ್ತೆ ಹಳದಿ ಬಣ್ಣಕ್ಕೆ ತಿರುಗಿದ ವೃಷಭಾವತಿ ನದಿ ನೀರು!
ಸಾಧು ಶ್ರೀನಾಥ್​
|

Updated on:Sep 23, 2019 | 5:05 PM

Share

ಬೆಂಗಳೂರು: ರಾಜ್ಯ ರಾಜಾಧಾನಿ ಬೆಂಗಳೂರಿನಲ್ಲಿ ಹರಿಯುವ ಏಕೈಕ ನದಿಯೆಂದರೆ ವೃಷಭಾವತಿ ನದಿ. ಈ ಹಿಂದೆ ವೃಷಭಾವತಿ ನೀರನ್ನೇ ಬೆಂಗಳೂರಿನ ಜನ ಬಳಸುತ್ತಿದ್ದರು. ಸಾವಿರಾರು ರೈತರಿಗೆ ಈ ನದಿ ವರದಾನವಾಗಿತ್ತು. ಆದ್ರೆ ದಿನದಿಂದ ದಿನಕ್ಕೆ ಬೆಂಗಳೂರಿನಲ್ಲಿ ಕಾರ್ಖಾನೆಗಳು ಹೆಚ್ಚಾದ ಕಾರಣ ನೀರಿನ ಬಣ್ಣವೇ ಬದಲಾಗಿದೆ. ನದಿಯಲ್ಲಿ ಕೊಳಚೆ ನೀರು ಹರಿಯುತ್ತಿರುವ ಕಾರಣ ವೃಷಭಾವತಿ ನದಿ ಉಳಿವಿಗಾಗಿ ಇತ್ತೀಚಿನ ದಿನಗಳಲ್ಲಿ ಹಲವು ಆಂದೋಲನಗಳನ್ನು ಹಮ್ಮಿಕೊಳ್ಳಲಾಗಿತ್ತು.

ಆದ್ರೆ, ಇದೀಗ ಮತ್ತೆ ವೃಷಭಾವತಿ ನದಿ ನೀರು ಹಳದಿ ಬಣ್ಣದಲ್ಲಿ ಹರಿಯುತ್ತಿದೆ. ಇದರಿಂದ ವೃಷಭಾವತಿ ನದಿ ಪಾತ್ರದ ಗ್ರಾಮಗಳ ಜನರಲ್ಲಿ ಆತಂಕ ಉಂಟಾಗಿದೆ. ಇಷ್ಟು ದಿನಗಳವರೆಗೆ ಕಪ್ಪು ಬಣ್ಣದಲ್ಲಿ ಹರಿಯುತ್ತಿದ್ದ ನೀರು, ಇದೀಗ ಹಳದಿ ಬಣ್ಣದಲ್ಲಿ ಹರಿಯುತ್ತಿದೆ. ಇದಕ್ಕೆ ಪ್ರಮುಖ ಕಾರಣ ನದಿ ಪಾತ್ರದ ಕಾರ್ಖಾನೆಗಳ ರಾಸಾಯನಿಕ ಮಿಶ್ರಿತ ನೀರು. ಬೆಂಗಳೂರು ಹೊರವಲಯದ ಅಂಚೆಪಾಳ್ಯ, ಕುಂಬಳಗೋಡು ಸಮೀಪದ ಕಾರ್ಖಾನೆಗಳು ರಾಸಾಯನಿಕ ಮಿಶ್ರಿತ ನೀರನ್ನು ನದಿಗೆ ಬಿಡುತ್ತಿವೆ.

ವೃಷಭಾವತಿ ನದಿ ಪುನಶ್ಚೇತನಕ್ಕೆ ಇತ್ತೀಚೆಗಷ್ಟೇ ಮ್ಯಾರಥಾನ್ ಆಯೋಜಿಸಲಾಗಿತ್ತು. ಈ ಮೂಲಕ ವೃಷಭಾವತಿ ನದಿ ಉಳಿಸುವ ಬಗ್ಗೆ ಅರಿವು ಮೂಡಿಸಲಾಗಿತ್ತು. ಆದ್ರೆ ಇದೀಗ ಮತ್ತೆ ನದಿಗೆ ಕಾರ್ಖಾನೆಗಳು ರಾಸಾಯನಿಕ ಮಿಶ್ರಿತ ನೀರನ್ನು ಬಿಟ್ಟಿವೆ.

Published On - 5:03 pm, Mon, 23 September 19

ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ?
ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ?
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ಅಶೋಕ್ ಗಂಭೀರ ಆರೋಪ
ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ಅಶೋಕ್ ಗಂಭೀರ ಆರೋಪ
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್